ವೈದ್ಯಕೀಯ ಶಿಕ್ಷಣ ಖಾತೆ ವಾಪಸ್ಸು ಕೊಟ್ಟಿದ್ದಕ್ಕೆ ಸಚಿವ ಸುಧಾಕರ್ ಹೇಳಿದ್ದೇನು?
ಕೋಲಾರ, ಜನವರಿ 25: ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಒಬ್ಬರ ಬಳಿ ಇರಬೇಕು. ಕೋವಿಡ್ ಕಂಟ್ರೋಲ್ ಹಾಗೂ ಲಸಿಕೆ ವಿಚಾರವಾಗಿ ಒಬ್ಬರ ಬಳಿಯೇ ಎರಡು ಇಲಾಖೆ ಇರಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ವೈದ್ಯಕೀಯ ಶಿಕ್ಷಣ ಖಾತೆ ವಾಪಸ್ಸು ಕೊಟ್ಟಿರುವ ವಿಚಾರವಾಗಿ ಕೋಲಾರದಲ್ಲಿ ಮಾತನಾಡಿದ ಸಚಿವ ಸುಧಾಕರ್, 7 ಜನರಿಗೆ ಖಾತೆ ಕೊಡುವ ಸಂದರ್ಭದಲ್ಲಿ ಅನಿವಾರ್ಯವಾಗಿ ಸಿಎಂ ಹಂಚಿಕೆ ಮಾಡಿದ್ದರು. ಈಗ ಮತ್ತೆ ವಾಪಸ್ಸು ಕೊಟ್ಟಿರುವುದಕ್ಕೆ ಸಿಎಂ ಅವರಿಗೆ ಅಭಿನಂದನೆ ತಿಳಿಸಿದರು.
ನಾವ್ಯಾರು ಒತ್ತಡ ತಂದು ಸ್ಥಾನ ಪಡೆದುಕೊಂಡಿಲ್ಲ. ಸಿಎಂ ಮಾರ್ಗದರ್ಶನದಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ. ಯಾರಿಗೆ ಯಾವ ಖಾತೆ ಕೊಡಬೇಕು ಅನ್ನುವುದು ಸಿಎಂ ಯಡಿಯೂರಪ್ಪ ಅವರಿಗೆ ಗೊತ್ತಿದೆ ಎಂದರು.

ಸಚಿವ ಮಾಧುಸ್ವಾಮಿ ಜೊತೆ ಸಿಎಂ ಮಾತನಾಡಿದ್ದಾರೆ. ಅವರ ಜೊತೆ ಚರ್ಚಿಸಿ ಸಿಎಂ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಆನಂದ್ ಸಿಂಗ್ ಜೊತೆಯೂ ಚರ್ಚಿಸಿ ತೀರ್ಮಾನಕ್ಕೆ ಬಂದಿದ್ದಾರೆ. ಬಿಜೆಪಿಯ ಭ್ರಷ್ಟಾಚಾರ ಹೊರಗೆ ತೆಗೆಯುತ್ತೇನಿ ಎಂದು ಮಾಧುಸ್ವಾಮಿ ಹೇಳಿರುವುದಿಲ್ಲ. ಆ ರೀತಿ ಅವರು ಹೇಳುವವರಲ್ಲ ಎಂದು ಹೇಳುವ ಮೂಲಕ ಬಿಜೆಪಿಯಲ್ಲಿ ಅಸಮಾಧಾನ ಇಲ್ಲ ಎಂದು ತಿಳಿಸಿದರು.
ಕೋಲಾರ ಜಿಲ್ಲೆಗೆ ಇಂದು ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಭೇಟಿ ನೀಡಿದ್ದು, ರೈತರ ಜೊತೆ ತುರ್ತು ಸಭೆ ಕರೆದಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಯಿತು.
ರೈತರ ಕುಂದುಕೊರತೆ ಆಲಿಸಲು ಸಭೆ ಕರೆದಿದ್ದು, ಸಭೆಯಲ್ಲಿ ನೂರಾರು ಜನ ರೈತರು ಭಾಗಿಯಾಗಿದ್ದರು. ಸಚಿವರು ತಡವಾಗಿ ಬಂದಿದಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ರೈತ ಮುಖಂಡರು ಗದ್ದಲ ಮಾಡಿದರು.
ನಮ್ಮನ್ನು ಸಭೆಗೆ ಕರೆದು ಟೈಂ ಪಾಸ್ ಮಾಡುತ್ತಾ ಇದ್ದೀರಾ. ನಮಗೇನು ಮಾಡುವುದಕ್ಕೆ ಕೆಲಸ ಇಲ್ಲವಾ ಎಂದು ಗಲಾಟೆ ಮಾಡಿ, ಸಭೆಯಿಂದ ಹೊರ ಹೋಗುವುದಕ್ಕೆ ಸಿದ್ಧರಾಗಿದ್ದರು.
ಈ ವೇಳೆ ಕೋಲಾರ ಎಸ್ಪಿ ಕಾರ್ತಿಕ್ ರೆಡ್ಡಿ ಅವರು ತಕ್ಷಣ ರೈತ ಮುಖಂಡರ ಮನವೊಲಿಸುವ ಪ್ರಯತ್ನ ಮಾಡಿದರು. ನಂತರ ಎಸ್ಪಿ ಮನವಿಗೆ ಸ್ಪಂದಿಸಿ ರೈತರು ಸಭೆಯಲ್ಲಿ ಕುಳಿತುಕೊಂಡರು.
ವಿಷಯ ತಿಳಿದು ತಕ್ಷಣ ಸಭೆಗೆ ಹಾಜರಾದ ಸಚಿವ ಸುಧಾಕರ್, ಕೃಷಿ ಕಾಯ್ದೆಗಳು ನಿಮ್ಮ ಪರವಾಗಿದೆ. ಯಾರೂ ಪ್ರತಿಭಟನೆ ಮಾಡಬೇಡಿ. ನರೇಂದ್ರ ಮೋದಿ ರೈತರ ಆದಾಯ ಹೆಚ್ಚಳ ಮಾಡುವ ಉದ್ದೇಶದಲ್ಲಿದ್ದಾರೆ. ಟ್ರಾಕ್ಟರ್ ಗಳಲ್ಲಿ ಬಂದು ಪ್ರತಿಭಟನೆ ಮಾಡಬೇಡಿ. ನಿಮಗೆ ಪ್ರತಿಭಟನೆ ಮಾಡುವ ಅಧಿಕಾರವಿದೆ. ಇದಕ್ಕಾಗಿ ಫ್ರೀಡಂ ಪಾರ್ಕ್ ನಲ್ಲಿ ವ್ಯವಸ್ಥೆ ಮಾಡಿದ್ದೇವೆ. ಟ್ರಾಕ್ಟರ್ ಗಳಲ್ಲಿ ಬಂದರೆ ವ್ಯವಸ್ಥೆ ಅಸ್ತವ್ಯಸ್ತವಾಗುತ್ತದೆ ಎಂದು ಮನವೊಲಿಸಲು ಪ್ರಯತ್ನಿಸಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications