ಕೋಲಾರ: ಅನಾಥಾಶ್ರಮದ 27 ಮಕ್ಕಳು ಹಾಗೂ 33 ಗಾರ್ಮೆಂಟ್ಸ್ ಸಿಬ್ಬಂದಿಗೆ ಕೊರೊನಾ ಪಾಸಿಟಿವ್
ಕೋಲಾರ, ಏಪ್ರಿಲ್ 5: ಜಿಲ್ಲೆಯ ಬಂಗಾರಪೇಟೆ ತಾಲ್ಲೂಕು ಅತ್ತಿಗಿರಿಕುಪ್ಪ ಬಳಿಯಿರುವ ಅನಾಥಾಶ್ರಮದ 27 ಜನ ಮಕ್ಕಳಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ.
ಬಂಗಾರಪೇಟೆ ತಾಲ್ಲೂಕು ಅತ್ತಿಗಿರಿಕುಪ್ಪ ಬಳಿ ಬಜೇರಿಯಾ ಟ್ರಸ್ಟ್ ನಿಂದ ನಡೆಸುತ್ತಿರುವ ಆಶ್ರಮದಲ್ಲಿ 60ಕ್ಕೂ ಹೆಚ್ಚು ಜನ ಮಕ್ಕಳಿದ್ದಾರೆ. ಮೊದಲು ಒಂದು ವಿದ್ಯಾರ್ಥಿನಿಗೆ ಜ್ವರ ಹಾಗೂ ಕೆಮ್ಮು ಕಾಣಿಸಿದ ಹಿನ್ನೆಲೆ ಕೋವಿಡ್ ಪರೀಕ್ಷೆ ಮಾಡಿಸಲಾಗಿದೆ.
ಪರೀಕ್ಷೆಯಲ್ಲಿ ಕೋವಿಡ್ ಪಾಸಿಟಿವ್ ದೃಢವಾದ ಹಿನ್ನೆಲೆ ಎಲ್ಲಾ ಮಕ್ಕಳಿಗೆ ಪರೀಕ್ಷೆ ಮಾಡಲಾಗಿತ್ತು. ಸೋಮವಾರ 26 ಜನ ಮಕ್ಕಳಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ.

ಎಲ್ಲ ಮಕ್ಕಳನ್ನು ಕೋಲಾರ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಆರೋಗ್ಯ ಇಲಾಖೆ ಅಧಿಕಾರಿಗಳು ಅನಾಥ ಆಶ್ರಮವನ್ನು ಕಂಟೈನ್ಮೆಂಟ್ ವಲಯವನ್ನಾಗಿ ಮಾಡಿದ್ದಾರೆ.
33 ಗಾರ್ಮೆಂಟ್ಸ್ ಸಿಬ್ಬಂದಿಗೂ ಕೊರೊನಾ
ಇನ್ನು, ಕೋಲಾರದ ಗಾರ್ಮೆಂಟ್ಸ್ ಸಿಬ್ಬಂದಿಗಳಿಗೂ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದೆ. ಬೆತ್ತನಿ ಗ್ರಾಮದಲ್ಲಿರುವ ಗಾರ್ಮೆಂಟ್ಸ್ನ 33 ಸಿಬ್ಬಂದಿಗಳಿಗೆ ಪಾಸಿಟಿವ್ ಕಾಣಿಸಿಕೊಂಡಿದೆ.
ಒಟ್ಟು ಸಾವಿರ ಜನರಿಗೆ ಕೊರೊನಾ ಪರೀಕ್ಷೆ ಮಾಡಲಾಗಿದ್ದು, 33 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. ಪ್ರಾಥಮಿಕ ಸಂಪರ್ಕ ಇರುವವರು ಹೋಂ ಕ್ವಾರಂಟೈನ್ ಆಗಿದ್ದು, ಉಳಿದವರು ಕೋಲಾರ ಜಿಲ್ಲಾಸ್ಪತ್ರೆಯ ಕ್ವಾರಂಟೈನ್ ಕೇಂದ್ರಕ್ಕೆ ಶಿಫ್ಟ್ ಮಾಡಲಾಗಿದೆ. ಎರಡು ದಿನಗಳ ಕಾಲ ಗಾರ್ಮೆಂಟ್ಸ್ ಅನ್ನು ಕಂಟೈನ್ಮೆಂಟ್ ವಲಯದಲ್ಲಿರಿಸಲು ನಿರ್ಧಾರಿಸಲಾಗಿದೆ.
ಕೋಲಾರ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಕೇಸ್ ಹೆಚ್ಚಾಗುತ್ತಿದೆ. ಜನರಲ್ಲಿ ಕೊರೊನಾ ಭಯ ಅನ್ನೋದು ಇಲ್ಲದಂತಾಗಿದೆ ಎಂದು ಡಿಎಚ್ಒ ಡಾ.ವಿಜಯ್ ಕುಮಾರ್ ಹೇಳಿದರು. ಸೋಮವಾರ ಜಿಲ್ಲೆಯಲ್ಲಿ ಒಟ್ಟು 112 ಜನರಲ್ಲಿ ಕೊರೊನಾ ಕಾಣಿಸಿಕೊಂಡಿದೆ ಎಂದು ಮಾಹಿತಿ ನೀಡಿದರು.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications