ಕೋಲಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಬರುತ್ತಿದ್ದ ವಿದ್ಯಾರ್ಥಿ ಸಾವು

|
Google Oneindia Kannada News

ಕೋಲಾರ, ಜೂನ್ 18 : ದ್ವಿತೀಯ ಪಿಯುಸಿ ಆಂಗ್ಲ ಭಾಷೆಯ ಪರೀಕ್ಷೆ ಬರೆದು ಮನೆಗೆ ವಾಪಸ್ ಆಗುತ್ತಿದ್ದ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾನೆ. ಮೂವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Recommended Video

Solar Eclipse June 21 2020 : Sunday darshan timing changed in Kukke Subramanya | Oneindia Kannada

ಕೋಲಾರ ತಾಲೂಕಿನ ರೋಣಿಹಾಳ ಗ್ರಾಮದ ಮಂಜುನಾಥ ರೂಡಗಿ ಮೃತಪಟ್ಟ ವಿದ್ಯಾರ್ಥಿ. ಗುರುವಾರ ಪರೀಕ್ಷೆ ಬರೆದು ಬೈಕ್‌ನಲ್ಲಿ ಮನೆಗೆ ವಾಪಸ್ ಆಗುವಾಗ ಕಾರು, ಬೈಕ್ ನಡುವೆ ನಡುವೆ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದಾನೆ.

 ಚಾಮರಾಜನಗರದಲ್ಲಿ ಅಪಘಾತ; ಸ್ಥಳದಲ್ಲೇ ಮೂವರ ಸಾವು, 15 ಮಂದಿಗೆ ಗಾಯ ಚಾಮರಾಜನಗರದಲ್ಲಿ ಅಪಘಾತ; ಸ್ಥಳದಲ್ಲೇ ಮೂವರ ಸಾವು, 15 ಮಂದಿಗೆ ಗಾಯ

ಎನ್‌ಎಚ್‌ 218ರ ಮಲಘಾನ ಕ್ರಾಸ್‌ ಬಳಿ ಈ ಅಪಘಾತ ನಡೆದಿದೆ. ಈ ಅಪಘಾತದಲ್ಲಿ ವಿದ್ಯಾರ್ಥಿಗಳಾದ ಸಂಗು ಜಮಖಂಡಿ, ನೀಲಪ್ಪ ಜಮಖಂಡಿ ಮತ್ತು ರಮೇಶ್ ಮೋಹಿತೆ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕರ್ನಾಟಕದ 11,760 ಕಿ.ಮೀ ರಸ್ತೆ ಮೇಲ್ದರ್ಜೆಗೆ: ಗ್ರಾಮೀಣ ರಸ್ತೆಗಳೆಷ್ಟು? ಕರ್ನಾಟಕದ 11,760 ಕಿ.ಮೀ ರಸ್ತೆ ಮೇಲ್ದರ್ಜೆಗೆ: ಗ್ರಾಮೀಣ ರಸ್ತೆಗಳೆಷ್ಟು?

2nd PUC Student Killed In Road Accident

ಅಪಘಾತದ ಬಳಿಕ ಕಾರು ಚಾಲಕ ಪರಾರಿಯಾಗಿದ್ದು, ಹುಡುಕಾಟ ನಡೆದಿದೆ. ಕೋಲಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶವದ ಮರಣೋತ್ತರ ಪರೀಕ್ಷೆ ನಡೆಸಿ, ಕುಟುಂಬದವರಿಗೆ ಹಸ್ತಾಂತರ ಮಾಡಲಾಗಿದೆ.

ಮಂಗಳೂರಿನಲ್ಲಿ ಅಂಡರ್ ಪಾಸ್ ಉದ್ಘಾಟನೆಗೆ ಮುನ್ನವೇ ಕುಸಿದ ರಸ್ತೆಮಂಗಳೂರಿನಲ್ಲಿ ಅಂಡರ್ ಪಾಸ್ ಉದ್ಘಾಟನೆಗೆ ಮುನ್ನವೇ ಕುಸಿದ ರಸ್ತೆ

ಲಾಕ್ ಡೌನ್ ಘೋಷಣೆಯಾದ ಕಾರಣ ಮಾರ್ಚ್‌ನಲ್ಲಿ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಆಂಗ್ಲ ಭಾಷೆಯ ಪರೀಕ್ಷೆ ಮುಂದೂಡಲಾಗಿತ್ತು. ಗುರುವಾರ ಕರ್ನಾಟಕದಲ್ಲಿ ಪರೀಕ್ಷೆ ನಡೆದಿತ್ತು. ಮಂಜುನಾಥ್ ಪರೀಕ್ಷೆ ಬರೆಯಲು ಹೋಗಿದ್ದ.

English summary
Kolar based Manjunath a 2nd PUC student killed in road accident on June 18, 2020. He is on the way of home after attending the English exam.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X