ಬಂಗಾರಪೇಟೆ ಬಳಿ ಹಳಿ ತಪ್ಪಿದ ಬೆಂಗಳೂರು-ಚೆನ್ನೈ ಡಬಲ್ ಡೆಕ್ಕರ್ ರೈಲು: ತಪ್ಪಿದ ದುರಂತ
ಕೋಲಾರ, ಮೇ 15: ಬೆಂಗಳೂರಿನಿಂದ ಚೆನ್ನೈಗೆ ತೆರಳುತ್ತಿದ್ದ ಡಬಲ್ ಡೆಕ್ಕರ್ ರೈಲು ಹಳಿತಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಬಿಸಾನತ್ತಂ ಬಳಿ ನಡೆದಿದೆ. ಲೋಕೋಪೈಲಟ್ ಸಮಯಪ್ರಜ್ಞೆಯಿಂದ ದೊಡ್ಡ ಅವಘಡವೊಂದು ತಪ್ಪಿದಂತಾಗಿದೆ.
ಬೆಂಗಳೂರಿನಿಂದ ಚೆನ್ನೈಗೆ ತೆರಳುತ್ತಿದ್ದ ಸಂದರ್ಭದಲ್ಲಿ . ಸಿ-1 ಕೋಚ್ ಹಾಗೂ ಸೇಫ್ ಗಾರ್ಡ್ ಕೋಚ್ ಹಳಿ ಬಿಟ್ಟು ಪಕ್ಕಕ್ಕೆ ಜಾರಿದೆ. ಹಳಿ ತಪ್ಪಿದ್ದನ್ನು ಗಮನಿಸಿದ ಲೋಕೋಪೈಲಟ್ ತಕ್ಷಣವೇ ರೈಲನ್ನು ನಿಲ್ಲಿಸಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಲೋಕೋ ಪೈಲಟ್ ಸ್ವಲ್ಪ ಯಾಮಾರಿದ್ದ ಭಾರಿ ಅನಾಹುತವೇ ನಡೆಯುವ ಸಾಧ್ಯತೆ ಇತ್ತು.

ಘಟನೆ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ರೈಲ್ವೆ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದರು. ತಾಂತ್ರಿಕ ತಜ್ಞರು, ಬಂಗಾರಪೇಟೆ ರೈಲ್ವೇ ಸಿಬ್ಬಂತಿ ಬಂದು ತ್ವರಿತವಾಗಿ ಸಮಸ್ಯೆಯನ್ನು ಬಗೆಹರಿಸಿದರು. ನಂತರ ರೈಲು ಚೆನ್ನೈ ಕಡೆಗೆ ಪ್ರಯಾಣ ಬೆಳೆಸಿದೆ.











Click it and Unblock the Notifications