ಕಾಂಗ್ರೆಸ್ನಲ್ಲೂ ಹಲವರು ಸೂಟು ಹೊಲಿಸಿಕೊಂಡಿದ್ದಾರೆ; ಎಚ್ಡಿಕೆ
ಕೋಲಾರ, ಜೂನ್ 18; "ಮುಖ್ಯಮಂತ್ರಿ ಆಗುವುದಕ್ಕೆ ಕೆಲವರು ಸೂಟ್ ಹೊಲಿಸಿಕೊಂಡಿದ್ದಾರೆ. ಕಾಂಗ್ರೆಸ್ನಲ್ಲೂ ಸೂಟ್ ಹೊಲಿಸಿಕೊಂಡು ರೆಡಿ ಇದ್ದಾರೆ" ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದರು.
ಶುಕ್ರವಾರ ಕೋಲಾರದಲ್ಲಿ ಮಾತನಾಡಿದ ಅವರು, "ಕೂಡಲೇ ಕೊರೊನಾ ವಿಚಾರವಾಗಿ ಕಲಾಪ ಕರೆಯಬೇಕು. ಬಿಜೆಪಿ ಪಕ್ಷದ ಶಾಸಕರಲ್ಲೇ ಹೊಂದಾಣಿಕೆ ಇಲ್ಲ. ನಾಯಕತ್ವ ಗೊಂದಲ ಒಂದು ದುರಾದೃಷ್ಟಕರ ವಿಚಾರವಾಗಿದೆ" ಎಂದರು.
"ಕಾಂಗ್ರೆಸ್ನಲ್ಲೂ ಮುಖ್ಯಮಂತ್ರಿಯಾಗಲು ಸೂಟ್ ಹೊಲಿಸಿಕೊಂಡು ರೆಡಿ ಇದ್ದಾರೆ. ಗೊತ್ತಾಗುತ್ತೆ 2023 ರಲ್ಲಿ ಏನು ಆಗುತ್ತೆ ಅಂತ" ಎಂದು ಕುಮಾರಸ್ವಾಮಿ ತಿಳಿಸಿದರು.

"ನಮ್ಮದು ರಾಕ್ಷಸಿ ಸರ್ಕಾರ ಅಂತ ಹೇಳಿ ಹೋದ ಒಬ್ಬ ಶಾಸಕ ಭ್ರಷ್ಟಾಚಾರದ ಬಗ್ಗೆ ದಾಖಲೆ ಬಿಡುಗಡೆ ಮಾಡುತ್ತಾರಂತೆ. ಕೇವಲ ನೀರಾವರಿ ಇಲಾಖೆಯಲ್ಲಿ ಮಾತ್ರ ಭ್ರಷ್ಟಾಚಾರವಿಲ್ಲ. ಎಲ್ಲ ಇಲಾಖೆಯಲ್ಲೂ ಇದೆ" ಎಂದು ಆರೋಪಿಸಿದರು.
"ಬಿಜೆಪಿಯವರು ದಂಗೆ ನಡೆಸುವ ಕಾಲವಲ್ಲ ಇದಲ್ಲ. ಜನರು ಕಷ್ಟದಲ್ಲಿ ಇದ್ದಾರೆ. ಸರ್ಕಾರ ತನ್ನ ಅಸ್ಥಿರತೆ ತೋರಿಸುತ್ತ ಕುಳಿತುಕೊಂಡರೆ ಜನರ ಬದುಕು ಏನಾಗಬೇಕು?. ಸ್ವಾಮೀಜಿಗಳು ಧಾರ್ಮಿಕ ವಿಚಾರದಲ್ಲಿ ಆಸಕ್ತಿ ವಹಿಸಬೇಕು. ನಾಡಿನ ಜನರ ಪರವಾಗಿ ಸ್ವಾಮೀಜಿಗಳು ಇರಬೇಕು" ಎಂದರು.
ಎಚ್. ವಿಶ್ವನಾಥ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ, "ಯಾರು ಯಾರು ಯಾವ ಟೈಂನಲ್ಲಿ ಹೃದಯದಲ್ಲಿ ಇರುತ್ತಾರೆ ಅಂತ ನನಗೆ ಗೊತ್ತಿದೆ. ಬೇಕಾದಾಗ ಹೃದಯದಲ್ಲಿ ಇಟ್ಟುಕೊಳ್ಳುತ್ತಾರೆ. ಬೇಡವೆಂದಾಗ ಜೆಡಿಎಸ್ ಪಕ್ಷದ ಬಗ್ಗೆ ಟೀಕೆ ಮಾಡುತ್ತಾರೆ" ಎಂದು ಟಾಂಗ್ ನೀಡಿದರು.
ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, "ಬಿಜೆಪಿ ಸರ್ಕಾರ ಬರಬೇಕಾದರೆ ಕಾಂಗ್ರೆಸ್ ನೇರ ಕಾರಣ. ಬಿಜೆಪಿಯ ದುರಾಡಳಿತದಲ್ಲಿ ಕಾಂಗ್ರೆಸ್ನವರದ್ದು ಸಮಾನ ಪಾಲಿದೆ. ಚುನಾವಣೆಯಲ್ಲಿ ನಾನು ಯಾರ ಜೊತೆಗೂ ರಾಜಿ ಮಾಡಿಕೊಂಡಿಲ್ಲ. ಸಿದ್ದರಾಮಯ್ಯ ಏನು ಮಹಾ ಹರಿಶ್ಚಂದ್ರರ?" ಎಂದು ಪ್ರಶ್ನಿಸಿದರು.
"ಸಿದ್ದರಾಮಯ್ಯ ಅವರಿಂದ ನಾನು ಏನೂ ಕಲಿಯಬೇಕಿಲ್ಲ. 2008ರಲ್ಲಿ ಆಪರೇಷನ್ ಕಮಲ ಚುನಾವಣೆಯಲ್ಲಿ ನೀವು ಯಡಿಯೂರಪ್ಪನವರ ಬಳಿ ಹಣ ಪಡೆದಿರಿ ಎಂದು ನಿಮ್ಮ ಆಪ್ತರು ಹೇಳಿದ್ದಾರೆ. ಉಪ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸೋಕೆ ನೀವು ಹಣ ಪಡೆದಿದ್ದೀರಿ. ಯಾವ ಟೈಂನಲ್ಲಿ ಕತ್ತು ಕೊಯ್ಯಬೇಕು ಅನ್ನೋದು ಸಿದ್ದರಾಮಯ್ಯ ಜಾಯಮಾನ. ನಿಮಗೆ ಎಷ್ಟು ಕೋಟಿ ಬಂತು?, ನಿಮ್ಮ ಜೇಬಲ್ಲಿ ಎಷ್ಟು ಹಣ ಹೋಯ್ತು ಅಂತ ನಿಮ್ಮ ಆಪ್ತರು ಹೇಳಿದ್ದಾರೆ" ಎಂದು ಹೇಳಿದರು.
"ನನ್ನ ಬಗ್ಗೆ ಮಾತನಾಡುವಾಗ ಹುಷಾರ್, ನಾಲಿಗೆ ಬಿಗಿ ಹಿಡಿದು ಮಾತನಾಡಿ. ಜಿಂದಾಲ್ ವಿಚಾರದಲ್ಲಿ ನಾನು ಏಕೆ ಕಿಕ್ ಬ್ಯಾಕ್ ಪಡೆದುಕೊಳ್ಳಲಿ. ಹಾಗಿದ್ದರೆ ಕ್ಯಾಬಿನೆಟ್ ಸಬ್ ಕಮಿಟಿ ಏಕೆ ಮಾಡುತ್ತಿದ್ದೆ. ರಾಜ್ಯದ ಆಸ್ತಿ ಅಡವಿಟ್ಟು ರಾಜಕೀಯ ಮಾಡು ಅಂತ ನನ್ನಪ್ಪ ಹೇಳಿಕೊಟ್ಟಿಲ್ಲ" ಎಂದು ಕುಮಾರಸ್ವಾಮಿ ತಿಳಿಸಿದರು.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications