ಕೋಲಾರದಲ್ಲೂ ಗೋರಖ್ ಪುರ ಮಾದರಿ ದುರಂತ: 3 ತಿಂಗಳಲ್ಲಿ 33 ಸಾವು!
ಕೋಲಾರ, ಆಗಸ್ಟ್ 23: ಉತ್ತರ ಪ್ರದೇಶ ಗೋರಖ್ ಪುರದಲ್ಲಿ ಸಂಭವಿಸಿದ ನೂರಕ್ಕೂ ಹೆಚ್ಚು ಮಕ್ಕಳ ಸರಣಿ ಸಾವಿನ ದುರಂತ ಮಾಸುವ ಮುನ್ನವೇ ಕರ್ನಾಟಕದ ಕೋಲಾರ ಜಿಲ್ಲೆಯಲ್ಲೂ ಇಂಥದೇ ದುರಂತ ಸಂಭವಿಸಿರುವುದು ವರದಿಯಾಗಿದೆ.
ಆಗಸ್ಟ್ 21 ರಂದು ಕೋಲಾರದ ಶ್ರೀನಿವಾಸಪುರದ ಶ್ರೀ ನರಸಿಂಹರಾಜ ಸರ್ಕಾರಿ ಆಸ್ಪತ್ರೆಯಲ್ಲಿ ಮೂವರು ಮಕ್ಕಳು ಸಾವಿಗೀಡಾದ್ದು, ಇದಕ್ಕೆ ಕಾರಣ ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯ ಎನ್ನಲಾಗುತ್ತಿದೆ. ಅಲ್ಲದೇ, ಜಿಲ್ಲೆಯಲ್ಲಿ ಕಳೆದ ಮೂರು ತಿಂಗಳಲ್ಲಿ 33 ಮಕ್ಕಳು ಸಾವಿಗೀಡಾದ ಕುರಿತು ಮಾಹಿತಿ ಲಭಿಸಿದ್ದು, ಇದು ಗೋರಖ್ ಪುರ ಮಾದರಿ ದುರಂತವೇ ಎಂಬ ಬಗ್ಗೆಯೂ ಅನುಮಾನ ಎದ್ದಿದೆ.

ಆರೋಗ್ಯ ಸಚಿವ ರಮೇಶ್ ಕುಮಾರ್ ಅವರ ಕ್ಷೇತ್ರದಲ್ಲೇ ಇಂಥ ದುರಂತ ಸಂಭವಿಸಿರುವುದು ಮತ್ತಷ್ಟು ಆಕ್ರೋಶವನ್ನು ಹುಟ್ಟುಹಾಕಿದೆ. ಈ ಕುರಿತು ಮೂರು ದಿನಗಳೊಳಗೆ ಸವಿವರ ಮಾಹಿತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಆಸ್ಪತ್ರೆ ಆಡಳಿತ ಮಂಡಳಿ, 'ಆಸ್ಪತ್ರೆಯಲ್ಲಿ ಸಿಬ್ಬಂದಿಗಳ ಕೊರತೆಯಾಗಲಿ, ಉಪಕರಣದ ಅಭಾವವಾಗಲಿ ಇಲ್ಲ. ಹುಟ್ಟುತ್ತಲೇ ಕೆಲವು ಗಂಭೀರ ಸಮಸ್ಯೆ ಹೊತ್ತು ಹುಟ್ಟುತ್ತಿರುವ ಮಕ್ಕಳು ಮಾತ್ರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪುತ್ತಿದ್ದಾರೆ. ಆಸ್ಪತ್ರೆಯ ಬೇಜವಾಬ್ದಾರಿ, ವೈದ್ಯರ ನಿರ್ಲಕ್ಷ್ಯ ಎಂದು ಈ ಘಟನೆಯನ್ನು ವ್ಯಾಖ್ಯಾನಿಸುವುದು ತಪ್ಪು' ಎಂದು ಆರೋಪವನ್ನು ತಳ್ಳಿಹಾಕಿದೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election












Click it and Unblock the Notifications