ತೋಟಕ್ಕೆ ಬೆಂಕಿ; ಬೆಳೆದು ನಿಂತಿದ್ದ 5 ಎಕರೆ ಬಾಳೆ ಸುಟ್ಟು ಬೂದಿ
ಕೋಲಾರ, ಮಾರ್ಚ್ 18; ಕಟಾವಿಗೆ ಬಂದಿದ್ದ ಬಾಳೆ ತೋಟಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಘಟನೆ ಕೋಲಾರದಲ್ಲಿ ನಡೆದಿದೆ. ಸುಮಾರು 5 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಬಾಳೆ ಬೆಳೆ ಸುಟ್ಟು ಭಸ್ಮವಾಗಿದೆ.
ಸುಟ್ಟು ಕರಕಲಾಗಿರುವ ಬಾಳೆ ತೋಟ, ತೋಟವನ್ನು ಆತಂಕದಿಂದ ಕಣ್ಣೀರಿಡುತ್ತಾ ನೋಡುತ್ತಿರುವ ರೈತ, ಮತ್ತೊಂದೆಡೆ ಬೆಂಕಿಯ ಕೆನ್ನಾಲಿಗೆಗೆ ಕಪ್ಪಗಾಗಿರುವ ಬಾಳೆ ಗಿಡ ಹಾಗೂ ಬಾಳೆ ಕಾಯಿಗಳು ಈ ದೃಶ್ಯ ಕಂಡು ಬಂದಿದ್ದು ಕೋಲಾರ ತಾಲೂಕಿನ ಕಾಕಿನತ್ತ ಗ್ರಾಮದ ರೈತ ಕೃಷ್ಣಪ್ಪ ತೋಟದಲ್ಲಿ.
ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ಸುಮಾರು 5 ಎಕರೆ ಪ್ರದೇಶದಲ್ಲಿ ಫಸಲಿಗೆ ಬಂದು ನಿಂತಿದ್ದ ಬಾಳೆ ಸಂಪೂರ್ಣವಾಗಿ ಭಸ್ಮವಾಗಿದೆ. ಕಳೆದ ರಾತ್ರಿ ಯಾರೋ ಕಿಡಿಗೇಡಿಗಳು ಪಕ್ಕದ ಜಮೀನಿನಲ್ಲಿ ಬೆಳೆದು ನಿಂತಿದ್ದ ಒಣ ಹುಲ್ಲಿಗೆ ಬೆಂಕಿ ಹೊತ್ತಿಸಿರುವ ಅನುಮಾನವಿದ್ದು, ಈ ಬೆಂಕಿ ಬಾಳೆ ತೋಟಕ್ಕೂ ಹಬ್ಬಿದೆ.

ಸಾಲ ಸೋಲ ಮಾಡಿ ಬೆಳೆದಿದ್ದ ಬಾಳೆ ಬೆಳೆ ಇನ್ನೇನು ಮಾರಾಟ ಮಾಡಬೇಕಿತ್ತು. ಫಸಲು ಕೈಗೆ ಬಂದು ತಮ್ಮ ಕಷ್ಟಗಳೆಲ್ಲಾ ನಿವಾರಣೆಯಾಗುತ್ತೆ ಎಂದುಕೊಂಡಿದ್ದ ರೈತನ ಬಾಳೆ ತೋಟ ಬೆಂಕಿಗಾಹುತಿಯಾಗಿದೆ. ಇದು ರೈತನನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ.
ಜಿಲ್ಲೆಯಲ್ಲಿ ರೈತರು ಮಳೆಯಿಲ್ಲದೆ ಕಂಗಾಲಾಗಿದ್ದಾರೆ. ಈ ಮಧ್ಯೆ ಸಾಲ ಸೋಲ ಮಾಡಿ ನೀರಿಲ್ಲದ ಸಮಯದಲ್ಲೂ ಸಿಕ್ಕ ಅಲ್ಪಸ್ವಲ್ಪ ಪ್ರಮಾಣದ ನೀರಿನಲ್ಲಿ ಬೆಳೆ ಬೆಳೆದಿದ್ದರು. ಇಷ್ಟೆಲ್ಲಾ ಸಂಕಷ್ಟದ ಮಧ್ಯೆ ಬೆಳೆ ಬೆಳೆದ ಲಾಭದ ನಿರೀಕ್ಷೆಯಲ್ಲಿದ್ದ ರೈತನ ಪರಿಸ್ಥಿತಿ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ.

ಬಾಳೆ ತೋಟ ಮಾತ್ರವಲ್ಲದೆ ತೋಟದಲ್ಲಿ ಅಳವಡಿಸಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಡ್ರಿಪ್ ಹಾಗೂ ಸ್ಪಿಂಕ್ಲರ್ ಸಹ ಬೆಂಕಿಗಾಹುತಿಯಾಗಿವೆ. ವಿಷಯ ತಿಳಿದ ಸ್ಥಳೀಯರು ಕೃಷ್ಣಪ್ಪ ಜೊತೆಗೆ ಬೆಂಕಿ ನಂದಿಸುವ ಕಾರ್ಯ ಮಾಡಿದರೂ ಸುಮಾರು 90 ಟನ್ನಷ್ಟು ಇಳುವರಿ ನಷ್ಟವಾಗಿದೆ.
ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಬೆಳೆ ನಷ್ಟ ಕುರಿತು ಪ್ರಕರಣ ದಾಖಲಾಗಿದೆ. ವಿಷಯ ತಿಳಿದ ತೋಟಗಾರಿಕೆ ಇಲಾಖೆ ಅಧಿಕಾರಿಗಳ ತಂಡ ಬಾಳೆ ತೋಟಕ್ಕೆ ಭೇಟಿ ನೀಡಿದೆ. ಸರ್ಕಾರದ ಮಾರ್ಗಸೂಚಿಯಂತೆ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.
-
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ












Click it and Unblock the Notifications