ಡಿ.25 ರಂದು ಪ್ರಧಾನಿ ನರೇಂದ್ರ ಮೋದಿ ಜೊತೆ ಕೋಲಾರದ ರೈತ ವಿಡಿಯೋ ಸಂವಾದ
ಕೋಲಾರ, ಡಿಸೆಂಬರ್ 24: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ (ಡಿ.25) ರಂದು ಪಿಎಂ ಕಿಸಾನ್ ಯೋಜನೆ ಅನುಷ್ಠಾನ ಹಾಗೂ ಅನುಕೂಲಗಳ ಬಗ್ಗೆ ರೈತರೊಂದಿಗೆ ವಿಡಿಯೋ ಸಂವಾದ ನಡೆಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ರೈತರೊಂದಿಗಿನ ವಿಡಿಯೋ ಸಂವಾದದಲ್ಲಿ ಕರ್ನಾಟಕ ರಾಜ್ಯದಿಂದ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಜುಂಜನಹಳ್ಳಿ ರೈತ ಚಂದ್ರಪ್ಪ ಅವರು ಭಾಗವಹಿಸಲಿದ್ದಾರೆ.
ಕಿಸಾನ್ ಸಮ್ಮಾನ್ ಯೋಜನೆಯ 7ನೇ ಕಂತಿನ 18 ಸಾವಿರ ಕೋಟಿ ರೂ. ಸುಮಾರು 9 ಕೋಟಿ ರೈತರ ಖಾತೆಗೆ ನೇರವಾಗಿ ಜಮಾ ಆಗಲಿದೆ. ಹೀಗಾಗಿ ಯೋಜನೆಯ ಉಪಯೋಗಗಳು ಸ್ಥಳೀಯ ರೈತರ ಸಮಸ್ಯೆಗಳು ಸೇರಿದಂತೆ ಹಲವು ವಿಚಾರಗಳ ಕುರಿತು ಪ್ರಧಾನಿ ಮೋದಿ ಅವರೊಂದಿಗೆ ರೈತ ಚಂದ್ರಪ್ಪ ಅವರು ಬೆಂಗಳೂರಿನ ನಬಾರ್ಡ್ ಬ್ಯಾಂಕಿನಲ್ಲಿ ಮಧ್ಯಾಹ್ನ 12 ಗಂಟೆಗೆ ವಿಡಿಯೋ ಸಂವಾದದಲ್ಲಿ ನಡೆಸಲಿದ್ದಾರೆ.

ಡಿ.25 ರಂದು ಮಾಜಿ ಪ್ರಧಾನಿ ದಿ.ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನದಂದು ಉತ್ತಮ ಆಡಳಿತ ದಿನವೆಂದು ಆಚರಿಸಲಾಗುತ್ತದೆ. ಹೀಗಾಗಿ ದೇಶದ 6 ರಾಜ್ಯದ ರೈತರೊಂದಿಗೆ ವಿಡಿಯೋ ಸಂವಾದವನ್ನು ಮಾಡಲಿದ್ದಾರೆ.

ಈ ಕುರಿತು ಮಾತನಾಡಿರುವ ರೈತ ಚಂದ್ರಪ್ಪ, ನಾನು ಮೂಲತಃ ರೈತಾಪಿ ವರ್ಗದವನಾಗಿದ್ದು, ಪ್ರಧಾನಿ ಜೊತೆಗೆ ಸಂವಾದ ಮಾಡುತ್ತಿರುವದು ನನ್ನ ಅದೃಷ್ಟ. ಜಿಲ್ಲೆಯ ಹಾಗೂ ರಾಜ್ಯದ ರೈತರ ಪ್ರತಿನಿಧಿಯಾಗಿ, ಅವರ ಸಮಸ್ಯೆಗಳನ್ನು ಮೋದಿ ಅವರೊಂದಿಗೆ ಹಂಚಿಕೊಳ್ಳಲಿದ್ದೇನೆ ಎಂದು ಚಂದ್ರಪ್ಪ ಸುದ್ದಿವಾಹಿನಿಯೊಂದಕ್ಕೆ ತಿಳಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ












Click it and Unblock the Notifications