ದೇವರಮಳ್ಳೂರು: ಶ್ರೀಮಳ್ಳೂರಾಂಭ ದೇವಿಯ ಬ್ರಹ್ಮರಥೋತ್ಸವದ ವಿಶೇಷತೆ ಇಲ್ಲಿದೆ
ಶಿಡ್ಲಘಟ್ಟ, ಡಿಸೆಂಬರ್, 09: ಪುರಾಣ ಪ್ರಸಿದ್ದ ದೇವರಮಳ್ಳೂರು ಗ್ರಾಮದ ಶ್ರೀಮಳ್ಳೂರಾಂಭ ದೇವಿಯ ಬ್ರಹ್ಮರಥೋತ್ಸವ ಕಾರ್ಯಕ್ರಮ ಗುರುವಾರ ವಿಜೃಂಭಣೆಯಿಂದ ನೆರವೇರಿತು.
ರಥೋತ್ಸವಕ್ಕೆ ವಿವಿಧ ಕಡೆಯಿಂದ ಆಗಮಿಸಿದ್ದ ಸಹಸ್ರಾರು ಸಂಖ್ಯೆಯ ಭಕ್ತರು ಸಾಕ್ಷಿಯಾದರು. ತಾಲೂಕಿನ ದೇವರಮಳ್ಳೂರು ಗ್ರಾಮದಲ್ಲಿ ಶ್ರೀಮಳ್ಳೂರಾಂಭ ದೇವಿಯ ಬ್ರಹ್ಮರಥೋತ್ಸವ ಅನಾದಿ ಕಾಲದಿಂದಲೂ ವಿಜೃಂಭಣೆಯಿಂದ ನಡೆದುಕೊಂಡು ಬಂದಿದೆ. ಅಲಂಕೃತ ತೇರಿನಲ್ಲಿ ಮಳ್ಳೂರಾಂಭ ದೇವಿಯ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು. ರಥೋತ್ಸವಕ್ಕೆ ಮಹರ್ಷಿ ಆನಂದ್ ಗುರೂಜಿ ಚಾಲನೆ ನೀಡಿ ನೆರೆದಿದ್ದ ಭಕ್ತರಿಗೆ ಆಶೀರ್ವಚನ ನೀಡಿದರು. "ತಾಯಿ ಮಳ್ಳೂರಾಂಭ ದೇವಿಯ ಮಹಿಮೆ ಅಪಾರವಾದದ್ದು. ತಾಯಿಯ ಅನುಗ್ರಹದಿಂದಲೇ ಈ ಗ್ರಾಮದಲ್ಲಿ ಅಭಿವೃದ್ದಿ, ಸುಖ ಶಾಂತಿ, ನೆಮ್ಮದಿ ನೆಲೆಸಿದೆ". ಈ ಸ್ಥಳಕ್ಕೆ ಸಾವಿರಾರು ವರ್ಷಗಳ ಐತಿಹಾಸಿಕ ಇತಿಹಾಸ ಇದೆ. ಪುಣ್ಯ ಸ್ಥಳದಲ್ಲಿನ ದೇವರ ಕಾರ್ಯದಲ್ಲಿ ಭಾಗವಹಿಸಿದ ನಾವು ನೀವೆಲ್ಲರೂ ಧನ್ಯರು ಎಂದು ಹೇಳಿದರು.
ರಾಜ ಬೀದಿಯಲ್ಲಿ ಹರಿದ ತೇರು
ರಥೋತ್ಸವ ಹಿನ್ನೆಲೆ ತೇರನ್ನು ಊರಿನ ರಾಜ ಬೀದಿಯಲ್ಲಿ ಎಳೆಯಲಾಗಿದ್ದು, ಅಪಾರ ಪ್ರಮಾಣದಲ್ಲಿ ಸೇರಿದ ಭಕ್ತರು ಜಾತ್ರೆಯ ಮೆರಗನ್ನು ಮತ್ತಷ್ಟು ಹೆಚ್ಚಿಸಿದ್ದರು. ದವಣ ಬಾಳೆ ಹಣ್ಣನ್ನು ತೇರಿನ ತುತ್ತ ತುದಿಯಲ್ಲಿನ ಕಳಸಕ್ಕೆ ಎಸೆದು ಇಷ್ಟಾರ್ಥಗಳು ಈಡೇರಲೆಂದು ಭಗವಂತನಲ್ಲಿ ಭಕ್ತರು ಪ್ರಾರ್ಥಿಸಿದರು. ಅಲ್ಲದೆ ಅಲ್ಲಿ ನೆರೆದಿದ್ದ ಭಕ್ತರಿಗೆ ಹೆಸರು ಬೇಳೆ ಪಾನಕವನ್ನು ವಿತರಿಸಲಾಯಿತು.

ಪರಿಷೆಯಲ್ಲಿ ಗಮನ ಸೆಳೆದ ಮಳಿಗೆಗಳು
ಪರಿಷೆ ಅಂಗವಾಗಿ ಬರಗು ಬತಾಸು, ಮಕ್ಕಳ ಆಟಿಕೆ, ಹೆಂಗೆಳೆಯರ ಅಲಂಕಾರಿ ವಸ್ತುಗಳ ಹತ್ತಾರು ಅಂಗಡಿಗಳನ್ನು ಹಾಕಿದ್ದು ಗಮನ ಸೆಳೆದಿದೆ. ಇದರಿಂದ ವ್ಯಾಪಾರ ವಹಿವಾಟು ಜೋರಾಗಿದ್ದು, ವ್ಯಾಪಾರಿಗಳ ಮುಖದಲ್ಲಿ ಮಂದಹಾಸ ಮೂಡಿಸಿತ್ತು. ಅಲ್ಲದೆ ನೆರೆದಿದ್ದ ಭಕ್ತರೆಲ್ಲರಿಗೂ ಹೋಳಿಗೆಯ ಊಟ ಸಾಮೂಹಿಕ ಅನ್ನ ಸಂತರ್ಪಣೆ ನಡೆಯಿತು.

ಈ ಸಂದರ್ಭದಲ್ಲಿ ಶಾಸಕ ವಿ.ಮುನಿಯಪ್ಪ, ಎಬಿಡಿ ಟ್ರಸ್ಟ್ನ ಅಧ್ಯಕ್ಷ ರಾಜೀವ್ಗೌಡ, ಸಹನಾ ರಾಜೀವ್ಗೌಡ, ಉಪ ವಿಭಾಗಾಕಾರಿ ಡಾ.ಸಂತೋಷ್ ಕುಮಾರ್, ಆರ್.ಐ. ಪ್ರಶಾಂತ್ಕುಮಾರ್, ದೇವರಮಳ್ಳೂರು ಗ್ರಾಮ ಪಂಚಾಯತಿ ಅಧ್ಯಕ್ಷ ಕೆಂಪೇಗೌಡ, ದೇವಾಲಯ ಸಮಿತಿಯ ಅಧ್ಯಕ್ಷ ವಿ.ಮುನಿರಾಜುಗೌಡ, ಧರ್ಮದರ್ಶಿಗಳಾದ ಬಿ.ಎಲ್.ಮುನಿರಾಜು, ಶಾಂತಮ್ಮಕೆಂಪಣ್ಣ, ವೆಂಕೋಬರಾವ್, ನಿರಂಜನ್, ವೆಂಕಟೇಶ್ ಚಕ್ರವರ್ತಿ, ವಕೀಲ ವಿ.ಸುಬ್ರಮಣ್ಯಪ್ಪ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications