HD Kumaraswamy-Amit Shah: ಜೆಡಿಎಸ್ಗೆ ಇಲ್ಲ ಕೋಲಾರ, ಎರಡು ಸೀಟು ಮಾತ್ರ ಪಕ್ಕಾ!
ಕೋಲಾರ, ಮಾರ್ಚ್ 17: ರಾಜ್ಯದಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ ಕಾಂಗ್ರೆಸ್ ಅನ್ನು ಸೋಲಿಸುವ ಮಾತನಾಡುತ್ತಿದ್ದರೂ ಕೂಡ, ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಜೆಡಿಎಸ್ ನಡುವಿನ ಹಗ್ಗ ಜಗ್ಗಾಟ ಮುಂದುವರಿದಿದೆ. ಎರಡು ಪಕ್ಷಗಳ ನಡುವೆ 25 ಮತ್ತು 3 ಸೀಟು ಹಂಚಿಕೆ ಒಪ್ಪಂದವಾಗಿದೆ ಎಂಬ ಬಗ್ಗೆ ಮಾಹಿತಿಯಿತ್ತು. ಆದರೆ, ಈಗ ಅದರಲ್ಲಿ ಬದಲಾವಣೆಯಾಗಿದೆ.
ಹೌದು.. ಬಿಜೆಪಿಯ ಕೇಂದ್ರ ನಾಯಕತ್ವದಿಂದ ಕೋಲಾರ ಕ್ಷೇತ್ರದ ಬಗ್ಗೆ ಖಚಿತ ಭರವಸೆ ಪಡೆಯಲು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ವಿಫಲರಾಗಿದ್ದಾರೆ. ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಮಾಜಿ ಮುಖ್ಯಮಂತ್ರಿ ಕೋಲಾರ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಡುವಂತೆ ಮನವಿ ಮಾಡಿದ್ದರು.

ಎಚ್ ಡಿ ಕುಮಾರಸ್ವಾಮಿ ಮನವಿಗೆ ನೋ ಎಂದ ಅಮಿತ್ ಶಾ!
ಕೋಲಾರ ಲೋಕಸಭಾ ಕ್ಷೇತ್ರವನ್ನು ಬಿಟ್ಟುಕೊಡುವ ಎಚ್ ಡಿ ಕುಮಾರಸ್ವಾಮಿ ಅವರ ಮನವಿಗೆ ಯಾವುದೇ ಭರವಸೆ ನೀಡಲು ಗೃಹ ಸಚಿವ ಅಮಿತ್ ಶಾ ನಿರಾಕರಿಸಿದ್ದಾರೆ. ಕ್ಷೇತ್ರ ಬಿಟ್ಟುಕೊಡುವ ಬಗ್ಗೆ ರಾಜ್ಯ ಬಿಜೆಪಿ ನಾಯಕರ ಸಲಹೆ ಪಡೆದು ಒಂದೆರೆಡು ದಿನದಲ್ಲಿ ವಾಪಸ್ ತಿಳಿಸುವುದಾಗಿ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಾರ್ಚ್ 16 ರ ಶನಿವಾರ ನವದೆಹಲಿಗೆ ಬಂದಿದ್ದ ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ, ಅಮಿತ್ ಶಾ ಭೇಟಿಯಾದ ಬಳಿಕ ಸಂಜೆ ತರಾತುರಿಯಲ್ಲಿ ಬೆಂಗಳೂರಿಗೆ ವಾಪಸ್ ಬಂದಿದ್ದಾರೆ. ಆದರೆ, ಸಭೆಯಲ್ಲಿ ಏನಾಯಿತು ಎಂಬುದರ ಕುರಿತು ಸುದ್ದಿಗಾರರೊಂದಿಗೆ ಮಾಹಿತಿ ಹಂಚಿಕೊಳ್ಳಲು ಕೂಡ ಮಾಜಿ ಸಿಎಂ ನಿರಾಕರಿಸಿದ್ದಾರೆ.
ಬಿಜೆಪಿ- ಜೆಡಿಎಸ್ ಮೈತ್ರಿಕೂಟದ ಭಾಗವಾಗಿ ಹಾಸನ ಮತ್ತು ಮಂಡ್ಯ ಕ್ಷೇತ್ರಗಳನ್ನು ಹಂಚಿಕೆ ಮಾಡಿರುವ ಜೆಡಿಎಸ್ಗೆ ಕೋಲಾರ ಕ್ಷೇತ್ರವನ್ನೂ ಬಿಟ್ಟುಕೊಡಬೇಕು ಎಂದು ಎಚ್ ಡಿ ಕುಮಾರಸ್ವಾಮಿ ಬೇಡಿಕೆ ಇಟ್ಟಿದ್ದಾರೆ. ಒಂದು ವೇಳೆ ಕೋಲಾರದಲ್ಲಿ ಪಕ್ಷ ಸೀಟು ಪಡೆಯುವಲ್ಲಿ ಯಶಸ್ವಿಯಾದರೆ ಮುಳಬಾಗಲು ಶಾಸಕ ಸಮೃದ್ಧಿ ಮಂಜುನಾಥ್ ಅಥವಾ ಮಾಜಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರನ್ನು ಕಣಕ್ಕಿಳಿಸಲು ಮುಂದಾಗಿದೆ.

ಆದರೆ, ಪ್ರಸ್ತುತ ಲೋಕಸಭೆಯಲ್ಲಿ ಪಕ್ಷದ ಎಸ್ ಮುನಿಸ್ವಾಮಿ ಪ್ರತಿನಿಧಿಸುತ್ತಿರುವ ಕ್ಷೇತ್ರ ಬಿಜೆಪಿಯ ಕ್ಷೇತ್ರವಾಗಿರುವುದರಿಂದ ಈ ಕ್ಷೇತ್ರವನ್ನು ಕೈ ಬಿಡಬೇಡಿ ಎಂದು ರಾಜ್ಯ ಬಿಜೆಪಿ ನಾಯಕರು ಕೇಂದ್ರ ನಾಯಕರನ್ನು ಒತ್ತಾಯಿಸಿದ್ದಾರೆ. ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಕ್ಷೇತ್ರವನ್ನು ಕಳೆದ ಬಾರಿ ಬಿಜೆಪಿ ತನ್ನ ವಶ ಮಾಡಿಕೊಂಡಿದೆ. ಇದನ್ನು ಕಳೆದುಕೊಳ್ಳಲು ಬಿಜೆಪಿ ಸಿದ್ಧವಿಲ್ಲ.
ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಅಳಿಯ, ಖ್ಯಾತ ಹೃದ್ರೋಗ ತಜ್ಞ ಡಾ.ಸಿ.ಎನ್.ಮಂಜುನಾಥ್ ಬೆಂಗಳೂರು ಗ್ರಾಮಾಂತರದಿಂದ ಬಿಜೆಪಿ ಟಿಕೆಟ್ನಲ್ಲಿ ಸ್ಪರ್ಧಿಸುತ್ತಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷವು ಮೂರು ಕ್ಷೇತ್ರಗಳನ್ನು ಪಡೆದುಕೊಂಡಿದೆ ಎಂಬುದು ರಾಜ್ಯ ಬಿಜೆಪಿ ನಾಯಕರ ವಾದ.
ಇನ್ನು, ಎಚ್ ಡಿ ಕುಮಾರಸ್ವಾಮಿ ತಮ್ಮ ಬೆಂಬಲಿಗರೊಂದಿಗೆ ಮಾತನಾಡುತ್ತಾ, ಸೀಟು ಹಂಚಿಕೆ ಒಪ್ಪಂದವನ್ನು ಅಂತಿಮಗೊಳಿಸುವಲ್ಲಿ ಬಿಜೆಪಿಯ ಸೀಟು ಹಂಚಿಕೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಮೈತ್ರಿ ಪಾಲುದಾರರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಬಿಜೆಪಿ ಕರ್ನಾಟಕದ 20 ಕ್ಷೇತ್ರಗಳಿಗೆ ಏಕಪಕ್ಷೀಯವಾಗಿ ಅಭ್ಯರ್ಥಿಗಳನ್ನು ಘೋಷಿಸಿದೆ ಎಂದು ಹೇಳಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications