ಕಳ್ಳ.. ಕಳ್ಳ ಇದ್ದಂಗಿದಿಯಲ್ಲೋ... ಲೇ.. ಈ ಮಾತು ವಾಪಸ್ ತಗೊಂಡ್ರೆ ಒಳ್ಳೆದು: ಇದು ಇಬ್ಬರು ಜನಪ್ರತಿನಿಧಿಗಳ ಸಂಸ್ಕಾರದ ಮಾತುಗಳು
ಕೋಲಾರ, ಸೆಪ್ಟೆಂಬರ್, 25: ಇಂದು ಕೋಲಾರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಜನತಾ ದರ್ಶನ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ವೇಳೆ ಬಂಗಾರಪೇಟೆ ಶಾಸಕ ಎಸ್.ಎನ್ ನಾರಾಯಣಸ್ವಾಮಿ ಮತ್ತು ಸಂಸದ ಮುನಿಸ್ವಾಮಿ ವೇದಿಕೆ ಕಾರ್ಯಕ್ರಮದಲ್ಲಿ ಗಲಾಟೆ ಮಾಡಿಕೊಂಡ ಘಟನೆ ನಡೆದಿದ್ದು, ಈ ವಿಡಿಯೋ ಇದೀಗ ಎಲ್ಲಡೆ ವೈರಲ್ ಆಗುತ್ತಿದೆ. ಹಾಗಾದರೆ ಈ ಗಲಾಟೆ ಯಾವ ವಿಚಾರಕ್ಕೆ ಆಗಿದೆ ಎನ್ನುವ ವಿವರವನ್ನು ಇಲ್ಲಿ ತಿಳಿಯಿರಿ.
ಈ ವೇಳೆ ಬಂಗಾರಪೇಟೆ ಶಾಸಕ ಎಸ್.ಎನ್ ನಾರಾಯಣಸ್ವಾಮಿ ಮತ್ತು ಸಂಸದ ಮುನಿಸ್ವಾಮಿ ಅವರ ನಡುವಿನ ಜಗಳ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದು, ಕೂಡಲೇ ಮಧ್ಯ ಪ್ರವೇಶಿಸಿದ ಪೊಲೀಸರು ಇಬ್ಬರು ನಾಯಕರನ್ನು ವೇದಿಕೆಯಿಂದ ಕೆಳಗೆ ಎಳೆದುಕೊಂಡು ಹೋಗಿ ಗಲಾಟೆ ತಿಳಿಗೊಳಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ.

ಶ್ರೀನಿವಾಸಪುರ ರೈತರ ಪರವಾಗಿ ಮನವಿ ಸಲ್ಲಿಸಲು ಆಗಮಿಸಿದ್ದ ಸಂಸದ ಮುನಿಸ್ವಾಮಿ ಅವರು ಪಕ್ಕದಲ್ಲಿ ಭೂಗಳ್ಳರನ್ನು ಕುರಿಸಿಕೊಂಡು ಸಭೆ ಮಾಡಿದರೆ ಏನರ್ಥ ಎಂದು ಪ್ರಶ್ನಿಸಿದರು. ಇದರಿಂದ ಕೆರಳಿದ ಶಾಸಕ ಎಸ್.ಎನ್.ನಾರಾಯಸ್ವಾಮಿ ಭೂಗಳ್ಳ ನಾನಲ್ಲ, ನೀನು ಈ ಮಾತನ್ನು ವಾಪಸ್ ತೆಗೆದುಕೊ ಎಂದು ಏಕವಚನದಲ್ಲಿ ಎಚ್ಚರಿಕೆ ನೀಡಿದರು. ಇದೀಗ ಈ ವಿಡಿಯೋ ಸಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಇಬ್ಬರ ನಾಯಕರ ವರ್ತನೆ ಜನರ ಕಣ್ಣು ಕೆಂಪಗಾಗುವಂತೆ ಮಾಡಿದೆ.
ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್, ಜಿಲ್ಲಾಧಿಕಾರಿ ಅಕ್ರಂ ಪಾಷಾ, ಎಸ್ಸ್ಪ್ ನಾರಾಯಣ್, ಸ್ಥಳೀಯ ಶಾಸಕರು ಸೇರಿದಂಯೆ ಮತ್ತಿತರರು ಉಪಸ್ಥಿತರಿದ್ದರು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications