ಗ್ರಾ.ಪಂ ಚುನಾವಣೆ ದ್ವೇಷ: ಹಿಪ್ಪುನೇರಳೆಗೆ ರಾತ್ರೋರಾತ್ರಿ ವಿಷ ಹಾಕಿದ ಕಿಡಿಗೇಡಿಗಳು
ಕೋಲಾರ, ಜನವರಿ 22: ಗ್ರಾಮ ಪಂಚಾಯತಿ ಚುನಾವಣೆಯ ದ್ವೇಷದ ಕಿಚ್ಚು ಇನ್ನು ಆರಿಲ್ಲವೆಂಬಂತೆ ಕಾಣುತ್ತದೆ. ಚುನಾವಣೆಯ ಸೋಲಿನ ಸೇಡನ್ನು ತೀರಿಸಿಕೊಳ್ಳಲು ಕೆಲ ಕಿಡಿಗೇಡಿಗಳು ಹಿಪ್ಪುನೇರಳೆಗೆ ರಾತ್ರೋರಾತ್ರಿ ವಿಷ ಹಾಕಿದ್ದಾರೆ. ರೈತ ಬೆಳೆದ ಲಕ್ಷಾಂತರ ರೂಪಾಯಿ ಬೆಲೆಬಾಳುವ ಹಿಪ್ಪುನೇರಳೆ ತಿಪ್ಪೆಗೆ ಸೇರಿರುವ ಘಟನೆ ಕೋಲಾರ ತಾಲೂಕಿನ ತಿಪ್ಪೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ತಿಪ್ಪೇನಹಳ್ಳಿ ಗ್ರಾಮದಲ್ಲಿ ರೇಷ್ಮೆ ಅಧಿಕಾರಿಗಳು ವಿಷಪೂರಿತ ಹಿಪ್ಪು ನೇರಳೆ ಸೋಪುನ್ನು ತಿಂದು ನರಳಾಡುತ್ತಿರುವ ರೇಷ್ಮೆ ಹುಳುಗಳು ಹಾಗೂ ಹಿಪ್ಪು ನೇರಳೆ ತೋಟಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಗ್ರಾಮ ಪಂಚಾಯತಿ ಚುನಾವಣೆಗಳು ಮುಗಿದು 20 ದಿನ ಕಳೆದರೂ ಸಹ ಕೋಲಾರ ತಾಲೂಕಿನ ತಿಪ್ಪೇನಹಳ್ಳಿ ಗ್ರಾಮದಲ್ಲಿ ಸೇಡಿನ ಕಿಚ್ಚು ಮಾತ್ರ ಕಡಿಮೆಯಾಗಿಲ್ಲ. ಗುರುವಾರ ರಾತ್ರಿ ಕೆಲ ಕೀಡಿಗೇಡಿಗಳು ಗ್ರಾಮದಲ್ಲಿನ ಕೆಲ ಹಿಪ್ಪು ನೇರಳೆ ತೋಟಗಳಿಗೆ ವಿಷವನ್ನು ಹಾಕಿ ವಿಕೃತಿಯನ್ನು ಮೆರೆದಿದ್ದಾರೆ.

ಗ್ರಾಮದ ಸೀತಾರಾಮ, ಮಂಜುನಾಥ್, ಶಿವಾನಂದ, ರಮೇಶ್, ನಾಗರಾಜ್, ನಾರಾಯಣಸ್ವಾಮಿ ಮತ್ತು ಎಂ.ರಮೇಶ್ ಅವರ ರೇಷ್ಮೆ ತೋಟಗಳಿಗೆ ವಿಷವನ್ನು ಸಿಂಪಡಿಸಿರುವ ಪರಿಣಾಮ ನಾಲ್ಕನೇ ಜ್ವರಕ್ಕೆ ಬಂದ ರೇಷ್ಮೆ ಹುಳುಗಳು ವಿಷಪೂರಿತ ಹಿಪ್ಪುನೇರಳೆ ಸೋಪುನ್ನು ತಿಂದು ನರಳಾಡಿ ಸಾವನ್ನಪ್ಪಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ರೇಷ್ಮೆ ಅಧಕಾರಿಗಳು ಸ್ಥಳಕ್ಕೆ ಆಗಮಿಸಿ ಹಿಪ್ಪು ನೇರಳೆ ತೋಟ ಮತ್ತು ರೇಷ್ಮೆ ಹುಳುವಿನ ಮನೆಯನ್ನು ಪರಿಶೀಲಿಸಿದ್ದಾರೆ.
ಇತ್ತೀಚಿಗೆ ನಡೆದ ಗ್ರಾಮ ಪಂಚಾಯತಿ ಚುನಾವಣೆಯೇ ಇದಕ್ಕೆ ಕಾರಣ, ಚುನಾವಣೆಯಲ್ಲಿ ಕೆಲ ವ್ಯಕ್ತಿಗಳನ್ನು ಬೆಂಬಲಿಸಿಲ್ಲವೆಂದು ಹಿಪ್ಪುನೇರಳೆ ತೋಟಗಳಿಗೆ ರಾತ್ರೋರಾತ್ರಿ ವಿಷ ಹಾಕಿದ್ದು, ಇದರಿಂದ ಸುಮಾರು ೪ ರಿಂದ ೫ ಲಕ್ಷ ರೂ.ಗಳು ನಷ್ಟವುಂಟಾಗಿದೆ. ಇನ್ನು ಇಂತಹ ಕೃತ್ಯ ಹೊಸದೇನು ಅಲ್ಲವೆಂದು ಗ್ರಾಮಸ್ಥರು ಹೇಳುತ್ತಾರೆ.

ಕಳೆದ ಹಲವು ವರ್ಷಗಳ ಹಿಂದೆ ಇದೇ ರೀತಿ ಟೊಮ್ಯಾಟೊ ಬೆಳೆಗೂ ವಿಷವನ್ನು ಹಾಕಲಾಗಿತ್ತು. ಆ ಸಂದರ್ಭದಲ್ಲಿ ನಾವು ಊರಿನ ಮಾನ ಕಾಪಾಡಲು ದೂರು ನೀಡಿರಲಿಲ್ಲ, ಆದರೆ ಇಂತಹ ಘಟನೆಗಳು ಮತ್ತೆ ಮರುಕಳಿಸುತ್ತಿರುವುದರಿಂದ ಪೊಲೀಸರಿಗೆ ದೂರು ನೀಡಲಾಗಿದೆ. ಇನ್ನು ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ರೈತರಿಗೆ ಆಗಿರುವ ನಷ್ಟವನ್ನು ಸರ್ಕಾರ ಪರಿಹಾರ ರೂಪದಲ್ಲಿ ನೀಡಬೇಕು ಮತ್ತು ವಿಷ ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಒಟ್ಟಾರೆಯಾಗಿ ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಎನ್ನುವ ಹಾಗೆ ಯಾರೂ ಮಾಡಿದ ತಪ್ಪಿಗೆ ಲಕ್ಷಾಂತರ ರೂಪಾಯಿ ಬೆಲೆ ಬಾಳುವಂತಹ ಹಿಪ್ಪುನೇರಳೆ ಮತ್ತು ರೇಷ್ಮೆ ಹುಳುಗಳು ತಿಪ್ಪೆಗೆ ಸುರಿಯಲಾಗಿದ್ದು, ತಪ್ಪಿತಸ್ಥರ ಯಾರೇ ಆಗಲಿ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂಬುದು ನಮ್ಮ ಆಶಯ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications