ಕುರುಡುಮಲೆ ಗಣಪನಿಗೆ ಹರಕೆ ತೀರಿಸಿದ ಸುರೇಶ್ ಕುಮಾರ್
ಕೋಲಾರ, ಆಗಸ್ಟ್ 11: ಕೊರೊನಾ ಸೋಂಕಿನ ಆತಂಕದ ಮಧ್ಯೆಯೂ, ಟೀಕೆ ಆಕ್ಷೇಪಣೆ ನಡುವೆಯೂ ಎಸ್ ಎಸ್ ಎಲ್ ಸಿ ಪರೀಕ್ಷೆ, ಫಲಿತಾಂಶ ನಿರ್ವಿಘ್ನವಾಗಿ ನೆರವೇರಿದ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನಲ್ಲಿರುವ ಕುರುಡುಮಲೆ ಗಣಪನ ದರ್ಶನ ಪಡೆದು ಸಚಿವ ಸುರೇಶ್ ಕುಮಾರ್ ಹರಿಕೆ ತೀರಿಸಿದ್ದಾರೆ.
Recommended Video
ಇದೀಗ ಮನಸ್ಸು ನಿರಾಳವಾಯಿತು, ಕುರುಡುಮಲೆ ವಿನಾಯಕನ ಮಂದಿರಕ್ಕೆ ಹೋಗಿ ಭಗವಂತನಿಗೆ ಶರಣಾದೆ ಅಂತ ಸುರೇಶ್ ಕುಮಾರ್ ಹೇಳಿಕೊಂಡಿದ್ದಾರೆ. ಕೊರೊನಾ ಸೋಂಕಿನ ಮಧ್ಯೆ ಹಟ ತೊಟ್ಟವರಂತೆ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಿಸಿದ್ದ ಶಿಕ್ಷಣ ಸಚಿವ ಸುರೇಶ್ ಕುಮಾರ್, ನಿನ್ನೆ ಫಲಿತಾಂಶವನ್ನೂ ಖುದ್ದು ಅವರೇ ಪ್ರಕಟಿಸಿ ಸಮಾಧಾನದ ನಿಟ್ಟುಸಿರುಬಿಟ್ಟರು. ಶಿಕ್ಷಣ ಸಚಿವರಾಗಿ ಸುರೇಶ್ ಕುಮಾರ್ ಪಟ್ಟ ಶ್ರಮಕ್ಕೆ ಎಲ್ಲೆಡೆಯಿಂದ ಇದೀಗ ಪ್ರಶಂಸೆಯ ಮಹಾಪೂರವೇ ಹರಿದು ಬರುತ್ತಿದೆ.
ಯಾವೊಬ್ಬ ವಿದ್ಯಾರ್ಥಿಯೂ ಆತಂಕ ಎದುರಿಸದೇ, ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಪ್ಪಾ ಎಂದು ಸಚಿವ ಸುರೇಶ್ ಕುಮಾರ್ ಅವರು ಈ ಮುನ್ನ ಕೋಲಾರದ ಮುಳಬಾಗಿಲಿನ ಕುರುಡುಮಲೆ ಗಣಪನಿಗೆ ಹರಿಕೆ ಹೊತ್ತಿದ್ದರು. ಹೀಗಾಗಿ ಎಲ್ಲವೂ ಸುಸೂತ್ರವಾಗಿ ನೆರವೇರಿದ್ದರಿಂದ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಿಸಿ, ಭುಜದ ಮೇಲಿನ ಭಾರ ಇಳಿದವರಂತೆ ಕೋಲಾರ ಜಿಲ್ಲೆಯ ಮುಳಬಾಗಿಲು ಕಡೆಗೆ ಬಂದಿದ್ದರು.

ಇಲ್ಲಿನ ಇತಿಹಾಸ ಪ್ರಸಿದ್ದ ಕುರುಡುಮಲೆ ಗಣೇಶ ದೇಗುಲಕ್ಕೆ ದಂಪತಿ ಸಮೇತ ಆಗಮಿಸಿ ಹರಿಕೆ ತೀರಿಸಿದರು. ಗಣಪನಿಗೆ ಪೋಷಕರು, ಶಿಕ್ಷಕರ ಪರ ಸಾಷ್ಟಾಂಗ ನಮಸ್ಕಾರ ಹಾಕಿದರು. ಬಹು ನಿರೀಕ್ಷಿತ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಯಿತು. ನನ್ನ ಮನಸ್ಸು ನಿರಾಳವಾಯಿತು. ಕುರುಡುಮಲೆ ವಿನಾಯಕ ಮಂದಿರಕ್ಕೆ ಬಂದು ಭಗವಂತನಿಗೆ ಶರಣಾದೆ ಎಂದರು ಸುರೇಶ್ ಕುಮಾರ್.
-
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
ಇಂದಿನಿಂದ SSLC ಪರೀಕ್ಷೆ: 8.66 ಲಕ್ಷ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರ ಶುಭಹಾರೈಕೆ; ಆತಂಕಬೇಡ ಎಂದ ಸರ್ಕಾರ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು












Click it and Unblock the Notifications