ಕೋಲಾರ: ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳನ್ನು ಮಲದ ಗುಂಡಿಗಿಳಿಸಿ ಸ್ವಚ್ಛತೆ, ರೊಚ್ಚಿಗೆದ್ದ ಪೋಷಕರು ಮಾಡಿದ್ದೇನು ಗೊತ್ತಾ?
ಕೋಲಾರ, ಡಿಸೆಂಬರ್, 17: ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳನ್ನು ಮಲದ ಗುಂಡಿಯೊಳಗೆ ಇಳಿಸಿ ಕ್ಲೀನ್ ಮಾಡಿಸಿದ ಅಮಾನವೀಯ ಘಟನೆ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಯಲವಳ್ಳಿಯಯಲ್ಲಿ ನಡೆದಿದೆ.
ಮಕ್ಕಳಿಗೆ ವಿವಿಧ ರೀತಿಯಲ್ಲಿ ಕಿರುಕುಳ
ಪ್ರಾಂಶುಪಾಲರ ಎದುರಲ್ಲೇ ಸಿಬ್ಬಂದಿಗಳು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳಿಂದ ಮಲದ ಗುಂಡಿಗೆ ಇಳಿಸಿ ಕ್ಲೀನ್ ಮಾಡಿಸಿದ್ದಾರೆ. ಪ್ರಾಂಶುಪಾಲೆ ಭಾರತಮ್ಮ, ಶಿಕ್ಷಕ ಅಭಿಷೇಕ್, ಹಾಗೂ ವಾರ್ಡನ್ ಮಂಜುನಾಥ್ ಸೇರಿ ಕೆಲವು ಶಿಕ್ಷಕರು ಮಕ್ಕಳಿಗೆ ವಿವಿಧ ರೀತಿಯಲ್ಲಿ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಶಿಕ್ಷಕರ ವಿರುದ್ದ ಕ್ರಮಕ್ಕೆ ಪೋಷಕರ ಆಗ್ರಹ
ಮಕ್ಕಳಿಗೆ ಹೊಡೆಯುವುದು, ಮಕ್ಕಳನ್ನು ರಾತ್ರಿ ಹೊತ್ತಿನಲ್ಲಿ ಬ್ಯಾಗ್ ಹೊರಿಸಿ ಕೂರಿಸಿ ಹಿಂಸೆ ಮಾಡುವುದು ಹೀಗೆ ವಿವಿಧ ರೀತಿಯಲ್ಲಿ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇನ್ನು ಸ್ಥಳಕ್ಕೆ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಸತಿ ಶಾಲೆಯಲ್ಲಿ ಸುಮಾರು 250 ಜನ ಮಕ್ಕಳಿದ್ದು, ಮಕ್ಕಳಿಗೆ ಕಿರುಕುಳ ನೀಡಿರುವ ಶಿಕ್ಷಕರ ವಿರುದ್ದ ಕ್ರಮಕ್ಕೆ ಪೋಷಕರು ಆಗ್ರಹಿಸಿದ್ದಾರೆ.
ಪ್ರಾಂಶುಪಾಲ, ವಾರ್ಡನ್, ಶಿಕ್ಷಕ ಅಮಾನತು
ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಯಲುವಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳನ್ನು ಮಲದ ಗುಂಡಿಯೊಳಗೆ ಇಳಿಸಿ ಸ್ವಚ್ಛಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಂಶುಪಾಲರಾದ ಭಾರತಮ್ಮ, ವಾರ್ಡನ್ ಮಂಜುನಾಥ್ ಹಾಗೂ ಶಿಕ್ಷಕ ಮುನಿಯಪ್ಪ ಅವರನ್ನು ಅಮಾನತು ಮಾಡಲಾಗಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕ ನವೀನ್ ಕುಮಾರ್ ರಾಜ್, ಮೂವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಇದೊಂದು ತೀರಾ ಗಂಭೀರವಾದ ವಿಚಾರ. ವಸತಿ ಶಾಲೆಯ ಪ್ರಾಂಶುಪಾಲರು ಹಾಗೂ ಶಿಕ್ಷಕರು ದೊಡ್ಡ ಲೋಪ ಎಸಗಿದ್ದಾರೆ. ಆದ್ದರಿಂದ ಅಮಾನತುಗೊಳಿಸಿ ತನಿಖೆ ನಡೆಸಲು ನಿರ್ದೇಶನ ನೀಡಿದ್ದೇನೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕರಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ವರದಿ ನೀಡಲು ಸೂಚನೆ ನೀಡಿದ್ದೇನೆ ಎಂದರು.
ಮೊರಾರ್ಜಿ ದೇಸಾಯಿ ಶಾಲೆಗೆ ಜಿಲ್ಲಾ ನ್ಯಾಯಾಧೀಶರಾದ ಸುನೀಲ್ ಹೊಸಮಣಿ ಹಾಗೂ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಮಕ್ಕಳ ಬಳಿಯೂ ಸಮಸ್ಯೆಯನ್ನು ವಿಚಾರಿಸಿದ್ದಾರೆ. ಪ್ರತಿ ಕೊಠಡಿಗೂ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ ನ್ಯಾಯಾಧೀಶರು ಮಕ್ಕಳಿಂದ ದೂರು ಪಡೆದುಕೊಂಡರು ಎಂದು ತಿಳಿದುಬಂದಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications