ಕೋಲಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೋಲಾರದ ಪ್ರಸಿದ್ಧ ಚಿಕ್ಕತಿರುಪತಿ ದೇಗುಲದಲ್ಲಿ ಎರಡು ದಿನ ಪ್ರವೇಶ ನಿರ್ಬಂಧ

By ಕೋಲಾರ ಪ್ರತಿನಿಧಿ
|
Google Oneindia Kannada News

ಕೋಲಾರ, ಜುಲೈ 2: ಕೊರೊನಾ ಸೋಂಕಿತ ಪ್ರಕರಣಗಳು ಏರಿಕೆಯಾಗುತ್ತಿರುವ ಕಾರಣ, ಮಾಲೂರು ತಾಲೂಕಿನ ಪ್ರಸಿದ್ಧ ಚಿಕ್ಕತಿರುಪತಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಇನ್ನು ಮುಂದೆ ಶನಿವಾರ, ಭಾನುವಾರ ಭಕ್ತರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

Recommended Video

Facebook brings a new Update to reduce sharing of Fake news | Oneindia Kannada

ರಾಜ್ಯಾದ್ಯಂತ ಇಂದಿನಿಂದ ಭಕ್ತರಿಗೆ ತೆರೆದುಕೊಂಡ ದೇಗುಲಗಳು...ರಾಜ್ಯಾದ್ಯಂತ ಇಂದಿನಿಂದ ಭಕ್ತರಿಗೆ ತೆರೆದುಕೊಂಡ ದೇಗುಲಗಳು...

ದೇಗುಲವನ್ನು ಈ ಎರಡೂ ದಿನ ಮುಚ್ಚುವಂತೆ ಕೋಲಾರ ಜಿಲ್ಲಾಧಿಕಾರಿ ಸತ್ಯಭಾಮ ಆದೇಶ ಹೊರಡಿಸಿದ್ದಾರೆ. ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿದ್ದು, ದೇವಸ್ಥಾನದ ಅರ್ಚಕರು ಹಾಗೂ ಗ್ರಾಮಸ್ಥರು ಶನಿವಾರ ಹಾಗೂ ಭಾನುವಾರ ದೇವಾಲಯ ಪ್ರವೇಶ ನಿರ್ಬಂಧಕ್ಕೆ ಮನವಿ ಸಲ್ಲಿಸಿದ್ದರು. ಈ ಮನವಿಗೆ ಸ್ಪಂದಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

Entry Restricted For Devotees On Saturday And Sunday To Chikkatirupathi Temple In Kolar

ಆಷಾಢದಲ್ಲಿ ಶನಿವಾರ, ಭಾನುವಾರ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಚಿಕ್ಕತಿರುಪತಿ ದೇವಸ್ಥಾನಕ್ಕೆ ಬರುತ್ತಾರೆ. ದೇವಸ್ಥಾನದಿಂದ 2 ಕಿ.ಮೀ ದೂರದಲ್ಲೇ ನಾಲ್ಕು ಪಾಸಿಟಿವ್ ಪ್ರಕರಣಗಳು ಬಂದಿವೆ. ಜೊತೆಗೆ ಆಂಧ್ರ ಹಾಗೂ ತಮಿಳುನಾಡು ಭಾಗದಿಂದಲೂ ಹೆಚ್ಚಿನ ಭಕ್ತರು ಇಲ್ಲಿಗೆ ಬರುತ್ತಾರೆ. ಹಾಗೆಯೇ ಸಾಮಾಜಿಕ ಅಂತರ ಪಾಲನೆಯೂ ಆಗುತ್ತಿಲ್ಲ. ಕೆಲವರು ಮಾಸ್ಕ್ ಧರಿಸುತ್ತಿಲ್ಲ. ಈ ಕಾರಣಗಳಿಂದ ಮನವಿ ಸಲ್ಲಿಸಲಾಗಿತ್ತು.

English summary
As the number of coronavirus cases increasing, entry restricted for devotees to chikkatirupati Venkateswara Swamy temple on saturday and sunday
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X