ಅಬಕಾರಿ ಸಚಿವರ ವಿರುದ್ಧ ಕಳಪೆ ಆಹಾರ ಪದಾರ್ಥ ವಿತರಣೆ ಆರೋಪ
ಕೋಲಾರ, ಮೇ 25: ಜನರ ಸಂಕಷ್ಟ ನಿವಾರಣೆಗೆಂದು ಜನಪ್ರತಿನಿಧಿಗಳು ಆಹಾರ ಪದಾರ್ಥಗಳನ್ನು ವಿತರಣೆ ಮಾಡುತ್ತಿದ್ದಾರೆ. ಆದರೆ ಹಾಗೆ ವಿತರಿಸುವಾಗ ಆಹಾರ ಪದಾರ್ಥಗಳ ಗುಣಮಟ್ಟದತ್ತ ನಿಗಾ ವಹಿಸುತ್ತಿಲ್ಲ ಎಂಬ ಆರೋಪಗಳೂ ಕೇಳಿಬರುತ್ತಿವೆ.
ಕೋಲಾರದಲ್ಲೂ ಜಿಲ್ಲಾ ಉಸ್ತುವಾರಿ ಸಚಿವ ಎಚ್ ನಾಗೇಶ್ ವಿರುದ್ಧ ಕಳಪೆ ಆಹಾರ ಪದಾರ್ಥಗಳ ವಿತರಣೆ ಆರೋಪ ಕೇಳಿಬಂದಿದೆ. ಸಚಿವರು ಹುಳು ಬಿದ್ದ ದಿನಸಿ ಪದಾರ್ಥಗಳನ್ನು ವಿತರಣೆ ಮಾಡಿದ್ದಾರೆ ಎಂದು ಕೋಲಾರದಲ್ಲಿ ಜನರು ಆಕ್ರೋಶಗೊಂಡಿದ್ದಾರೆ.
ತಮ್ಮ ಸ್ವ ಕ್ಷೇತ್ರ ಮುಳಬಾಗಿಲು ತಾಲೂಕಿನ ಕಂಟೋನ್ಮೆಂಟ್ ಪ್ರದೇಶದ ಜನರಿಗೆ ಕಳಪೆ ಆಹಾರ ಕಿಟ್ ವಿತರಿಸಿದ್ದಾರೆ ಎಂದು ಕಿಟ್ ಪಡೆದಕೊಂಡ ಜನರು ಆರೋಪ ಮಾಡಿದ್ದಾರೆ. ಕೋಲಾರದ ಮುಳಬಾಗಿಲು ತಾಲೂಕಿನಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಕಂಟೋನ್ಮೆಂಟ್ ಝೋನ್ ಪ್ರದೇಶದಲ್ಲಿ ಸಚಿವ ನಾಗೇಶ್ ಹಾಗೂ ಬೆಂಬಲಿಗರು ಆಹಾರ ಕಿಟ್ ವಿತರಣೆ ಮಾಡಿದ್ದರು.

ಆದರೆ ಇವು ಕಳಪೆ ಆಹಾರ ಪದಾರ್ಥಗಳಾಗಿವೆ. ಕೇವಲ ಪ್ರಚಾರಕ್ಕಾಗಿ ಹುಳಬಿದ್ದ ಅಕ್ಕಿ ಸೇರಿದಂತೆ ಕಳಪೆ ದಿನಸಿ ಪದಾರ್ಥಗಳು ನೀಡುತ್ತಿದ್ದಾರೆ ಎಂದು ಸಚಿವರು ಹಾಗೂ ಮುಖಂಡರ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
-
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ












Click it and Unblock the Notifications