ತೀವ್ರಕುತೂಹಲ ಮೂಡಿಸಿದ ಮುಳಬಾಗಿಲು ನಗರಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಬೇರಿ
ಕೋಲಾರ, ಅಕ್ಟೋಬರ್ 31: ವಿಧಾನಸಭೆ ಚುನಾವಣೆಗೆ ದಿಕ್ಸೂಜಿ ಎಂದೇ ಬಿಂಬಿತವಾಗಿದ್ದ ಮುಳಬಾಗಿಲು ನಗರಸಭೆ 2ನೇ ವಾರ್ಡ್ ಉಪಚುನಾವಣೆಯಲ್ಲಿ ಇತ್ತೀಚೆಗೆ ಹತ್ಯೆಯಾಗಿದ್ದ ಜಗಮೋಹನ್ ರೆಡ್ಡಿ ಪತ್ನಿ ನಿರುಪಮಾ ಜಯಬೇರಿ ಬಾರಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ನಿರುಪಮಾ 14 ಮತಗಳ ಅಂತರದಿಂದ ಜೆಡಿಎಸ್ ಅಭ್ಯರ್ಥಿ ಎಂಆರ್ ಮುರಳಿ ವಿರುದ್ಧ ಜಯ ಸಾಧಿಸಿದ್ದಾರೆ. ನಿರುಪಮಾ 510 ಮತಗಳನ್ನು ಪಡೆದರೆ, ಜೆಡಿಎಸ್ನ ಮುರಳಿ 496 ಮತಗಳನ್ನು ಪಡೆದಿದೆ. ಜಗಮೋಹನ್ ರೆಡ್ಡಿ ಹತ್ಯೆಯಾದ ಹಿನ್ನಲೆಯಲ್ಲಿ ಉಪಚುನಾವಣೆ ನಡೆದಿತ್ತು. ಇದೀಗ ವಾರ್ಡ್ನ ಮತದಾರರು ನಿರುಪಮಾಗೆ ಬೆಂಬಲ ನೀಡಿದ್ದಾರೆ.
ಕಾಂಗ್ರೆಸ್-ಜೆಡಿಎಸ್ ನಾಯಕರ ಪ್ರತಿಷ್ಠೆಯ ಕಣವಾಗಿದ್ದ ಉಪಚುನಾವಣೆ
ಈ ಉಪಚುನಾವಣೆಯಿಂದ ಬಿಜೆಪಿ ಹಿಂದೆ ಸರಿದಿದ್ದರಿಂದ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ನೇರ ಹಣಾಹಣಿ ಏರ್ಪಟ್ಟಿತ್ತು. ಈ ಪೈಪೋಟಿಯನ್ನು ಮುಂದಿನ ಚುನಾವಣೆಯ ದಿಕ್ಸೂಜಿ ಎಂದೇ ಹೇಳಲಾಗುತ್ತಿತ್ತು. ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಹಾಗೂ ಜೆಡಿಎಸ್ ಮುಖಂಡ ಸಮೃದ್ಧಿ ಮಂಜುನಾಥ್ ಚುನಾವಣೆಯಲ್ಲಿ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದರಿಂದ ಚುನಾವಣೆಯ ಮಹತ್ವ ಹೆಚ್ಚುವಂತೆ ಮಾಡಿದೆ.

ಈ ಇಬ್ಬರು ನಾಯಕರು ಹಾಗೂ ಪಕ್ಷಗಳು ಚುನಾವಣೆಗೆ ತಮ್ಮದೇ ಆದಂತಹ ಕಾರ್ಯತಂತ್ರ ರೂಪಿಸಿದ್ದರು. ಮತದಾರರನ್ನು ಸೆಳೆಯಲು ಹಲವಾರು ಕಸರತ್ತುಗಳನ್ನು ನಡೆಸಿದ್ದರು. ಜೊತೆಗೆ ಕೋಟ್ಯಂತರ ಹಣವನ್ನು ಚೆಲ್ಲಲಾಗಿದೆ ಎಂಬ ಸುದ್ದಿಯೂ ಕೇಳಿಬಂದಿತ್ತು.
ನಿರುಪಮಾ ಪರ ಕೊತ್ತೂರು ಮಂಜುನಾಥ್ ಹಾಗೂ ಮುರಳಿ ಪರ ಸಮೃದ್ಧಿ ಮಂಜುನಾಥ್ ಬೆನ್ನಲುಬಾಗಿ ನಿಂತಿದ್ದರು. ವಾರ್ಡ್ ಉಪಚುನಾವಣೆ ಅಭ್ಯರ್ಥಿಗಳ ಜೊತೆಗೆ ಈ ಇಬ್ಬರು ನಾಯಕರ ನಡುವೆ ನೇರ ಹಣಾಹಣಿ ಏರ್ಪಟ್ಟಿತ್ತು. ಕೊನೆಗೆ ಕಾಂಗ್ರೆಸ್ ಪಕ್ಷ ಜಯಬೇರಿ ಬಾರಿಸಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications