ರಮೇಶ್ ಕುಮಾರ್ಗೆ ನಾಚಿಕೆ ಇಲ್ಲ: ಮಾಜಿ ಸಂಸದ ಮುನಿಯಪ್ಪ
ಕೋಲಾರ, ಆಗಸ್ಟ್ 28: ಕೋಲಾರ ಕಾಂಗ್ರೆಸ್ನಲ್ಲಿ ಭಾರಿ ಬಿರುಕು ಮೂಡಿದ್ದು ದೊಡ್ಡ ಮಟ್ಟದ ನಾಯಕರ ಒಳಜಗಳಗಳು ಬೀದಿಗೆ ಬಂದಿವೆ. ಲೋಕಸಭೆ ಚುನಾವಣೆ ನಂತರ ಈ ದೊಡ್ಡ ಬಿರುಕು ಕೋಲಾರ ಕಾಂಗ್ರೆಸ್ನಲ್ಲಿ ಮೂಡಿದೆ.
ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಎದುರು ಸೋತಿರುವ ಕೆ.ಎಚ್.ಮುನಿಯಪ್ಪ, ಕೋಲಾರದ ಕಾಂಗ್ರೆಸ್ ಮುಖಂಡರು, ಶಾಸಕರ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ್ದು, ಮಾಜಿ ಸ್ಪೀಕರ್ ರಮೇಶ್ ಕುಮಾರ್, ಶಿಡ್ಲಘಟ್ಟ ಶಾಸಕ ವಿ.ಮುನಿಯಪ್ಪ, ನಜೀರ್ ಅಹ್ಮದ್, ಎಸ್.ಎನ್.ನಾರಾಯಣಸ್ವಾಮಿಗೆ ನಾಚಿಕೆ ಇಲ್ಲ ಎಂದು ಮೂದಲಿಸಿದ್ದಾರೆ.
ರಮೇಶ್ ಕುಮಾರ್, ಎಸ್.ಎನ್.ನಾರಾಯಣಸ್ವಾಮಿ, ನಜೀರ್ ಅಹಮದ್, ವಿ ಮುನಿಯಪ್ಪ ಅವರುಗಳನ್ನು ಪಕ್ಷದಿಂದ ಉಚ್ಚಾಟಿಸಬೇಕು. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಕಾಂಗ್ರೆಸ್ ಶಾಸಕರೇ ಕಾರಣ ಎಂದು ನೇರವಾಗಿ ಆರೋಪ ಮಾಡಿದ್ದಾರೆ.

ರಮೇಶ್ ಕುಮಾರ್ಗೆ ನಾಚಿಕೆ ಇಲ್ಲ: ಕೆ.ಎಚ್.ಮುನಿಯಪ್ಪ
ಮಾಲೂರಿನಲ್ಲಿ ನಡೆದ ಲೋಕಸಭೆ ಚುನಾವಣೆ ಸತ್ಯ ಶೋದನಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, 'ರಮೇಶ್ ಕುಮಾರ್, ನಜೀರ್ ಅಹಮದ್, ಎಸ್ ಎನ್ ನಾರಾಯಣಸ್ವಾಮಿ ಇವರ್ಯಾರಿಗೂ ಮಾನ ಮರ್ಯಾದೆ ಇಲ್ಲ, ಮಾನ ಮರ್ಯಾದೆ ಇದ್ದಲ್ಲಿ ಇವರ್ಯಾರು ಕಾಂಗ್ರೆಸ್ ಕಚೇರಿ ಒಳಗೆ ಬರಬಾರದು' ಎಂದು ಆಕ್ರೋಶ ಹೊರಹಾಕಿದರು.

ಕಾಂಗ್ರೆಸ್ ಶಾಸಕರ ವಿರುದ್ಧ ಶಿಸ್ತುಕ್ರಮಕ್ಕೆ ಒತ್ತಾಯ
'ರಮೇಶ್ ಕುಮಾರ್, ನಜೀರ್ ಅಹಮದ್, ವಿ.ಮುನಿಯಪ್ಪ, ಎಸ್.ಎನ್.ನಾರಾಯಣಸ್ವಾಮಿ ವಿರುದ್ದ ಕ್ರಮಕ್ಕೆ ಈಗಾಗಲೇ ಶಿಪಾರಸು ಮಾಡಲಾಗಿದೆ, ಲೋಕಸಭೆ ಚುನಾವಣೆಯಲ್ಲಿ ಇವರ್ಯಾರು ಕಾಂಗ್ರೆಸ್ ಪರ ಕೆಲಸ ಮಾಡಲಿಲ್ಲ ಇದರಿಂದಾಗಿಯೇ ನಾನು ಚುನಾವಣೆಯಲ್ಲಿ ಸೋತೆ' ಎಂದು ಅವರು ಹೇಳಿದರು.

ಸೋಲಿಲ್ಲದ ಸರದಾರಿಗೆ ಸೋಲುಣಿಸಿದ ಮುನಿಸ್ವಾಮಿ
ಕೋಲಾರ ಲೋಕಸಭಾ ಕ್ಷೇತ್ರದಿಂದ ಎಂಟು ಬಾರಿ ಸತತವಾಗಿ ಗೆದ್ದಿದ್ದ ಕೆ.ಎಚ್.ಮುನಿಯಪ್ಪ ಅವರು ಈ ಬಾರಿ ಬಿಜೆಪಿಯ ಮುನಿಸ್ವಾಮಿ ಎದುರು ಹೀನಾಯ ಸೋಲು ಕಂಡರು. ಸ್ವಪಕ್ಷದವರೇ ಅವರ ವಿರುದ್ಧ ತಿರುಗಿ ಬಿದ್ದಿದ್ದೇ ಈ ಸೋಲಿಗೆ ಕಾರಣ ಎನ್ನಲಾಗುತ್ತಿದೆ.

ಕೆ.ಎಚ್.ಮುನಿಯಪ್ಪ ವಿರುದ್ಧ ಕೆಲಸ ಮಾಡಿದ ಶಾಸಕರು
ಕೋಲಾರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಕಾಂಗ್ರೆಸ್ ಶಾಸಕರಾದ ರಮೇಶ್ ಕುಮಾರ್, ಶಿಡ್ಲಘಟ್ಟ ಶಾಸಕ ವಿ.ಮುನಿಯಪ್ಪ, ಮುಳಬಾಗಿಲು ಕ್ಷೇತ್ರದ ಕೊತ್ತನೂರು ಮಂಜು, ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ, ಕಾಂಗ್ರೆಸ್ ಮುಖಂಡ ನಜೀರ್ ಅಹ್ಮದ್ ಸೇರಿ ಇನ್ನೂ ಕೆಲವರು ಕೆ.ಎಚ್.ಮುನಿಯಪ್ಪ ವಿರುದ್ಧವಾಗಿ ಕೆಲಸ ಮಾಡಿದ ಪರಿಣಾಮ ಚುನಾವಣೆಯಲ್ಲಿ ಸೋಲಾಯಿತು.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications