"ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ, ಮೆರವಣಿಗೆ ನಿಷಿದ್ಧ''
ಕೋಲಾರ, ಆಗಸ್ಟ್ 12: ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಈ ಬಾರಿ ಕೋಲಾರ ಜಿಲ್ಲೆಯಾದ್ಯಾಂತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆ ಮಾಡುವುದು, ವಿಸರ್ಜನಾ ಮೆರವಣಿಗೆ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಸಿ.ಸತ್ಯಭಾಮ ಅವರು ತಿಳಿಸಿದರು.
ಇಂದು ತಮ್ಮ ಕಚೇರಿಯ ನ್ಯಾಯಾಂಗ ಸಭಾಂಗಣಗಲ್ಲಿ ಏರ್ಪಡಿಸಿದ್ದ ಪತ್ರಿಕಾಗೊಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪರಿಸರ ಹಾನಿಕಾರಕ ಪಿಓಪಿ ಗಣಪತಿ ವಿಗ್ರಹಗಳ ಮಾರಾಟ ಮತ್ತು ಬಳಕೆಯನ್ನು ಜಿಲ್ಲೆಯಲ್ಲಿ ನಿಷೇಧಿಸಲಾಗಿದೆ. ಇದರ ಬದಲಾಗಿ ಸಗಣಿಯಿಂದ ಗೋದಿ ಅಥವಾ ರಾಗಿ ಹಿಟ್ಟಿಗೆ ಅರಿಶಿನ ಸೇರಿಸಿ ತಯಾರಿಸಿದ ಗಣಪತಿ ಮೂರ್ತಿಗಳನ್ನು ತಮ್ಮ ಮನೆಗಳಲ್ಲಿ ಮಾತ್ರ ಬಳಸಿ, ಪೂಜಿಸಬೇಕು ಎಂದರು.
ಅರಿಶಿಣದ ಬಳಕೆಯಿಂದ ರೋಗ ನಿರೋದಕ ಶಕ್ತಿಯು ಹೆಚ್ಚುತ್ತದೆ. ಇದರಿಂದ ಪರಿಸರಕ್ಕೆ ಯಾವುದೇ ಹಾನಿ ಆಗದೆ ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಿಸುವುದರಿಂದ ಪರಿಸರಕ್ಕೆ ಅಪಾರ ಕೊಡುಗೆ ನೀಡಿದಂತೆ ಆಗುತ್ತದೆ ಎಂದು ತಿಳಿಸಿದರು.

ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಪ್ರತಿಷ್ಠಾಪನೆ, ಧ್ವನಿವರ್ಧಕ ಬಳಕೆ, ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ವಿಸರ್ಜನೆಯನ್ನು ನಿಷೇಧಿಸಲಾಗಿದೆ. ಮನೆಗಳಲ್ಲಿಯೇ ಗಣೇಶ ಪ್ರತಿಷ್ಠಾಪಿಸಿ ಆರಾಧಿಸಬಹುದಾಗಿದೆ. ಸಾರ್ವಜನಿಕ ಕೆರೆ, ಬಾವಿಗಳಲ್ಲಿ ಈ ಬಾರಿ ಗಣೇಶ ವಿಸರ್ಜನೆಗೆ ಅವಕಾಶ ಇರುವುದಿಲ್ಲ. ತಮ್ಮ ತಮ್ಮ ಮನೆಗಳಲ್ಲಿಯೇ ನೀರಿನ ಬಕೆಟ್, ಪಾತ್ರೆಗಳಲ್ಲಿ ವಿಸರ್ಜನೆ ಮಾಡಬೇಕು ಎಂದು ಸೂಚಿಸಿದರು.
ಗಣೇಶ ಹಬ್ಬವನ್ನು ಎಲ್ಲರೂ ಸರಳವಾಗಿ ಮತ್ತು ಕುಟುಂಬಕ್ಕೆ ಸೀಮಿತಗೊಳಿಸಿ ನಮ್ಮ-ನಮ್ಮ ಮನೆಗಳಲ್ಲಿಯೊ ಆಚರಿಸೋಣ. ಶಾಂತಿ, ಸೌಹರ್ದತೆಯಿಂದ ಹಬ್ಬ ಆಚರಿಸಿ, ಮಾದರಿಯಾಗೋಣ ಎಂದು ಮನವಿ ಮಾಡಿದರು.

ಸರ್ಕಾರದ ನಿರ್ದೇಶನದಂತೆ ಸಾರ್ವಜನಿಕವಾಗಿ ಗಣೇಶೋತ್ಸವ ಆಚರಣೆಗೆ ಅವಕಾಶವಿಲ್ಲದಿರುವುದರಿಂದ ಡಿಜೆ ಅಥವಾ ಮೈಕ್ ಬಳಕೆಯನ್ನು ಸಂಪೂರ್ಣ ನಿಷೇಧಿಸಲಾಗಿದ್ದು, ಪ್ರತಿಯೊಬ್ಬರು ಮಾಸ್ಕ್ ಬಳಕೆ ಮಾಡಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಗಣೇಶ ಹಬ್ಬವನ್ನು ಆಚರಿಸಬೇಕು ಎಂದ ಅವರು, ಪಿಓಪಿ ಗಣೇಶ ಮೂರ್ತಿಗಳ ಸಂಗ್ರಹ ಅಥವಾ ಮಾರಾಟ ಮಾಡುವುದು ಕಂಡು ಬಂದರೆ ಪೋಲಿಸ್ ಸಹಾಯವಾಣಿಗೆ ಸಾರ್ವಜನಿಕರು ಮಾಹಿತಿ ನೀಡಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಬಿತ್ತಿ ಚಿತ್ರವನ್ನು ಬಿಡುಗಡೆ ಮಾಡಲಾಯಿತು.
ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ವಿಸ್ಟನ್ ಐಪೋನ್ ತಯಾರಿಕಾ ಕಂಪನಿಗೆ 43 ಎಕರೆ ಜಮೀನು ಮಂಜೂರಾಗಿರುತ್ತದೆ. ಇನ್ನು 5 ಎಕರೆ ಜಮೀನಿಗಾಗಿ KIADB ಗೆ ಪ್ರಸ್ತಾವನೆಯನ್ನು ಸಲ್ಲಿಸಿದ್ದಾರೆ. 687 ಕೋಟಿ ರೂ. ವೆಚ್ಚದಲ್ಲಿ ಕಂಪನಿಯು ಆರಂಭವಾಗುತ್ತಿದ್ದು, ಸುಮಾರು 10 ಸಾವಿರ ಜನಕ್ಕೆ ಉದ್ಯೋಗವಾಕಾಶ ದೊರೆಯಲಿದೆ. ಇದರಲ್ಲಿ ಶೇ 92 ರಷ್ಟು ಉದ್ಯೋಗವಾಕಾಶಗಳು ಸ್ಥಳೀಯರಿಗೆ ಮೀಸಲಿಡಲಾಗಿದೆ ಎಂದು ಮಾಹಿತಿ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಾದ ಕಾರ್ತಿಕ್ ರೆಡ್ಡಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಿಲ್ಲಾ ಪ್ರಾದೇಶಿಕ ಕಛೇರಿಯ ಜಿಲ್ಲಾ ಪರಿಸರ ಅಧಿಕಾರಿಗಳಾದ ವಾಸುದೇವ ಎಸ್.ಕೆ, ಡಿವೈಎಸ್ಪಿ ಚೌಡಪ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತಿರಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications