"ಡ್ರಗ್ಸ್ ಜಾಲ ಪತ್ತೆಗೆ ಅಬಕಾರಿ ಇಲಾಖೆಯಿಂದಲೂ ಸಹಕಾರ"
ಕೋಲಾರ, ಸೆಪ್ಟೆಂಬರ್ 11: "ಡ್ರಗ್ಸ್ ದಂಧೆ ಮೊದಲಿನಿಂದಲೂ ನಡೆಯುತ್ತಿದೆ. ಅಬಕಾರಿ ಇಲಾಖೆಯೂ ಈ ಜಾಲವನ್ನು ಪತ್ತೆ ಹಚ್ಚುವ ಕೆಲಸ ಮಾಡುತ್ತಿದೆ. ಪೊಲೀಸ್ ಇಲಾಖೆಗೆ ಅಬಕಾರಿ ಇಲಾಖೆಯೂ ಸಹಕಾರ ನೀಡುತ್ತಿದೆ" ಎಂದು ಹೇಳಿದ್ದಾರೆ ಅಬಕಾರಿ ಸಚಿವ ಎಚ್.ನಾಗೇಶ್.
ಕೋಲಾರದಲ್ಲಿ ಇಂದು ಡ್ರಗ್ಸ್ ಮಾಫಿಯಾ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, "ವಿದ್ಯಾರ್ಥಿಗಳು ಮಾದಕ ವಸ್ತುವಿನ ವ್ಯಸನಕ್ಕೆ ಹೆಚ್ಚು ಒಳಗಾಗಿದ್ದಾರೆ. ಜೊತೆಗೆ ತೊಗರಿ ಗಿಡಗಳ ಮಧ್ಯೆ ಗಾಂಜಾ ಬೆಳೆದರೆ ಗೊತ್ತಾಗುವುದಿಲ್ಲ. ಗಾಂಜಾ ಗಿಡಗಳು ನೋಡಲು ತೊಗರಿ ಗಿಡಗಳ ರೀತಿ ಕಾಣುತ್ತದೆ, ಹೀಗಾಗಿ ಗಾಂಜಾ ಬೆಳೆಯುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಗಾಂಜಾ ಜಾಲ ಪತ್ತೆ ಹಚ್ಚುವುದರಲ್ಲಿ ಪೊಲೀಸ್ ಇಲಾಖೆಯ ಜೊತೆ ಜಂಟಿ ಕಾರ್ಯಾಚರಣೆ ಮಾಡುತ್ತೇವೆ" ಎಂದು ಹೇಳಿದರು.
ಇಂದು ಎಚ್.ಡಿ.ಕುಮಾರಸ್ವಾಮಿ ಅವರು ಸಿಎಂ ಭೇಟಿ ಆದ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿ, "ಇನ್ನು ಎರಡೂವರೆ ವರ್ಷಗಳ ಕಾಲ ಯಡಿಯೂರಪ್ಪನವರೇ ಸಿಎಂ ಆಗಿರುತ್ತಾರೆ. ನಮ್ಮಲ್ಲಿ ಒಗ್ಗಟ್ಟಿದೆ, ಶಿಸ್ತಿನಿಂದ ಕೆಲಸ ಮಾಡುತ್ತಿದ್ದೇವೆ. ಸಂಕಷ್ಟದಲ್ಲೂ ಎಲ್ಲರನ್ನೂ ನಿಭಾಯಿಸಿಕೊಂಡು ಸಿಎಂ ಕೆಲಸ ಮಾಡುತ್ತಿದ್ದಾರೆ. ಮುಂದಿನ ಬೆಳವಣಿಗೆ ಬಗ್ಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಲಿದೆ" ಎಂದರು.

Recommended Video
ಸಂಪುಟ ವಿಸ್ತರಣೆ ಕುರಿತೂ ಮಾತನಾಡಿ, "ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಊಹಾಪೋಹಗಳ ಬಗ್ಗೆ ಗೊತ್ತಿಲ್ಲ, ಸ್ಪಷ್ಟವಾದ ಚಿತ್ರಣವಿಲ್ಲ. ಅಧಿವೇಶನಕ್ಕೂ ಮುನ್ನ ಮಾಡ್ತಾರೋ ಇಲ್ಲವೋ ಆದಮೇಲೆ ಮಾಡ್ತಾರೋ ಗೊತ್ತಿಲ್ಲ. ಸಂಪುಟ ವಿಸ್ತರಣೆ, ಪುನರಚನೆ ಏನಿದ್ದರೂ ಸಿಎಂಗೆ ಬಿಟ್ಟದ್ದು" ಎಂದು ತಿಳಿಸಿದರು.
-
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral












Click it and Unblock the Notifications