ಕೋಲಾರ: ಮುಷ್ಕರದ ಮಧ್ಯೆ ಬಸ್ ಓಡಿಸಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಚಾಲಕನಿಗೆ ಶ್ರದ್ಧಾಂಜಲಿ
ಕೋಲಾರ, ಏಪ್ರಿಲ್ 9: ಕಳೆದ ಮೂರು ದಿನಗಳಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದು, ಬಹುತೇಕ ಕಡೆ ಸರ್ಕಾರಿ ಬಸ್ಸುಗಳು ಓಡಾಡುತ್ತಿಲ್ಲ.
ಈ ಮುಷ್ಕರದ ಮಧ್ಯೆ ಸಾರಿಗೆ ಬಸ್ ಓಡಿಸಿದ್ದಕ್ಕೆ ಚಾಲಕ ಮರಣ ಹೊಂದಿದ್ದಾನೆಂದು ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಾಕಿ ಕೆಲವು ಕಿಡಿಗೇಡಿಗಳು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನಲ್ಲಿ ಬಸ್ ಚಾಲಕ ಸತ್ಯಪ್ಪ ಸಾವನ್ನಪ್ಪಿದ್ದಾರೆಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿ ವ್ಯಂಗ್ಯ ಮಾಡಲಾಗಿದೆ.

ಸಾರಿಗೆ ಬಸ್ ಓಡಿಸಬೇಡ ಎಂದು ಶ್ರೀನಿವಾಸ್ ಎನ್ನುವವರಿಂದ ಚಾಲಕ ಸತ್ಯಪ್ಪನ ಮೇಲೆ ಪೆಟ್ರೋಲ್ ಸುರಿದು ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಶ್ರೀನಿವಾಸಪುರ ತಾಲ್ಲೂಕಿನ ರೋಜರನಹಳ್ಳಿ ಬಳಿ ಬಸ್ ನಿಂತಾಗ ಬೆದರಿಕೆ ಶ್ರೀನಿವಾಸ್ ಹಾಕಿದ್ದಾರೆ.
ದೌರ್ಜನ್ಯ ಎಸಗಿದ ಆರೋಪದಡಿ ಸಾರಿಗೆ ನೌಕರ ಶ್ರೀನಿವಾಸ್ ನನ್ನು ಸಾರಿಗೆ ಇಲಾಖೆ ಅಮಾನತು ಮಾಡಿದ್ದು, ಅಲ್ಲದೆ ಶ್ರೀನಿವಾಸ್ ವಿರುದ್ಧ ಚಾಲಕ ಸತ್ಯಪ್ಪ ದೂರು ನೀಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಸಾವನ್ನಪ್ಪಿರುವ ಬಗ್ಗೆ ಹಾಕಿರುವವರ ವಿರುದ್ಧ ಕ್ರಮಕ್ಕೆ ಸಾರಿಗೆ ನೌಕರ ಸತ್ಯಪ್ಪ ಆಗ್ರಹಿಸಿದ್ದು, ಸತ್ಯಪ್ಪ ಹಾಗೂ ಶ್ರೀನಿವಾಸ್ ಇಬ್ಬರೂ ಶ್ರೀನಿವಾಸಪುರ ಡಿಪೋದಲ್ಲಿ ಚಾಲಕರಾಗಿದ್ದಾರೆ. ಕೋಲಾರ ಜಿಲ್ಲೆ ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Recommended Video
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications