ಇನ್ಫೋಸಿಸ್ ನಿಂದ ಬಡಮಕ್ಕಳಿಗೆ ಬೆಳಕು ನೀಡುವ 'ನನ್ನ ಕಣ್ಣು'
ಕೋಲಾರ, ಸೆಪ್ಟೆಂಬರ್ 11 : ಇನ್ಫೋಸಿಸ್ ಸಂಸ್ಥೆಯ 'ಸಮರ್ಪಣ' ವೇದಿಕೆ ಹಳ್ಳಿಯ ಬಡಮಕ್ಕಳಿಗೆ ಬೆಳಕು ನೀಡುವ 'ನನ್ನ ಕಣ್ಣು' ಎಂಬ ಒಂದು ವಿನೂತನ ಜನಪರ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.
ಏನಿದು ನನ್ನ ಕಣ್ಣು :
ಶಂಕರ ಐ ಫೌಂಡೇಶನ್ ವತಿಯಿಂದ ಇನ್ಫೋಸಿಸ್ ನ 'ಸಮರ್ಪಣ' ಸಂಸ್ಥೆಯ ಜೊತೆಗೂಡಿ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಎಲ್ಲ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿನ ಮಕ್ಕಳಿಗೆ ಉಚಿತವಾಗಿ ಕಣ್ಣು ಚಿಕಿತ್ಸೆ ಮಾಡಿ, ನ್ಯೂನತೆ ಇರುವ ಮಕ್ಕಳಿಗೆ ಉಚಿತವಾಗಿ ಕನ್ನಡಕ ಮತ್ತು ಕಣ್ಣಿನ ಆಪರೇಷನ್ ಮಾಡುವಂತಹ ಕಾರ್ಯಕ್ರಮವೇ ಈ 'ನನ್ನ ಕಣ್ಣು' ಕಾರ್ಯಕ್ರಮ.

ಇದರಂಗವಾಗಿ ಮೊನ್ನೆ ಶನಿವಾರ ಬೆಳಿಗ್ಗೆ 9ರಿಂದ ಬಂಗಾರಪೇಟೆಯ ತಾಲೂಕಿನ ಎಲ್ಲ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮಕ್ಕಳಿಗೆ ಉಚಿತವಾಗಿ ಕಣ್ಣು ಪರೀಕ್ಷೆ ಮಾಡಲಾಯಿತು. ಇನ್ಫೋಸಿಸ್ ಸಂಸ್ಥೆಯ ನೂರಕ್ಕೂ ಹೆಚ್ಚು ಉದ್ಯೋಗಿಗಳು ಇದರಲ್ಲಿ ಪಾಲ್ಗೊಂಡು ಈ ಒಳ್ಳೆಯ ಕಾರ್ಯಕ್ರಮದಲ್ಲಿ ಪಾಲುದಾರರಾದರು.
ಅನೇಕ ಮಕ್ಕಳಿಗೆ ಸರಿಯಾದ ಸಮಯದಲ್ಲಿ ಚಿಕಿತ್ಸೆ ಸಿಗದೇ ಅನೇಕರ ಕಣ್ಣುಗಳು ಹಾಳಾಗಿದ್ದು ಇಲ್ಲಿ ಕಂಡುಬಂದಿತು. ಇಂತಹ ಮಕ್ಕಳನ್ನ ವಿಶೇಷ ರೀತಿಯಲ್ಲಿ ಚಿಕಿತ್ಸೆ ಒಳಪಡಿಸಲು ಶಂಕರ ಕಣ್ಣಿನ ಆಸ್ಪತ್ರೆಯ ವೈದ್ಯರು ಪ್ರಯತ್ನಿಸುತ್ತಿದ್ದಾರೆ. ಹೀಗೆ ಅನೇಕ ಮಕ್ಕಳಲ್ಲಿ ನ್ಯೂನತೆ ಇರುವುದು ಕಂಡುಬಂತು.

ಇವರೆಲ್ಲರ ಕಣ್ಣಿನ ಯೋಗಕ್ಷೇಮವನ್ನು ಇನ್ಫೋಸಿಸ್ ನ 'ಸಮರ್ಪಣ' ಮತ್ತು ಶಂಕರ ಸಂಸ್ಥೆ ನೋಡಿಕೊಳ್ಳುತ್ತಿವೆ. ಇದೆ ರೀತಿ ಮುಂದೆಯೂ ಕೂಡ ಬೇರೆ ಬೇರೆ ತಾಲೂಕಿನಲ್ಲಿ 'ನನ್ನ ಕಣ್ಣು' ಕಾರ್ಯಕ್ರಮ ಮಾಡಲು ಈ ಸಂಸ್ಥೆ ತುದಿಗಾಲಲ್ಲಿ ನಿಂತಿದೆ.
ಹೀಗೆಯೇ ಎಲ್ಲ ಕಾರ್ಪೊರೇಟ್ ಸಂಸ್ಥೆಗಳು ಬಡ ಮಕ್ಕಳ ನೆರವಿಗೆ ನಿಂತರೆ, ಗ್ರಾಮೀಣ ಭಾಗದಲ್ಲಿರುವ ಹಲವಾರು ಬಡ ಮಕ್ಕಳ ಕಣ್ಣಿನ ಸಮಸ್ಯೆಯನ್ನು ಆರಂಭದಲ್ಲಿಯೇ ಚಿಕಿತ್ಸೆ ನೀಡಿ ಅವರ ಬಾಳಕ್ಕೆ ಬೆಳಕಾಗಲು ಸಾಧ್ಯವಿದೆ.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications