ರಮೇಶ್ ಕುಮಾರ್ಗೆ ನಾಚಿಕೆ ಇಲ್ಲ: ಮಾಜಿ ಸಂಸದ ಮುನಿಯಪ್ಪ
ಕೋಲಾರ, ಆಗಸ್ಟ್ 28: ಕೋಲಾರ ಕಾಂಗ್ರೆಸ್ನಲ್ಲಿ ಭಾರಿ ಬಿರುಕು ಮೂಡಿದ್ದು ದೊಡ್ಡ ಮಟ್ಟದ ನಾಯಕರ ಒಳಜಗಳಗಳು ಬೀದಿಗೆ ಬಂದಿವೆ. ಲೋಕಸಭೆ ಚುನಾವಣೆ ನಂತರ ಈ ದೊಡ್ಡ ಬಿರುಕು ಕೋಲಾರ ಕಾಂಗ್ರೆಸ್ನಲ್ಲಿ ಮೂಡಿದೆ.
ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಎದುರು ಸೋತಿರುವ ಕೆ.ಎಚ್.ಮುನಿಯಪ್ಪ, ಕೋಲಾರದ ಕಾಂಗ್ರೆಸ್ ಮುಖಂಡರು, ಶಾಸಕರ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ್ದು, ಮಾಜಿ ಸ್ಪೀಕರ್ ರಮೇಶ್ ಕುಮಾರ್, ಶಿಡ್ಲಘಟ್ಟ ಶಾಸಕ ವಿ.ಮುನಿಯಪ್ಪ, ನಜೀರ್ ಅಹ್ಮದ್, ಎಸ್.ಎನ್.ನಾರಾಯಣಸ್ವಾಮಿಗೆ ನಾಚಿಕೆ ಇಲ್ಲ ಎಂದು ಮೂದಲಿಸಿದ್ದಾರೆ.
ರಮೇಶ್ ಕುಮಾರ್, ಎಸ್.ಎನ್.ನಾರಾಯಣಸ್ವಾಮಿ, ನಜೀರ್ ಅಹಮದ್, ವಿ ಮುನಿಯಪ್ಪ ಅವರುಗಳನ್ನು ಪಕ್ಷದಿಂದ ಉಚ್ಚಾಟಿಸಬೇಕು. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಕಾಂಗ್ರೆಸ್ ಶಾಸಕರೇ ಕಾರಣ ಎಂದು ನೇರವಾಗಿ ಆರೋಪ ಮಾಡಿದ್ದಾರೆ.

ರಮೇಶ್ ಕುಮಾರ್ಗೆ ನಾಚಿಕೆ ಇಲ್ಲ: ಕೆ.ಎಚ್.ಮುನಿಯಪ್ಪ
ಮಾಲೂರಿನಲ್ಲಿ ನಡೆದ ಲೋಕಸಭೆ ಚುನಾವಣೆ ಸತ್ಯ ಶೋದನಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, 'ರಮೇಶ್ ಕುಮಾರ್, ನಜೀರ್ ಅಹಮದ್, ಎಸ್ ಎನ್ ನಾರಾಯಣಸ್ವಾಮಿ ಇವರ್ಯಾರಿಗೂ ಮಾನ ಮರ್ಯಾದೆ ಇಲ್ಲ, ಮಾನ ಮರ್ಯಾದೆ ಇದ್ದಲ್ಲಿ ಇವರ್ಯಾರು ಕಾಂಗ್ರೆಸ್ ಕಚೇರಿ ಒಳಗೆ ಬರಬಾರದು' ಎಂದು ಆಕ್ರೋಶ ಹೊರಹಾಕಿದರು.

ಕಾಂಗ್ರೆಸ್ ಶಾಸಕರ ವಿರುದ್ಧ ಶಿಸ್ತುಕ್ರಮಕ್ಕೆ ಒತ್ತಾಯ
'ರಮೇಶ್ ಕುಮಾರ್, ನಜೀರ್ ಅಹಮದ್, ವಿ.ಮುನಿಯಪ್ಪ, ಎಸ್.ಎನ್.ನಾರಾಯಣಸ್ವಾಮಿ ವಿರುದ್ದ ಕ್ರಮಕ್ಕೆ ಈಗಾಗಲೇ ಶಿಪಾರಸು ಮಾಡಲಾಗಿದೆ, ಲೋಕಸಭೆ ಚುನಾವಣೆಯಲ್ಲಿ ಇವರ್ಯಾರು ಕಾಂಗ್ರೆಸ್ ಪರ ಕೆಲಸ ಮಾಡಲಿಲ್ಲ ಇದರಿಂದಾಗಿಯೇ ನಾನು ಚುನಾವಣೆಯಲ್ಲಿ ಸೋತೆ' ಎಂದು ಅವರು ಹೇಳಿದರು.

ಸೋಲಿಲ್ಲದ ಸರದಾರಿಗೆ ಸೋಲುಣಿಸಿದ ಮುನಿಸ್ವಾಮಿ
ಕೋಲಾರ ಲೋಕಸಭಾ ಕ್ಷೇತ್ರದಿಂದ ಎಂಟು ಬಾರಿ ಸತತವಾಗಿ ಗೆದ್ದಿದ್ದ ಕೆ.ಎಚ್.ಮುನಿಯಪ್ಪ ಅವರು ಈ ಬಾರಿ ಬಿಜೆಪಿಯ ಮುನಿಸ್ವಾಮಿ ಎದುರು ಹೀನಾಯ ಸೋಲು ಕಂಡರು. ಸ್ವಪಕ್ಷದವರೇ ಅವರ ವಿರುದ್ಧ ತಿರುಗಿ ಬಿದ್ದಿದ್ದೇ ಈ ಸೋಲಿಗೆ ಕಾರಣ ಎನ್ನಲಾಗುತ್ತಿದೆ.

ಕೆ.ಎಚ್.ಮುನಿಯಪ್ಪ ವಿರುದ್ಧ ಕೆಲಸ ಮಾಡಿದ ಶಾಸಕರು
ಕೋಲಾರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಕಾಂಗ್ರೆಸ್ ಶಾಸಕರಾದ ರಮೇಶ್ ಕುಮಾರ್, ಶಿಡ್ಲಘಟ್ಟ ಶಾಸಕ ವಿ.ಮುನಿಯಪ್ಪ, ಮುಳಬಾಗಿಲು ಕ್ಷೇತ್ರದ ಕೊತ್ತನೂರು ಮಂಜು, ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ, ಕಾಂಗ್ರೆಸ್ ಮುಖಂಡ ನಜೀರ್ ಅಹ್ಮದ್ ಸೇರಿ ಇನ್ನೂ ಕೆಲವರು ಕೆ.ಎಚ್.ಮುನಿಯಪ್ಪ ವಿರುದ್ಧವಾಗಿ ಕೆಲಸ ಮಾಡಿದ ಪರಿಣಾಮ ಚುನಾವಣೆಯಲ್ಲಿ ಸೋಲಾಯಿತು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications