ಕೋಲಾರ: ಪಕ್ಷೇತರರಾಗಿ ಡಿಕೆ ರವಿ ತಾಯಿ ಸ್ಪರ್ಧೆ ಖಚಿತ
ಕೋಲಾರ, ಡಿಸೆಂಬರ್ 28: ದಕ್ಷ ಐಎಎಸ್ ಅಧಿಕಾರಿ ಡಿ.ಕೆ. ರವಿ ಅವರ ಸಾವಿಗೆ ನ್ಯಾಯ ಸಿಗಬೇಕಿದೆ. ಇದಕ್ಕಾಗಿ ಚುನಾವಣಾ ಕಣಕ್ಕಿಳಿಯಲು ನಿರ್ಧರಿಸಿದ್ದೇನೆ ಎಂದು ಡಿಕೆ ರವಿ ಅವರ ತಾಯಿ ಗೌರಮ್ಮ ಅವರು ಗುರುವಾರದಂದು ಘೋಷಿಸಿದ್ದಾರೆ.
ಯಾವ ಪಕ್ಷದ ಬೆಂಬಲ ಕೋರುತ್ತಾರೆ ಅಥವಾ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಾರೆ ಎಂಬ ಕುತೂಹಲಕ್ಕೆ ಈಗ ತೆರೆಬಿದ್ದಿದೆ. ಸ್ವತಂತ್ರ ಅಭ್ಯರ್ಥಿಯಾಗಿ ಪಕ್ಷೇತರರಾಗಿ ವಿಧಾನಸಭೆ ಚುನಾವಣೆ 2018ರಲ್ಲಿ ಸ್ಪರ್ಧಿಸಲಿದ್ದಾರೆ.
ಖಾಸಗಿ ಸುದ್ದಿ ವಾಹಿನಿಯೊಂದಿಗೆ ಮಾತನಾಡಿದ ಗೌರಮ್ಮ, 'ನನ್ನ ಮಗನ ಸಾವಿಗೆ ನ್ಯಾಯ ಸಿಗಬೇಕಿದೆ, ಅವನು ಮಾಡಿದ ಒಳ್ಳೆ ಕಾರ್ಯವನ್ನು ಮುಂದುವರೆಸಲು ಅವಕಾಶ ಕೊಡಿ ಎಂದು ಜನರನ್ನು ಕೇಳಿಕೊಳ್ಳುತ್ತೇನೆ' ಎಂದಿದ್ದಾರೆ

"ನನ್ನ ಮಗನ ಸಾವು ಸಂಭವಿಸಿದ್ದು ಆತ್ಮಹತ್ಯೆಯಿಂದ ಅಲ್ಲ. ನನ್ನ ಮಗ ಆತ್ಮಹತ್ಯೆ ಮಾಡಿಕೊಳ್ಳುವಂಥವನೇ ಅಲ್ಲ. ನನ್ನ ಮಗ ಕೊಲೆಯಾಗಿದ್ದಾನೆ. ಸಂಚು ರೂಪಿಸಿ ಹತ್ಯೆ ಮಾಡಲಾಗಿದೆ' ಎಂದು ಗೌರಮ್ಮ ಮತ್ತೊಮ್ಮೆ ನೋವು ತೋಡಿಕೊಂಡರು.
ರವಿ ಅವರ ಸಾವಿನ ಕುರಿತಾಗಿ ಕಾಂಗ್ರೆಸ್ ಸರ್ಕಾರ ಸರಿಯಾಗಿ ಸ್ಪಂದಿಸಿಲ್ಲ. ಕೋಲಾರದಲ್ಲಿ ಡಿ.ಕೆ. ರವಿ ಕೆಲಸ ಮಾಡಿದ್ದು, ಜನಾನುರಾಗಿಯಾಗಿದ್ದರು.ಕೋಲಾರದಿಂದ ಗೌರಮ್ಮ ಅವರು ಸ್ಪರ್ಧಿಸಿ, ನ್ಯಾಯಕ್ಕಾಗಿ ಹೋರಾಟ ಮುಂದುವರೆಸಲಿ ಎಂಬುದು ಅಭಿಮಾನಿಗಳ ಆಶಯ.
ಕಾಂಗ್ರೆಸ್, ಬಿಜೆಪಿ ಅಥವಾ ಜೆಡಿಎಸ್ ಆಗಲಿ ಯಾವ ಪಕ್ಷಗಳಿಂದ ಡಿಕೆ ರವಿ ಪ್ರಕರಣದಲ್ಲಿ ನ್ಯಾಯ ಸಿಗಲಿಲ್ಲ. ಹೀಗಾಗಿ, ಜನರ ಬೆಂಬಲವನ್ನು ನೇರವಾಗಿ ಪಡೆದು ಕಣಕ್ಕಿಳಿಯಲು ಗೌರಮ್ಮ ಅವರು ನಿರ್ಧರಿಸಿದ್ದಾರೆ ಎಂದು ಲಕ್ಷ್ಮಣ್ ಅವರು ಹೇಳಿದ್ದಾರೆ.
ಕಮರ್ಷಿಯಲ್ ಟ್ಯಾಕ್ಸ್ ವಿಭಾಗದ ಹೆಚ್ಚುವರಿ ಆಯುಕ್ತರಾಗಿದ್ದ ಡಿಕೆ ರವಿ ಅವರ ಶವ ಮಾರ್ಚ್ 16, 2015ರಂದು ಬೆಂಗಳೂರಿನ ತಮ್ಮ ಅಪಾರ್ಟ್ಮೆಂಟ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಕಾಣಿಸಿಕೊಂಡಿತ್ತು. ಈ ಬಗ್ಗೆ ಸಿಬಿಐ ತನಿಖೆ ಕೈಗೊಂಡರೂ ಪ್ರಕರಣದ ಬಗ್ಗೆ ಸ್ಪಷ್ಟತೆ ಸಿಕ್ಕಿರಲಿಲ್ಲ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications