ಶ್ರೀನಿವಾಸಪುರ ಕಾಂಗ್ರೆಸ್ ನಾಯಕನ ಕೊಲೆ, 19 ಮಂದಿಗೆ ಜೀವಾವಧಿ ಶಿಕ್ಷೆ
2008ರಲ್ಲಿ ಕೋಲಾರ ಜಿಲ್ಲೆ ಶ್ರೀನಿವಾಸಪುರದಲ್ಲಿ ನಡೆದಿದ್ದ ಕಾಂಗ್ರೆಸ್ ಮುಖಂಡ ಪೆರುಮಾಳ್ ಕೊಲೆ ಪ್ರಕರಣದಲ್ಲಿ ಹತ್ತೊಂಬತ್ತು ಮಂದಿಗೆ ಜಿವವಧಿ ಶಿಕ್ಷೆ ವಿಧಿಸಿ ಕೊಲರ ಜಿಲ್ಲಾ ಕೋರ್ಟ್ ಶುಕ್ರವಾರ ಆದೇಶ ನೀಡಿದೆ
ಕೋಲಾರ, ಜನವರಿ 14: ಕಾಂಗ್ರೆಸ್ ಮುಖಂಡ ಪೆರುಮಾಳ್ ಕೊಲೆ ಪ್ರಕರಣದಲ್ಲಿ 19 ಆರೋಪಿಗಳಿಗೆ ಜೀವಾವಧಿ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ, ಶುಕ್ರವಾರ ಕೋಲಾರ ಜಿಲ್ಲಾ ಕೋರ್ಟ್ ಆದೇಶ ನೀಡಿದೆ. ಮೇ 25, 2008ರಲ್ಲಿ ಜೆಡಿಎಸ್ ಅಭ್ಯರ್ಥಿ ಜಿ.ಕೆ.ವೆಂಕಟಶಿವಾರೆಡ್ಡಿ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಕ್ಷೇತ್ರದಿಂದ ಜಯ ಗಳಿಸಿದ್ದರು.
ಆಗ ಕಾಂಗ್ರೆಸ್ ನಿಂದ ಪೆರುಮಾಳ್ ಸ್ಪರ್ಧಿಸಿದ್ದರು. ಜೆಡಿಎಸ್ ಕಾರ್ಯಕರ್ತರು ಪೆರುಮಾಳ್ ಮನೆ ಮುಂದೆ ಪಟಾಕಿ ಸಿಡಿಸಿ, ವಿಜಯೋತ್ಸವ ಆಚರಿಸಲು ನಿರ್ಧರಿಸಿದರು. ಆ ಶಬ್ದ ಕೇಳಿ ಮನೆಯಿಂದ ಆಚೆ ಬಂದ ಪೆರುಮಾಳ್ ಅವರ ತಾಯಿ, ಇದೇಕೆ ಹೀಗೆ ಮಾಡುತ್ತೀರಿ ಎಂದು ಕೇಳಿದರು. ಅಲ್ಲಿದ್ದ ಒಬ್ಬ ವ್ಯಕ್ತಿ ಆಕೆಯನ್ನು ತಳ್ಳಿದಾಗ, ಕೋಪಗೊಂಡು ಮನೆಯಿಂದ ಆಚೆ ಬಂದ ಪೆರುಮಾಳ್ ಮಾತಿನ ಚಕಮಕಿ ನಡೆಸಿದಾಗ, ಜೆಡಿಎಸ್ ಕಾರ್ಯಕರ್ತರು ಪೆರುಮಾಳ್ ರನ್ನು ಕೊಲೆ ಮಾಡಿದ್ದರು.[ಕೋಲಾರ: ಚಲಿಸುತ್ತಿದ್ದ ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ]
ಮೊದಲಿಗೆ ಈ ಪ್ರಕರಣದಲ್ಲಿ ಇಪ್ಪತ್ನಾಲ್ಕು ಮಂದಿಯನ್ನು ಹೆಸರಿಸಲಾಗಿತ್ತು. ಇಬ್ಬರು ವಿಚಾರಣೆ ನಡೆಯುವಾಗಲೇ ತೀರಿಕೊಂಡಿದ್ದರು. ಶುಕ್ರವಾರ ಮೂವರನ್ನು ಖುಲಾಸೆ ಮಾಡಲಾಗಿದೆ. ಡಿಸೆಂಬರ್ 2010ರಲ್ಲಿ ಕೋಲಾರ ಗ್ರಾಮಾಂತರ ಪೊಲೀಸರಿಗೆ ವಿಜಯ್ ಕುಮಾರ್ ಎಂಬ ಜೆಡಿಎಸ್ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದರು.

ಶ್ರೀನಿವಾಸಪುರದ ವಿಜಯ್ ಕುಮಾರ್ ಕೊಲೆಗೆ ರಾಜಕೀಯ ವೈಷಮ್ಯ ಕಾರಣ ಎಂದು ತಿಳಿದುಬಂದಿತ್ತು. ಆ ನಂತರ ತಿಳಿದುಬಂದ ಮಾಹಿತಿ ಪ್ರಕಾರ ಕಾಂಗ್ರೆಸ್ ನಾಯಕ ಪೆರುಮಾಳ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ವಿಜಯ್ ಕುಮಾರ್ ಎಂಬ ಸಂಗತಿ. ವಿಚಾರಣೆ ಎದುರಿಸುತ್ತಿದ್ದ ವಿಜಯ್ ಕುಮಾರ್ ಅಕ್ಟೋಬರ್ 2010ರವರೆಗೆ ಜೈಲಿನಲ್ಲಿದ್ದ. ಆ ನಂತರ ಜಾಮೀನು ಪಡೆದು ಹೊರಬಂದಿದ್ದ ಆತನನ್ನು ಡಿಸೆಂಬರ್ 2010ರಲ್ಲಿ ಕೊಲೆ ಮಾಡಲಾಗಿತ್ತು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications