ದೇವರಮಳ್ಳೂರು: ಶ್ರೀಮಳ್ಳೂರಾಂಭ ದೇವಿಯ ಬ್ರಹ್ಮರಥೋತ್ಸವದ ವಿಶೇಷತೆ ಇಲ್ಲಿದೆ
ಶಿಡ್ಲಘಟ್ಟ, ಡಿಸೆಂಬರ್, 09: ಪುರಾಣ ಪ್ರಸಿದ್ದ ದೇವರಮಳ್ಳೂರು ಗ್ರಾಮದ ಶ್ರೀಮಳ್ಳೂರಾಂಭ ದೇವಿಯ ಬ್ರಹ್ಮರಥೋತ್ಸವ ಕಾರ್ಯಕ್ರಮ ಗುರುವಾರ ವಿಜೃಂಭಣೆಯಿಂದ ನೆರವೇರಿತು.
ರಥೋತ್ಸವಕ್ಕೆ ವಿವಿಧ ಕಡೆಯಿಂದ ಆಗಮಿಸಿದ್ದ ಸಹಸ್ರಾರು ಸಂಖ್ಯೆಯ ಭಕ್ತರು ಸಾಕ್ಷಿಯಾದರು. ತಾಲೂಕಿನ ದೇವರಮಳ್ಳೂರು ಗ್ರಾಮದಲ್ಲಿ ಶ್ರೀಮಳ್ಳೂರಾಂಭ ದೇವಿಯ ಬ್ರಹ್ಮರಥೋತ್ಸವ ಅನಾದಿ ಕಾಲದಿಂದಲೂ ವಿಜೃಂಭಣೆಯಿಂದ ನಡೆದುಕೊಂಡು ಬಂದಿದೆ. ಅಲಂಕೃತ ತೇರಿನಲ್ಲಿ ಮಳ್ಳೂರಾಂಭ ದೇವಿಯ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು. ರಥೋತ್ಸವಕ್ಕೆ ಮಹರ್ಷಿ ಆನಂದ್ ಗುರೂಜಿ ಚಾಲನೆ ನೀಡಿ ನೆರೆದಿದ್ದ ಭಕ್ತರಿಗೆ ಆಶೀರ್ವಚನ ನೀಡಿದರು. "ತಾಯಿ ಮಳ್ಳೂರಾಂಭ ದೇವಿಯ ಮಹಿಮೆ ಅಪಾರವಾದದ್ದು. ತಾಯಿಯ ಅನುಗ್ರಹದಿಂದಲೇ ಈ ಗ್ರಾಮದಲ್ಲಿ ಅಭಿವೃದ್ದಿ, ಸುಖ ಶಾಂತಿ, ನೆಮ್ಮದಿ ನೆಲೆಸಿದೆ". ಈ ಸ್ಥಳಕ್ಕೆ ಸಾವಿರಾರು ವರ್ಷಗಳ ಐತಿಹಾಸಿಕ ಇತಿಹಾಸ ಇದೆ. ಪುಣ್ಯ ಸ್ಥಳದಲ್ಲಿನ ದೇವರ ಕಾರ್ಯದಲ್ಲಿ ಭಾಗವಹಿಸಿದ ನಾವು ನೀವೆಲ್ಲರೂ ಧನ್ಯರು ಎಂದು ಹೇಳಿದರು.
ರಾಜ ಬೀದಿಯಲ್ಲಿ ಹರಿದ ತೇರು
ರಥೋತ್ಸವ ಹಿನ್ನೆಲೆ ತೇರನ್ನು ಊರಿನ ರಾಜ ಬೀದಿಯಲ್ಲಿ ಎಳೆಯಲಾಗಿದ್ದು, ಅಪಾರ ಪ್ರಮಾಣದಲ್ಲಿ ಸೇರಿದ ಭಕ್ತರು ಜಾತ್ರೆಯ ಮೆರಗನ್ನು ಮತ್ತಷ್ಟು ಹೆಚ್ಚಿಸಿದ್ದರು. ದವಣ ಬಾಳೆ ಹಣ್ಣನ್ನು ತೇರಿನ ತುತ್ತ ತುದಿಯಲ್ಲಿನ ಕಳಸಕ್ಕೆ ಎಸೆದು ಇಷ್ಟಾರ್ಥಗಳು ಈಡೇರಲೆಂದು ಭಗವಂತನಲ್ಲಿ ಭಕ್ತರು ಪ್ರಾರ್ಥಿಸಿದರು. ಅಲ್ಲದೆ ಅಲ್ಲಿ ನೆರೆದಿದ್ದ ಭಕ್ತರಿಗೆ ಹೆಸರು ಬೇಳೆ ಪಾನಕವನ್ನು ವಿತರಿಸಲಾಯಿತು.

ಪರಿಷೆಯಲ್ಲಿ ಗಮನ ಸೆಳೆದ ಮಳಿಗೆಗಳು
ಪರಿಷೆ ಅಂಗವಾಗಿ ಬರಗು ಬತಾಸು, ಮಕ್ಕಳ ಆಟಿಕೆ, ಹೆಂಗೆಳೆಯರ ಅಲಂಕಾರಿ ವಸ್ತುಗಳ ಹತ್ತಾರು ಅಂಗಡಿಗಳನ್ನು ಹಾಕಿದ್ದು ಗಮನ ಸೆಳೆದಿದೆ. ಇದರಿಂದ ವ್ಯಾಪಾರ ವಹಿವಾಟು ಜೋರಾಗಿದ್ದು, ವ್ಯಾಪಾರಿಗಳ ಮುಖದಲ್ಲಿ ಮಂದಹಾಸ ಮೂಡಿಸಿತ್ತು. ಅಲ್ಲದೆ ನೆರೆದಿದ್ದ ಭಕ್ತರೆಲ್ಲರಿಗೂ ಹೋಳಿಗೆಯ ಊಟ ಸಾಮೂಹಿಕ ಅನ್ನ ಸಂತರ್ಪಣೆ ನಡೆಯಿತು.

ಈ ಸಂದರ್ಭದಲ್ಲಿ ಶಾಸಕ ವಿ.ಮುನಿಯಪ್ಪ, ಎಬಿಡಿ ಟ್ರಸ್ಟ್ನ ಅಧ್ಯಕ್ಷ ರಾಜೀವ್ಗೌಡ, ಸಹನಾ ರಾಜೀವ್ಗೌಡ, ಉಪ ವಿಭಾಗಾಕಾರಿ ಡಾ.ಸಂತೋಷ್ ಕುಮಾರ್, ಆರ್.ಐ. ಪ್ರಶಾಂತ್ಕುಮಾರ್, ದೇವರಮಳ್ಳೂರು ಗ್ರಾಮ ಪಂಚಾಯತಿ ಅಧ್ಯಕ್ಷ ಕೆಂಪೇಗೌಡ, ದೇವಾಲಯ ಸಮಿತಿಯ ಅಧ್ಯಕ್ಷ ವಿ.ಮುನಿರಾಜುಗೌಡ, ಧರ್ಮದರ್ಶಿಗಳಾದ ಬಿ.ಎಲ್.ಮುನಿರಾಜು, ಶಾಂತಮ್ಮಕೆಂಪಣ್ಣ, ವೆಂಕೋಬರಾವ್, ನಿರಂಜನ್, ವೆಂಕಟೇಶ್ ಚಕ್ರವರ್ತಿ, ವಕೀಲ ವಿ.ಸುಬ್ರಮಣ್ಯಪ್ಪ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications