ಕಾಂಗ್ರೆಸ್ ಕದ ತಟ್ಟುತ್ತಿರುವ ಮಾಜಿ ಸಚಿವ ವರ್ತೂರು ಪ್ರಕಾಶ್
ಕೋಲಾರ, ಫೆಬ್ರವರಿ 15; ಮಾಜಿ ಸಚಿವ ವರ್ತೂರು ಪ್ರಕಾಶ್ ಕಾಂಗ್ರೆಸ್ ಪಕ್ಷ ಸೇರಲು ಪ್ರಯತ್ನ ನಡೆಸುತ್ತಿದ್ದಾರೆ. "ಸಿದ್ದರಾಮಯ್ಯ ಅವರು ಏನೂ ಮಾಡು ಅಂದರೂ ಮಾಡುವುದಕ್ಕೆ ಸಿದ್ಧ" ಎಂದು ಅವರು ಹೇಳಿದ್ದಾರೆ.
ಸೋಮವಾರ ಕೋಲಾರದಲ್ಲಿ ಮಾತನಾಡಿದ ವರ್ತೂರು ಪ್ರಕಾಶ್, "ನನಗೆ ಕಾಂಗ್ರೆಸ್ ಸೇರಲು ಆಸೆಯಾಗಿದೆ. ಈಗಾಗಲೇ ಕಾಂಗ್ರೆಸ್ ಮುಖಂಡರ ಜೊತೆ ಮಾತುಕತೆ ನಡೆಯುತ್ತಿದೆ" ಎಂದು ಹೇಳಿದರು.
"ಸಿದ್ದರಾಮಯ್ಯ ಅವರು ಏನೂ ಮಾಡು ಅಂದರೂ ಮಾಡುವುದಕ್ಕೆ ಸಿದ್ಧ. ಬೇಕಾದರೆ ಕೋಲಾರದಿಂದಲೇ ಅಹಿಂದ ಸಮಾವೇಶ ಪ್ರಾರಂಭಿಸಲಿ. ನಾನೇ ಮುಂದೆ ನಿಂತು ಒಂದರಿಂದ ಎರಡು ಲಕ್ಷ ಜನ ಸೇರಿಸುತ್ತೇನೆ" ಎಂದರು.

"ನಾನು ಸ್ಥಾಪನೆ ಮಾಡಿದ ನಮ್ಮ ಕಾಂಗ್ರೆಸ್ ಈಗ ಇಲ್ಲ. ನನ್ನದೇನಿದ್ದರೂ ನಡೆ ಇನ್ನು ಮುಂದೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಕಡೆ. ಇನ್ನು 26 ತಿಂಗಳ ಬಳಿಕ ಚುನಾವಣೆ ಬರಲಿದೆ. ನಾನು ಏನಾದರೂ ಮಾಡಿ ಶಾಸಕ ಆಗಬೇಕು" ಎಂದು ವರ್ತೂರು ಪ್ರಕಾಶ್ ತಿಳಿಸಿದರು.
"ನಮ್ಮ ಕಾರ್ಯಕರ್ತರ ಒತ್ತಾಯದಿಂದ ಕಾಂಗ್ರೆಸ್ ಬೇಕು ಎಂದು ಹೇಳುತ್ತಿದ್ದೇನೆ. ನನಗೆ ಮೊದಲಿನಿಂದಲೂ ಬಿಜೆಪಿ ಪಕ್ಷ ಕಂಡರೆ ಆಗುವುದಿಲ್ಲ. ಬಿಜೆಪಿ ಸರ್ಕಾರದಲ್ಲಿ ನಾನು ಮಂತ್ರಿ ಆಗಿದ್ದು ಹೌದು, ಆದರೆ ಪಕ್ಷವೇ ಬೇರೆ, ಸರ್ಕಾರವೇ ಬೇರೆ" ಎಂದು ಸ್ಪಷ್ಟಪಡಿಸಿದರು.
"ಸಮುದಾಯದ ವಿಚಾರದಲ್ಲಿ ಈಶ್ವರಪ್ಪ ನಮ್ಮ ನಾಯಕ ಅಂತ ಸಹ ಹೇಳಿದ್ದೆ. ಕಾಂಗ್ರೆಸ್ ಪಕ್ಷ ಸಿಗದೆ ಇದ್ದರೆ ಹೊಲಿಗೆ ಮಿಷನ್ ಗುರುತಿನಲ್ಲಿ ನಿಲ್ಲುತ್ತೇನೆ. ಕೆ. ಎಚ್. ಮುನಿಯಪ್ಪ ನನ್ನನ್ನು ಬೇಡ ಅಂತಿದ್ದಾರೆ. ಮುನಿಯಪ್ಪ ಅವರಿಗೆ ಯಾವ ಹಳ್ಳಿಯಲ್ಲಿ ಯಾವ ಲೀಡರ್ ಅಂತ ಗೊತ್ತಿಲ್ಲ. ನಾನು ಅವರ ಪರವಾಗಿ ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಲ್ಲಿ ಕೆಲಸ ಮಾಡಿದ್ದೇನೆ" ಎಂದರು.
"ಇನ್ನು ಮೂರು ದಿನಗಳಲ್ಲಿ ಕೆ. ಎಚ್. ಮುನಿಯಪ್ಪ ಅವರನ್ನು ಭೇಟಿ ಮಾಡುತ್ತೇನೆ. ಕಾಂಗ್ರೆಸ್ಗೆ ಬೇಡ ಅಂತ ಈಗಾಗಲೇ ಮಾಜಿ ಸಿಎಂ ಸಿದ್ದರಾಮಯ್ಯ, ಡಿ. ಕೆ. ಶಿವಕುಮಾರ್ ಹಾಗೂ ಕೆ. ಎಚ್. ಮುನಿಯಪ್ಪ ಹೇಳಿಕೆ ನೀಡಿದ್ದಾರೆ" ಎಂದು ವರ್ತೂರು ಪ್ರಕಾಶ್ ತಿಳಿಸಿದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications