ಸಿಎಂ ಸಿದ್ದರಾಮಯ್ಯ ಬೆನ್ನಲ್ಲೆ ಮತ್ತೊಬ್ಬ ಹಿರಿಯ 'ಕೈ' ನಾಯಕ ಚುನಾವಣಾ ರಾಜಕಾರಣ ನಿವೃತ್ತಿ:
ಕೋಲಾರ, ಏಪ್ರಿಲ್ 08: ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ಮೈಸೂರಿನ ಚುನಾವಣಾ ಪ್ರಚಾರದಲ್ಲಿ ಮುಂದಿನ ವಿಧಾನಸಭೆಗೆ ಚುನಾವಣೆ ನಿಲ್ಲಲ್ಲ. ನಾನು ಚುನಾವಣಾ ರಾಜಕಾರಣದಿಂದ ಹಿಂದೆ ಸರಿಯಲಿದ್ದೇನೆ ಎಂದಿದ್ದರು. ಇದರ ಬೆನ್ನಲ್ಲೆ ಕಾಂಗ್ರೆಸ್ನ ಮತ್ತೊಬ್ಬ ಹಿರಿಯ ನಾಯಕರೊಬ್ಬರ, ರಾಜಕಾರಣ ಕಲುಷಿತಗೊಂಡಿದೆ. ಚುನಾವಣಾ ರಾಜಕಾರಣದಿಂದ ನಿವೃತ್ತಿಯಾಗಲಿದ್ದೇನೆ ಎಂದು ಘೋಷಿಸಿದರು.
ರಾಜ್ಯ ರಾಜಕೀಯ ವ್ಯವಸ್ಥೆಯು ಕಲುಷಿತಗೊಂಡಿದೆ. ರಾಜಕಾರಣದಲ್ಲಿ ಮೌಲ್ಯಗಳು ಉಳಿದಿಲ್ಲ ಎಂದು ಬೇಸರ ವ್ಯಕ್ತಪಡಿಸಿರುವ ಅವರು ಸಕ್ರಿಯ ರಾಜಕಾರಣದಿಂದ ಹಿಂದೆ ಸರಿಯುವುದಾಗಿ ಭಾನುವಾರ ತಮ್ಮ ನಿರ್ಧಾರ ಪ್ರಕಟಿಸಿದರು.

ಕಾಂಗ್ರೆಸ್ನ ಹಿರಿಯ ನಾಯಕ, ಮಾಜಿ ವಿಧಾನಸಭಾಧ್ಯಕ್ಷ ರಮೇಶ್ ಕುಮಾರ್ (Speaker Ramesh Kumar) ಅವರು ಮುಂದಿನ ರಾಜ್ಯ ವಿಧಾನಸಭಾ ಚುನಾವಣೆಗೆ ನಿಲ್ಲುವುದಿಲ್ಲ. ನನಗೆ ಮತ ನೀಡಿ ಎಂದು ನಿಮ್ಮ ಮನೆ ಬಾಗಿಲಿಗೆ ಬರುವುದಿಲ್ಲ ಎಂದು ತಿಳಿಸಿದರು.
ಕಾರ್ಯಕರ್ತರ ಸಭೆಯಲ್ಲಿ ಘೋಷಣೆ
ಭಾನುವಾರ ಸ್ವಗ್ರಾಮ ಶ್ರೀನಿವಾಸಪುರ ತಾಲೂಕು ಅಡ್ಡಗಲ್ ನಲ್ಲಿ ಕೋಲಾರ ಅಭ್ಯರ್ಥಿ ಕೆವಿ ಗೌತಮ್ ಪರವಾಗಿ ಅವರ ನಿವಾಸದಲ್ಲಿ ಕರೆಯಲಾಗಿದ್ದ ಕಾರ್ಯಕರ್ತರ ಸಭೆಯಲ್ಲಿ ಚುನಾವಣಾ ರಾಜಕೀಯ ನಿವೃತ್ತಿ ಕುರಿತು ಅವರು ಮಾತನಾಡಿದರು. ತಮಗೆ ಮೋಸ ಆಗಿದೆ ಎಂದು ಹಳೆಯ ಸೋಲನ್ನು ಅವರು ಸ್ಮರಿಸಿ ಬೇಸರ ವ್ಯಕ್ತಪಡಿಸಿದರು.

ಇಂದು ಕಲುಷಿತಗೊಂಡಿರುವ ರಾಜಕಾರಣದಲ್ಲಿ ನಾನು ಗೌರವಯುತವಾಗಿ ಬದುಕಿದ್ದೇನೆ. ಹಣ ಪಡೆಯಲು ರಾಜಕಾರಣ ಮಾಡಿದ್ದೇನೆ. ಮೌಲ್ಯ ಕಳೆದುಕೊಂಡು ಬದಲಾದ ರಾಜಕೀಯದಲ್ಲಿ ಚುನಾವಣೆಗಳಿಂದ ಹಿಂದೆ ಸರಿಯಲು ಮನಸ್ಸು ಮಾಡಿರುವ. ಮುಂದಿನ ಚುನಾವಣೆಯಲ್ಲಿ ನಾನಾಗಲಿ, ರಮೇಶ್ ಕುಮಾರ್ ಉತ್ತರಾಧಿಕಾರಿ ಪುತ್ರ ಹರ್ಷ ಆಗಲಿ ನಿಮ್ಮ ಬಳಿಕ ಮತಯಾಚಿಸುವುದಿಲ್ಲ ಎಂದು ಹೇಳಿದರು.
ಹಣದಾಸೆಗೆ ಅನೈತಿಕ ರಾಜಕಾರಣ
ರಾಜಕಾರಣದಲ್ಲಿ ನನಗೆ ಮೋಸ ಮಾಡಿದವರಿಗೆ ಎಂತಹ ಸ್ಥಿತಿ ಬರಲಿದೆ ತಿಳಿಯಲು ಕಾದು ನೋಡಬೇಕಿದೆ. ಹಣಕ್ಕೆ ತಮ್ಮನ್ನೆ ತಾವು ಮಾರಿಕೊಂಡು ನನಗೆ ಮೋಸ ಮಾಡಿದರು. ಇಂತವರಿಂದ ಹಣದಾಸೆಗೆ ಅನೈತಿಕ ರಾಜಕಾರಣ ನಡೆಯುತ್ತಿದೆ. ಇವರೆಲ್ಲ ನಾಶವಾಗಿ ಹೋಗುತ್ತಾರೆ ಕಾದು ನೋಡಿ ಎಂದು ಅವರು ತಮ್ಮ ಸೋಲನ್ನು ಸ್ಮರಿಸಿದರು.
ಇನ್ನೂ ಕೋಲಾರ ಅಭ್ಯರ್ಥಿ ಹೊಸ ಮುಖ ಗೌತಮ್ ಪರ ನಾನು ಮತಯಾಚನೆ ಮಾಡುವುದಿಲ್ಲ ಎಂದು ಅವರು ಟಿಕೆಟ್ ಆಯ್ಕೆಯಲ್ಲಿನ ಪಕ್ಷದ ನಿರ್ಧಾರಕ್ಕೆ ಬೇಸರ ವ್ಯಕ್ತಪಡಿಸಿದರು.
-
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ












Click it and Unblock the Notifications