ಕೆ.ಸಿ ವ್ಯಾಲಿ ಯೋಜನೆ ನೀರು ಬಿಡದಿದ್ದಕ್ಕೆ ಕಾಂಗ್ರೆಸ್ ಶಾಸಕ ಗರಂ
ಕೋಲಾರ, ಫೆಬ್ರವರಿ 26: ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಕೆರೆಗಳಿಗೆ ಕೆ.ಸಿ ವ್ಯಾಲಿ ಯೋಜನೆಯ ನೀರು ನಿರೀಕ್ಷಿತ ಮಟ್ಟದಲ್ಲಿ ಹರಿಯದ ಹಿನ್ನೆಲೆಯಲ್ಲಿ ಮಾಲೂರಿನ ಕಾಂಗ್ರೆಸ್ ಶಾಸಕ ಕೆ.ವೈ ನಂಜೇಗೌಡ ಆಕ್ರೋಶ ಹೊರಹಾಕಿದ್ದಾರೆ.
ಕೋಲಾರ ತಾಲೂಕಿನ ನರಸಾಪುರ ಬಳಿ ಇರುವ ಪಂಪ್ ಹೌಸ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಪ್ರತಿನಿತ್ಯ ಎಷ್ಟು ಪ್ರಮಾಣದಲ್ಲಿ ನೀರು ಪಂಪ್ ಮಾಡಲಾಗ್ತಿದೆ ? ಯಾವ ಕೆರೆಗಳಿಗೆ ನೀರು ಹರಿದಿದೆ ಎಂದು ಅಧಿಕಾರಿಗಳಿಗೆ ಪ್ರಶ್ನಿಸಿದರು.
ಬಳಿಕ ಜಿಲ್ಲಾಧಿಕಾರಿಗಳಿಗೆ ಹಾಗೂ ಕೆ.ಸಿ ವ್ಯಾಲಿ ಅಧ್ಯಕ್ಷರು ಆಗಿರುವ ಮಂಜುನಾಥ್ ಜೊತೆ ದೂರವಾಣಿ ಕರೆ ಮಾಡಿ ಮಾತನಾಡಿದ ಶಾಸಕ ನಂಜೇಗೌಡ, ಮಾಲೂರು ತಾಲೂಕಿಗೆ ಏಕೆ ಕೆ.ಸಿ ವ್ಯಾಲಿ ನೀರು ಹರಿಸುತ್ತಿಲ್ಲ, ಬೇಸಿಗೆ ಕಾಲ ಬಂದಿದೆ ಕೂಡಲೇ ನಮ್ಮ ಪಾಲಿನ ನೀರನ್ನು ಹರಿಸಬೇಕು ಎಂದು ಮನವಿ ಆಗ್ರಹಿಸಿದರು.

ಬೆಂಗಳೂರಿನ ಬೆಳ್ಳಂದೂರು ಕೆರೆಯಿಂದ ಕೋಲಾರದ ಲಕ್ಷ್ಮೀಸಾಗರ ಕೆರೆಗೆ ೨೭೦ ದಶಲಕ್ಷ ಲೀಟರ್ ನೀರನ್ನು ಪ್ರತಿದಿನ ಎರಡು ಹಂತದಲ್ಲಿ ಶುದ್ದೀಕರಿಸಿ ಹರಿಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಇದಾದ ಬಳಿಕ ನರಸಾಪುರ ಕೆರೆ ಮೂಲಕ ಕೋಲಾರ, ಮಾಲೂರು ಮತ್ತು ಶ್ರೀನಿವಾಸಪುರ ತಾಲೂಕಿನ ಕೆರೆಗಳಿಗೆ ನೀರನ್ನು ಪಂಪ್ ಹೌಸ್ ಮೂಲಕ ಹರಿಸಲಾಗುತ್ತಿದೆ ಎಂದರು.
ಕೆಲವು ತಿಂಗಳ ಹಿಂದೆ ಕೋಲಾರದ ನರಸಾಪುರ ಕೆರೆಯಿಂದ ಮಾಲೂರು ತಾಲೂಕಿನ ಭಾಗಕ್ಕೆ 60 ದಶಲಕ್ಷ ಲೀಟರ್ ನೀರನ್ನ ಹರಿಸಲು ಅಧಿಕೃತವಾಗಿ ಚಾಲನೆ ನೀಡಿದ್ದರು. ಈಗ ಏಕಾಏಕಿ ಒಪ್ಪಂದದಂತೆ ಮಾಲೂರಿಗೆ ನೀರು ಹರಿಸದೇ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ನರಸಾಪುರ ಕೆರೆಯಿಂದ ಮಾಲೂರಿನ ಶಿವಾರಪಟ್ಟಣ ಕೆರೆ ತುಂಬಿ ಅಲ್ಲಿಂದ ನೀರನ್ನು ಪಂಪ್ ಮಾಡಲು ಪಂಪ್ ಹೌಸ್ ಸಹ ನಿರ್ಮಾಣ ಮಾಡಲಾಗಿದೆ. ಆದರೆ ನಿಗದಿತ ಪ್ರಮಾಣದಲ್ಲಿ ನೀರು ಇಲ್ಲಿಯವರೆಗೂ ಬಂದಿಲ್ಲ ಎಂದು ದೂರಿದರು. ಮಾಲೂರು ಕ್ಷೇತ್ರದ ಜನರು ನೀರಿಲ್ಲದೇ ಪರಿತಪಿಸುವಂತೆ ಆಗಿದೆ ಎಂದು ಅಸಮಾಧಾನಗೊಂಡರು.

ಇನ್ನು ಐದು ದಿನದಲ್ಲಿ ತಾಲೂಕಿಗೆ ನೀರು ಹರಿಸಬೇಕು. ಇಲ್ಲವಾದಲ್ಲಿ 10 ಸಾವಿರು ರೈತರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಕೆ.ವೈ. ನಂಜೇಗೌಡ ಎಚ್ಚರಿಕೆ ನೀಡಿದರು. ಬಳಿಕ ಸಂಸದ ಮುನಿಸ್ವಾಮಿ ವಿರುದ್ಧವೂ ಹರಿಹಾಯ್ದ ಶಾಸಕ ಕೆ.ವೈ ನಂಜೇಗೌಡ ನೀವು ಸಹ ಮಾಲೂರಿನ ತಾಲೂಕಿನವರು, ಸ್ವಲ್ಪ ಮುತುವಜಿ೯ ವಹಿಸಿ ನಮ್ಮ ಪಾಲಿನ ನೀರನ್ನು ಹರಿಸಲು ಸಹಕರಿಸಬೇಕು,ಇದರಲ್ಲಿ ರಾಜಕೀಯ ಮಾಡಬಾರದು ಎಂದು ಕಿವಿ ಮಾತು ಹೇಳಿದರು.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications