ಚುನಾವಣೆಗೆ ಸ್ಪರ್ಧಿಸಲು ಸರ್ಕಾರಿ ಉದ್ಯೋಗ ಬಿಟ್ಟ ಡಾ.ಡಿ.ಕೆ.ರಮೇಶ್
Recommended Video

ಕೋಲಾರ, ನವೆಂಬರ್ 28 : ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಕೆಲವು ದಿನಗಳು ಮಾತ್ರ ಬಾಕಿ ಇದೆ. ಚುನಾವಣೆಯಲ್ಲಿ ಸ್ಪರ್ಧಿಸಲು ಸರ್ಕಾರಿ ವೈದ್ಯರೊಬ್ಬರು ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ.
ಕೋಲಾರದ ಶ್ರೀ ನರಸಿಂಹರಾಜ ಜಿಲ್ಲಾ ಆಸ್ಪತ್ರೆಯ ವೈದ್ಯರಾದ ಡಾ.ಡಿ.ಕೆ.ರಮೇಶ್ ಅವರು ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ. 2018ರ ಚುನಾವಣೆಯಲ್ಲಿ ಸ್ಪರ್ಧಿಸಲು ಅವರು ಸರ್ಕಾರಿ ಕೆಲಸಕ್ಕೆ ರಾಜೀನಾಮೆ ಕೊಟ್ಟಿದ್ದಾರೆ.

'ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರು ನನಗೆ ಆದರ್ಶ, ಅವರಂತೆ ಸಮಾಜದಲ್ಲಿ ಬದಲಾವಣೆ ತರುವ ಉದ್ದೇಶದಿಂದ ಚುನಾವಣೆಗೆ ಸ್ಪರ್ಧಿಸಲು ಬಯಸಿದ್ದೇನೆ. ಆದ್ದರಿಂದ, ಕೆಲಸಕ್ಕೆ ರಾಜೀನಾಮೆ ನೀಡಿದ್ದೇನೆ' ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಶಾಶ್ವತ ನೀರಾವರಿ ಯೋಜನೆಗೆ ಆಗ್ರಹಿಸಿ ನಡೆಯುತ್ತಿದ್ದ ಹೋರಾಟದಲ್ಲಿ ಡಾ.ಡಿ.ಕೆ.ರಮೇಶ್ ಸಕ್ರಿಯವಾಗಿ ತೊಡಗಿಕೊಂಡಿದ್ದರು. ಸದ್ಯ, ಸರ್ಕಾರಿ ಕೆಲಸ ಬಿಟ್ಟಿದ್ದು, ಸಂಪೂರ್ಣವಾಗಿ ರಾಜಕಾರಣದಲ್ಲಿ ತೊಡಗಿಕೊಳ್ಳಲಿದ್ದಾರೆ.
ಡಿ.ಕೆ.ರಮೇಶ್ ಅವರು ಯಾವ ಪಕ್ಷದಿಂದ, ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬುದು ಇನ್ನೂ ಖಚಿತವಾಗಿಲ್ಲ. ಅವರು ಫೇಸ್ ಬುಕ್ ಪುಟದಲ್ಲಿಯೂ ತಮ್ಮ ಹೋರಾಟಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.












Click it and Unblock the Notifications