ಕೋಲಾರ: ಮಗಳ ಸಾವಿನ ಸುದ್ದಿ ತಿಳಿದು ತಂದೆ ಹೃದಯಾಘಾತದಿಂದ ಸಾವು
ಕೋಲಾರ, ಮೇ 26 : ಮಗಳ ಸಾವಿನ ಸುದ್ದಿ ತಿಳಿದ ತಂದೆ ಹೃದಯಾಘಾತದಿಂದ ಸಾವನ್ನಪ್ಪಿದ ದಾರುಣ ಘಟನೆ ಶುಕ್ರವಾರ ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದ ಮುತ್ಯಾಲಪೇಟೆಯಲ್ಲಿ ನಡೆದಿದೆ.
ಮೇ 20 ರಂದು ಮನೆಯಲ್ಲಿ ಗ್ಯಾಸ್ ರೀಫಿಲ್ಲಿಂಗ್ ಮಾಡುವ ವೇಳೆ ಬೆಂಕಿ ತಗುಲಿ ಶ್ರೀಕಂಠ (45) ಹಾಗೂ ಅವರ ಮಕ್ಕಳಾದ 18 ವರ್ಷದ ಮಧುಮತಿ, 10 ವರ್ಷದ ರಕ್ಷಿತ ಗಾಯಗೊಂಡಿದ್ದರು. ಅವರಲ್ಲಿ ರಕ್ಷಿತ ಎಂಬ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಸಾವನ್ನಪ್ಪಿದ್ದಾಳೆ.[ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಛಾವಣಿ ಕುಸಿದು ಮೂರು ದಿನದ ಮಗುವಿಗೆ ಗಾಯ]

ಮಗಳ ಸಾವಿನ ಸುದ್ದಿ ತಿಳಿದ ತಂದೆ ಶ್ರೀಕಂಠ ಶುಕ್ರವಾರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.












Click it and Unblock the Notifications