ಮದನಪಲ್ಲಿ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಆಂಧ್ರ ಮೂಲದ ದಂಪತಿ ಸಾವು

ಮಗಳನ್ನು ದೇವನಹಳ್ಳಿ ವಿಮಾನ ನಿಲ್ದಾಣಕ್ಕೆ ಬಿಟ್ಟು ವಾಪಸ್​ ಬರುವ ವೇಳೆಯಲ್ಲಿ ಮದನಪಲ್ಲಿ-ಬೆಂಗಳೂರು ಹೆದ್ದಾರಿ ಕಾಮಗಾರಿ ಕಾರು ಅಪಘಾತ ಸಂಭವಿಸಿದ್ದು ಆಂಧ್ರ ಮೂಲದ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕೋಲಾರ, ಮಾರ್ಚ್ 18: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಲಕ್ಷ್ಮೀಪುರ ಕ್ರಾಸ್ ಬಳಿ ಟೊಯೊಟಾ ಇಟಿಯಸ್​ ಕಾರು ಅಪಘಾತವಾಗಿದ್ದು, ಕಾರಿನಲ್ಲಿದ್ದ ಆಂಧ್ರ ಪ್ರದೇಶದ ಮದನಪಲ್ಲಿ ಮೂಲದ ಶಫೀ (55) ಹಾಗೂ ಶಮಾ (50)ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೆಳ್ಳಂಬೆಳಿಗ್ಗೆ ತಮ್ಮ ಮಗಳನ್ನು ವಿಮಾನ ನಿಲ್ದಾಣಕ್ಕೆ ಬಿಟ್ಟು ವಾಪಾಸ್‌​ ಬರುವಾಗ ದುರ್ಘಟನೆ ಸಂಭವಿಸಿದೆ. ಮದನಪಲ್ಲಿ-ಬೆಂಗಳೂರು ಹೆದ್ದಾರಿ ಕಾಮಗಾರಿ ನಡೆಯುತ್ತಿದೆ. ಈ ವೇಳೆ ಸರಿಯಾದ ಸೈನ್​ ಬೋರ್ಡ್​ಗಳಿಲ್ಲ. ಕಳೆದ ರಾತ್ರಿ ಬೇರೆ ಮಳೆ ಸುರಿದ ಹಿನ್ನೆಲೆ ರಸ್ತೆ ಬದಿಯಲ್ಲಿ ಕೆಸರು ಹೆಚ್ಚಾಗಿದೆ.

Car Accident In Madanapalle-Bengaluru Highway

ಜೊತೆಗೆ ಬೆಳಗಿನ ಜಾವ ನಿದ್ದೆಯ ಮಂಪರಿನಲ್ಲಿ ಕಾರು ಚಲಾಯಿಸಿದ್ದಾರೆ. ಈ ವೇಳೆ ಮದನಪಲ್ಲಿಯತ್ತ ತೆರಳುತ್ತಿದ್ದ ಕಾರು ರಸ್ತೆ ಬಿಟ್ಟು ಸ್ವಲ್ಪ ಪಕ್ಕಕ್ಕೆ ಇಳಿದಿದೆ. ರಸ್ತೆ ಬಿಟ್ಟು ಇಳಿದ ಕಾರು ನೇರವಾಗಿ ರಸ್ತೆಯ ಪಕ್ಕದಲ್ಲಿದ್ದ ದೊಡ್ಡ ಹಳ್ಳಕ್ಕೆ ಬಿದ್ದಿದೆ. ಈ ವೇಳೆ ಹಳ್ಳದೊಳಗೆ ಇದ್ದ ದೊಡ್ಡ ಕಲ್ಲು ಬಂಡೆಗೆ ಕಾರು ಡಿಕ್ಕಿಯಾಗಿದೆ.

ಕಾ​ನರಿಲ್ಲಿದ್ದ ಎರಡೂ ಏರ್​ ಬ್ಯಾಗ್ ಓಪನ್​ ಆಗಿತ್ತಾದರೂ ಪಲ್ಟಿಯಾದ ರಭಸಕ್ಕೆ ಇಬ್ಬರ ತಲೆಗೆ ಬಲವಾದ ಪೆಟ್ಟು ಬಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಕಾರು ರಸ್ತೆ ಬಿಟ್ಟು ಹಳ್ಳಕ್ಕೆ ಬಿದ್ದ ಕಾರಣ ಯಾರೂ ಗಮನಿಸಿಲ್ಲ. ಬೆಳಿಗ್ಗೆ 7.30ರ ಸುಮಾರಿನಲ್ಲಿ ಕಾರು ಬಿದ್ದಿರುವುದನ್ನು ಗಮನಿಸಿ ಗೌನಿಪಲ್ಲಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ಸ್ಥಳಕ್ಕೆ ಬಂದ ಪೊಲೀಸರು ಕ್ರೇನ್​ ಮೂಲಕ ಕಾರು ಮೇಲೆತ್ತಿ ನಂತರ ಮೃತರ ಶವಗಳ ಗುರುತು ಪತ್ತೆ ಮಾಡಿ ಶವಗಳನ್ನು ಶ್ರೀನಿವಾಸಪುರ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ.

ಮೃತ ಶಫೀಉಲ್ಲಾ ಹಾಗೂ ಶಮಾ ದಂಪತಿಗೆ ಮೂರು ಜನ ಹೆಣ್ಣು ಮಕ್ಕಳಿದ್ದರು. ಶಫೀ ಸಿವಿಲ್​ ಎಂಜಿನಿಯರ್ ಆಗಿದ್ದು ಆಂಧ್ರ, ಕರ್ನಾಟಕ ಸೇರಿದಂತೆ ಹಲವೆಡೆ ರಸ್ತೆ, ಬ್ರಿಡ್ಜ್​ ಸೇರಿದಂತೆ ಹಲವು ಗುತ್ತಿಗೆ ಕಾಮಗಾರಿಗಳನ್ನು ಮಾಡಿಸುತ್ತಿದ್ದವರು. ಇನ್ನು ಶಫೀ ಶಫೀ ಮೂರು ಜನ ಹೆಣ್ಣು ಮಕ್ಕಳ ಪೈಕಿ ಇಬ್ಬರು ಮಕ್ಕಳಿಗೆ ಮದುವೆಯಾಗಿತ್ತು.

ಮೂರನೇ ಮಗಳು ಶಿಫಾ ಈಜಿಪ್ಟ್​ನಲ್ಲಿ ಕೆಲಸ ಮಾಡುತ್ತಿದ್ದು, ರಜೆಯ ಮೇಲೆ ಊರಿಗೆ ಬಂದಿದ್ದರು. ವಾಪಸ್‌ ತೆರಳ ಬೇಕಿದ್ದು, ಬೆಳಗ್ಗೆ 7 ಗಂಟೆಗೆ ದೇವನಹಳ್ಳಿ ವಿಮಾನ ನಿಲ್ದಾಣಕ್ಕೆ ಮಗಳನ್ನು ಬಿಟ್ಟು ವಾಪಸ್​ ಬರುವ ವೇಳೆಯಲ್ಲಿ ಈ ಅಪಘಾತವಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಇನ್ನು ಅಪಘಾತದ ವಿಷಯವನ್ನು ಏರ್​ಲೈನ್ಸ್​ ಮೂಲಕ ಈಜಿಪ್ಟ್​ಗೆ ತೆರಳುತ್ತಿದ್ದ ಮಗಳಿಗೂ ತಿಳಿಸಿಲಾಗಿದೆ.

ಮದನಪಲ್ಲಿ ಮತ್ತು ಬೆಂಗಳೂರು ನಡುವಿನ ಹೆದ್ದಾರಿ ಕಾಮಗಾರಿ ನಡೆಯುತ್ತಿದೆ. ಈ ವೇಳೆ ಸರಿಯಾದ ಲೈಟ್​ ವ್ಯವಸ್ಥೆ ಇಲ್ಲದೆ. ಸರಿಯಾದ ಸೈನ್​ ಬೋರ್ಡ್​ ಇಲ್ಲದ ಹಿನ್ನೆಲೆಯಲ್ಲಿ ಇದೇ ರೀತಿಯ ಹಲವು ಅಪಘಾತಗಳು ನಡೆಯುತ್ತಿವೆ. ಜೊತೆಗೆ ಕಾಮಗಾರಿ ಕೂಡ ಬಹಳ ನಿಧಾನವಾಗಿ ಮಾಡಲಾಗುತ್ತಿದೆ.

ಅಪಘಾತಕ್ಕೆ ಹೆದ್ದಾರಿ ಕಾಮಗಾರಿ ಮಾಡುತ್ತಿರುವ ಗುತ್ತಿಗೆದಾರನ ನಿರ್ಲ್ಯಕ್ಷವೇ ಕಾರಣ ಎನ್ನುವುದು ಸ್ಥಳೀಯರು ಹಾಗೂ ಮೃತ ಸಂಬಂಧಿಕರ ಆರೋಪವಾಗಿದೆ. ಈ ಬಗ್ಗೆ ಸಂಬಂಧಪಟ್ಟವರ ಮೇಲೆ ಪ್ರಕರಣ ದಾಖಲು ಮಾಡಬೇಕು ಎಂದು ಮದನಪಲ್ಲಿ ಮಾಜಿ ಶಾಸಕ ಶಹಜಹಾನ್​ ಆಗ್ರಹಿಸಿದ್ದಾರೆ.

ಇನ್ನು ಅಪಘಾತಕ್ಕೆ ಸಂಬಂಧಿಸಿದಂತೆ ಮೃತರ ಸಂಬಂಧಿಕರು ನೀಡಿದ ದೂರಿನ ಮೇರೆಗೆ ಹೆದ್ದಾರಿ ಕಾಮಗಾರಿ ಮಾಡುತ್ತಿರುವ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ಮೇಲೆ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+