ಸಿಎಂ ಯಡಿಯೂರಪ್ಪ ಜನಪರ ಬಜೆಟ್ ಕೊಟ್ಟಿದ್ದಾರೆ: ವಿಶ್ವನಾಥ್
ಕೋಲಾರ, ಮಾರ್ಚ್ 08: ವಿರೋಧ ಪಕ್ಷದವರು ಇರುವುದೇ ವಿರೋಧ ಮಾಡುವುದಕ್ಕೆ, ಆದರೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಒಂದು ಯೋಗ್ಯವಾದಂತಹ ಆಯವ್ಯಯವನ್ನು ಎಲ್ಲಾ ವಗ೯ದವರನ್ನು ಮನಸ್ಸಿನಲ್ಲಿಟ್ಟುಕೊಂಡು ಮಂಡಿಸಿದ್ದಾರೆ ಎಂದು ಮಾಜಿ ಸಚಿವ ಎಚ್.ವಿಶ್ವನಾಥ್ ಹೇಳಿದರು.
ಕೋಲಾರದಲ್ಲಿ ಮಾತನಾಡಿದ ಅವಾರು, ಜನರ ಸಂಕಷ್ಟಗಳನ್ನು ಹೃದಯದಲ್ಲಿಟ್ಟುಕೊಂಡು ಒಂದು ಒಳ್ಳೆಯ, ಜನಪರ ಬಜೆಟ್ ನ್ನು ಕೊಟ್ಟಿದ್ದಾರೆ ಎಂದು ಎಚ್.ವಿಶ್ವನಾಥ್ ಪ್ರತಿಕ್ರಿಯಿಸಿದರು.
ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಹರಿಹಾಯ್ದ ಅವರು, ಮಂಡ್ಯದಲ್ಲಿ ಕುಮಾರಸ್ವಾಮಿ ಯಾವ ರೀತಿ ಚುನಾವಣೆ ಮಾಡಿದ್ದಾರೆ ಎಂದು ನನಗೂ ಗೊತ್ತಿದೆ, ಜನರಿಗೂ ತಿಳಿದಿದೆ ಎಂದರು. ಕುಮಾರಸ್ವಾಮಿ ದುಡ್ಡು ಇರುವ ವ್ಯಕ್ತಿ, ಕುಮಾರಸ್ವಾಮಿ ಅಂದ್ರೆ ಅದು ಕೇವಲ ಕುಮಾರಸ್ವಾಮಿ ಮಾತ್ರ ಆಗಿರಬಾರದು. ಸಾವ೯ಜನಿಕ ಜೀವನದಲ್ಲಿ ನಾವೂ ಹೇಗೆ ಇರುತ್ತೇವೆ ಅಂತ ಅವರೂ ಅಥ೯ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಎಚ್.ಡಿ ಕುಮಾರಸ್ವಾಮಿ ತನ್ನ ಮಗನ ನಿಶ್ಚಿತಾಥ೯ಕ್ಕೆ ಥೈಲ್ಯಾಂಡ್ ನಿಂದ ಹಾರ ತರಿಸಿದ್ದಾರೆ. ಐವತ್ತು ಅರವತ್ತು ಎಕರೆಯಲ್ಲಿ ಮದುವೆ ಮಾಡಲು ವ್ಯವಸ್ಥೆ ಮಾಡಿಕೊಂಡಿದ್ದಾರೆ ಇದೆಲ್ಲಾ ಬೇಕಾ ಅಂತ ನಾನು ಕುಮಾರಸ್ವಾಮಿಯವರಿಗೆ ಪ್ರಶ್ನೆ ಮಾಡಿದ್ದೇನೆ ಅಷ್ಟೇ. ಸಾವ೯ಜನಿಕರ ಜೀವನದಲ್ಲಿ ಇರುವವರು ಆದಶ೯ವಾಗಿ ಬದುಕಬೇಕು ಹಾಗೂ ಆದಶ೯ವಾಗಿ ಮದುವೆಯಾಗಬೇಕು ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರಿಗೆ ವ್ಯಂಗ್ಯವಾಡಿದರು.
ಇದೇ ವೇಳೆ ಮಾತನಾಡಿದ ಇನ್ನೊಬ್ಬ ಮಾಜಿ ಸಚಿವ ಆರ್.ಶಂಕರ್, ಬಿಜೆಪಿಯ ಹಿರಿಯ ನಾಯಕರು ಈಗಲೂ ನನ್ನ ಜೊತೆಯಲ್ಲಿದ್ದಾರೆ ಎಂದು ತಿಳಿಸಿದರು. ಕುರುಬರ ಸಮುದಾಯದ ಕಾಯ೯ಕ್ರಮಕ್ಕೆ ಕೋಲಾರಕ್ಕೆ ಆಗಮಿಸಿದ್ದ ವೇಳೆ ಮಾತನಾಡಿದ ಅವರು ಮೊದಲಿನಂತೆ ಈಗಲೂ ಬಿಜೆಪಿಯ ನಾಯಕರು ನನ್ನ ಜೊತೆ ಇದ್ದಾರೆ ಎಂದು ಹೇಳಿದರು.

ಮುಂದೆ ಏನಾಗುತ್ತೆ ಅಂತ ಭವಿಷ್ಯ ಹೇಳುವ ತ್ರಿಕಾಲ ಜ್ಞಾನಿ ನಾನಲ್ಲ ಆದರೆ ನೂರಕ್ಕೆ ನೂರು ಸಕಾ೯ರ ಸುಭದ್ರವಾಗಿರುತ್ತದೆ ಅಂತ ತಿಳಿಸಿದರು. ನಾನು ಮಂತ್ರಿ ಆಗಿದ್ದವನು ಹಾಗಾಗಿ ನಿಗಮ ಮಂಡಳಿಗೆ ಬೇಡಿಕೆ ಇಟ್ಟಿಲ್ಲ. ಮೊನ್ನೆ ನಡೆದ ಎಂಎಲ್ಸಿ ಚುನಾವಣೆ ವೇಳೆ ಲಕ್ಷ್ಮಣ್ ಸವದಿ ಜೊತೆಯಲ್ಲಿ ನಾನು ಸಹ ಸಿಎಂ ಬಳಿ ಟಿಕೇಟ್ ಗೆ ಬೇಡಿಕೆ ಇಟ್ಟಿದ್ದೆ, ಆದರೆ ಟಿಕೆಟ್ ನನ್ನ ಕೈ ತಪ್ಪಿದೆ.
ಜೂನ್ ತಿಂಗಳಲ್ಲಿ ನಡೆಯುವ ಎಂಎಲ್ಸಿ ಚುನಾವಣೆಯಲ್ಲಿ ನನಗೆ ಟಿಕೆಟ್ ಸಿಗಲಿದೆ, ಸ್ವತಃ ಸಿಎಂ ಬಿ.ಎಸ್ ಯಡಿಯೂರಪ್ಪನವರೇ ಟಿಕೆಟ್ ಕೊಟ್ಟು ಮಂತ್ರಿ ಮಾಡುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications