ಕೋಲಾರ ರಾಜಕೀಯದಲ್ಲಿ ಹೊಸ ಟ್ವಿಸ್ಟ್: ಕಾಂಗ್ರೆಸ್ಸಿಗೆ ಕೆ.ಎಚ್.ಮುನಿಯಪ್ಪ ಗುಡ್ ಬೈ?
ಕೋಲಾರ, ಜು. 2: ಕೋಲಾರ ರಾಜಕೀಯ ಮತ್ತೆ ಮುನ್ನೆಲೆಗೆ ಬಂದಿದೆ. ಇಲ್ಲಿ ಕಾಂಗ್ರೆಸ್ ಪಕ್ಷದೊಳಗೇ ಆಂತರಿಕ ಕಲಹದಿಂದ ಬೇಸತ್ತು ನಾಯಕರುಗಳು ಬಹಿರಂಗ ಕಾದಾಟ ಮುಗಿದ ಬಳಿಕ ಈಗ ಹೊಸದೊಂದು ಟ್ವಿಸ್ಟ್ ಸಿಕ್ಕಿದೆ. ಮಾಜಿ ಸಂಸದ, ಕೇಂದ್ರ ಮಾಜಿ ಮಂತ್ರಿ ಕೆ.ಎಚ್. ಮುನಿಯಪ್ಪ ಕಾಂಗ್ರೆಸ್ಗೆ ಗುಡ್ಬಐ ಹೇಳಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ಸೋತ ಬಳಿಕ ಪಕ್ಷದಲ್ಲಿ ಹಿನ್ನೆಲೆಗೆ ಸರಿದಂತಿರುವ ಮುನಿಯಪ್ಪ ಇತ್ತೀಚಿನ ವಿಧಾನ ಪರಿಷತ್ ಚುನಾವಣೆಯಲ್ಲೂ ಆಕಾಂಕ್ಷಿ ಆಗಿದ್ದರು. ಆದರೆ, ಅಲ್ಲೂ ಅವರಿಗೆ ಹಿನ್ನಡೆಯಾಯಿತು. ಈ ಮಧ್ಯೆ ಅವರು ಕಾಂಗ್ರೆಸ್ನಲ್ಲಿ ಬೇಸತ್ತಿದ್ದಾರೆ, ಬಿಜೆಪಿ ಸೇರಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು. ದಕ್ಷಿಣ ಕರ್ನಾಟಕದಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡಿರುವ ಬಿಜೆಪಿ ಮುನಿಯಪ್ಪ ಅವರನ್ನು ಸೆಳೆಯಲು ಪ್ರಯತ್ನಿಸುತ್ತಿದೆ ಎಂಬ ವದಂತಿಗಳೂ ಹರಡಿಕೊಂಡಿವೆ.
ಮುನಿಯಪ್ಪ ಕೊಟ್ಟ ಉತ್ತರವೇನು?
ಮುನಿಯಪ್ಪ ಬಿಜೆಪಿ ಸೇರಲಿದ್ದಾರೆಯೇ ಎಂಬ ಪ್ರಶ್ನೆಗೆ ಅವರೇ ಉತ್ತರ ನೀಡಿದ್ದಾರೆ. "ನಾನು ಕಾಂಗ್ರೆಸ್ ಬಿಟ್ಟು ಯಾವ ಪಕ್ಷಕ್ಕೂ ಹೋಗುವುದಿಲ್ಲ, ಕೋಲಾರದಲ್ಲಿ 30 ವರ್ಷ ನನ್ನನ್ನು ಬೆಳೆಸಿದ ಮುಖಂಡರು, ನಾಯಕರು ತೀರ್ಮಾನ ತೆಗೆದುಕೊಳ್ಳಲಿದ್ದಾರೆ." ಎಂದು ಕೆ.ಎಚ್. ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ.

"ನಾನು ಸೋತ ಕಾರಣಕ್ಕೆ ನಿರ್ಲಕ್ಷ್ಯ ಮಾಡುತ್ತಿದ್ದಾರೆ. ರಮೇಶ್ ಕುಮಾರ್ ಕಾಂಗ್ರೆಸ್ ಪಕ್ಷದಲ್ಲಿ ನಾವಿರಬೇಕಾ ಅಥವಾ ಕೆ.ಎಚ್.ಮುನಿಯಪ್ಪ ಇರಬೇಕಾ ಅಂತಾ ಕೇಳುತ್ತಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಶಕುನಿ ಪಾತ್ರ ಮಾಡುತ್ತಿರುವ ರಮೇಶ್ ಕುಮಾರ್ ಅವರಿಗೆ ಮುಂದೆ ಉತ್ತರ ಸಿಗಲಿದೆ," ಎಂದು ಕಿಡಿಕಾರಿದ್ದಾರೆ.
ಜಿಲ್ಲೆಯ ಎಲ್ಲಾ ಶಾಸಕರಿಗೆ ಮಾಟ- ಮಂತ್ರ ಮಾಡಿಸಿದ್ದಾರೆ. ಜಿಲ್ಲೆಯಲ್ಲಿ ಯಾರೂ ಮಂತ್ರಿ ಆಗಬಾರದು ಎಂಬ ನಿಟ್ಟಿನಲ್ಲಿ ರಮೇಶ್ ಕುಮಾರ್ ಶಕುನಿ ಪಾತ್ರವಹಿಸಿದ್ದಾರೆ. ಪಾಂಡವರ ವನವಾಸ ಮುಗಿದಿದೆ, ಯುದ್ಧ ಆರಂಭವಾಗಲಿದೆ ಶಕುನಿ, ದುರ್ಯೋಧನ, ಎಲ್ಲರೂ ಆತುರದಲ್ಲಿದ್ದಾರೆ ಎಂದು ತಮ್ಮದೇ ಪಕ್ಷದ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ರಮೇಶ್ ಕುಮಾರ್ಗೆ ಜನರೇ ಉತ್ತರ
ಏಕಪಾತ್ರ ಮಾಡುತ್ತಿರುವ ರಮೇಶ್ ಕುಮಾರ್ ಗೆ ಮುಂದೆ ಜನರು ಉತ್ತರ ಕೊಡುತ್ತಾರೆ.ಅವರ ಮಾತಿಗೆ ಎಲ್ಲರೂ ಮುರ್ಖರಾಗಿದ್ದಾರೆ.ಯುದ್ಧದಲ್ಲಿ ಕೃಷ್ಣನ ಸಹಕಾರದಿಂದ ಪಾಂಡವರು ಗೆಲ್ಲಲಿದ್ದಾರೆ.

ನಾನು ಯಾರ ಬಳಿ ಹೋಗಿ ಅಪಾಯಿಂಟ್ಮೆಂಟ್ ತೆಗೆದುಕೊಂಡಿಲ್ಲ, ಎಲ್ಲಾವೂ ಸಮಯ ನಿರ್ಣಯ ಮಾಡಲಿದೆ.ನಾವು ಶಾಂತವಾಗಿರೋಣ. ವಿಪಕ್ಷ ನಾಯಕ ಸಿದ್ದರಾಮಯ್ಯ ,ಡಿಕೆ ಶಿವಕುಮಾರ್ ಅವರು ಯಾವ ರೀತಿ ಕ್ರಮ ಕೈಗೊಳ್ಳುತ್ತಾರೆ ನೋಡೋಣ ಎಂದು ಹೇಳಿದರು.
ಒಂದು ತಿಂಗಳು ಕಾಲಾವಕಾಶ ಕೊಡುವೆ
ನನ್ನ ಬಿಟ್ಟು ಮಾಜಿ ಶಾಸಕರನ್ನು ಪಕ್ಷಕ್ಕೆ ಬರಮಾಡಿಕೊಂಡಿರುವ ಬಗ್ಗೆ ಜನರಿಗೆ ತಿಳಿಸಬೇಕು, ಇವರನ್ನು ಸೇರಿಸಿಕೊಳ್ಳುವ ಬಗ್ಗೆ ನಮ್ಮ ವಿರೋಧ ಇದೆ.ಸುಧಾಕಾರ ಮತ್ತು ಕೊತ್ತೂರು ಮಂಜುನಾಥ್ ಅವರು ಲೋಕಸಭಾ ಚುನಾವಣೆಯಲ್ಲಿ ಯಾವ ರೀತಿ ನಡೆದುಕೊಂಡಿದ್ದಾರೆ ಎಂಬುದು ಜನರಿಗೆ ತಿಳಿದಿದೆ. ಒಂದು ತಿಂಗಳು ಕಾಲಾವಕಾಶ ಕೊಡುವೆ ಕಾಂಗ್ರೆಸ್ ಹೈಕಮಾಂಡ್ ಯಾವ ರೀತಿ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಕಾದು ನೋಡುವೆ ಎಂದು ಹೇಳಿದ್ದಾರೆ.
Recommended Video
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications