ನಕಲಿ ಜಾತಿ ಪ್ರಮಾಣಪತ್ರ: ಮುಳಬಾಗಿಲು ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಅಸಿಂಧು
ಬೆಂಗಳೂರು, ಏಪ್ರಿಲ್ 25: ನಕಲಿ ಜಾತಿ ಪ್ರಮಾಣ ಪತ್ರ ನೀಡಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ. ಕೋಲಾರ ಜಿಲ್ಲೆ, ಮುಳಬಾಗಿಲು ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದ ಶಾಸಕ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಕೊತ್ತನೂರು ಮಂಜುನಾಥ್ ಜಾತಿ ಪ್ರಮಾಣ ಪತ್ರ ನಕಲಿ ಎಂದಿರುವ ನ್ಯಾಯಾಲಯ ಅವರ ಪ್ರಮಾಣಪತ್ರವನ್ನು ರದ್ದುಗೊಳಿಸಿದೆ. ಜೊತೆಗೆ ಶಾಸಕತ್ವವನ್ನೂ ಅಸಿಂಧುಗೊಳಿಸಿದೆ.
2013ರ ವಿಧಾನಸಭೆ ಚುನಾವಣೆಯಲ್ಲಿ ಚುನಾವಣೆಯಲ್ಲಿ ತಾವು ಬುಡಗ ಜಂಗಮ (ಎಸ್ಸಿ) ಜಾತಿಗೆ ಸೇರಿದವರು ಎಂದು ಹೇಳಿ ಅವರು ಜಾತಿ ಪ್ರಮಾಣ ಪತ್ರವನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದರು. ಪಕ್ಷೇತರರಾಗಿ 2013ರಲ್ಲಿ ಸ್ಪರ್ಧಿಸಿದ್ದ ಅವರು 73,146 ಮತಗಳನ್ನು ಪಡೆಯುವ ಮೂಲಕ ಜೆಡಿಎಸ್ ಅಭ್ಯರ್ಥಿ ಎನ್. ಮುನಿಅಂಜಪ್ಪರನ್ನು ಸುಮಾರು 34 ಸಾವಿರ ಮತಗಳಿಂದ ಭರ್ಜರಿಯಾಗಿ ಸೋಲಿಸಿ ಶಾಸಕರಾಗಿದ್ದರು.
ಆದರೆ ಚುನಾವಣೆಯಲ್ಲಿ ಸೋತ ಎಂ. ಮುನಿಅಂಜಪ್ಪ ಕೋರ್ಟ್ ಮೆಟ್ಟಿಲೇರಿದರು. ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಮೀಸಲು ಕ್ಷೇತ್ರದಿಂದ ಮಂಜುನಾಥ್ ಸ್ಪರ್ಧಿಸಿದ್ದಾರೆ ಎಂದು ತಕರಾರು ತೆಗೆದಿದ್ದರು. ಮತ್ತು ಇದಕ್ಕೆ ಬೇಕಾದ ದಾಖಲೆಗಳನ್ನೂ ಅವರು ಸಲ್ಲಿಸಿದ್ದರು.

ಬರೋಬ್ಬರಿ ಐದು ವರ್ಗಳ ಕಾಲ ಈ ಪ್ರಕರಣದ ವಿಚಾರಣೆ ನಡೆದು ಇಂದು ನ್ಯಾಯಾಲಯ ತೀರ್ಪು ನೀಡಿದೆ.
ಅಭ್ಯರ್ಥಿ ಕಳೆದುಕೊಂಡ ಕಾಂಗ್ರೆಸ್
ಕಳೆದ ಬಾರಿ ಸ್ವತಂತ್ರವಾಗಿ ಸ್ಪರ್ಧಿಸಿ ಗೆದ್ದಿದ್ದ ಕೊತ್ತನೂರು ಮಂಜುನಾಥ್ ಅವರಿಗೆ ಕಾಂಗ್ರೆಸ್ ಈ ಬಾರಿ ಟಿಕೆಟ್ ನೀಡಿತ್ತು. ಕಳೆದ ಬಾರಿ 34 ಸಾವಿರ ಮತಗಳ ಅಂತರದಿಂದ ಗೆದ್ದಿದ್ದರಿಂದ, ಜೊತೆಗೆ ಕಾಂಗ್ರೆಸ್ ಟಿಕೆಟ್ ನಿಂದ ಬೇರೆ ಸ್ಪರ್ಧಿಸಿದ್ದರಿಂದ ಈ ಬಾರಿ ಅವರ ಗೆಲುವು ಸುಲಭ ಎಂದುಕೊಳ್ಳಲಾಗಿತ್ತು. ಆದರೆ ಜಾತಿ ಪ್ರಮಾಣಪತ್ರ ರದ್ದಾಗಿ ಅವರೀಗ ಚುನಾವಣೆಗೇ ಸ್ಪರ್ಧಿಸುವಂತಿಲ್ಲ.
ಮಂಗಳವಾರ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದರಿಂದ ಕಾಂಗ್ರೆಸ್ ತನ್ನ ಅಧಿಕೃತ ಅಭ್ಯರ್ಥಿಯನ್ನು ಕಳೆದುಕೊಂಡಿದೆ. ಹೊಸ ಅಭ್ಯರ್ಥಿಯನ್ನು ಚುನಾವಣೆಗೆ ನಿಲ್ಲುಸುವಂತೆಯೂ ಇಲ್ಲ. ಹೀಗೆ ಗೆಲ್ಲುವ ಕ್ಷೇತ್ರವೊಂದನ್ನು 'ಕೈ'ಚೆಲ್ಲಿದಂತಾಗಿದೆ.
-
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ












Click it and Unblock the Notifications