ಕೋಲಾರ; ಶಾಲಾ ಆವರಣದಲ್ಲಿ ಮದ್ಯ ಸೇವನೆ, ಜೂಜಾಟ
ಕೋಲಾರ, ಜೂನ್ 16; ಕೋವಿಡ್ ಕಾರಣದಿಂದಾಗಿ ಶಾಲೆಗಳು ಬಂದ್ ಆಗಿವೆ. ಶಾಲೆಯ ಆವರಣದಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಾಸ್ತೇನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆ ಆವರಣದಲ್ಲಿ ಕಂಡುಬಂದಿದೆ.
ಗ್ರಾಮದ ಕೆಲವು ಜನರು ಶಾಲೆಯ ಆವರಣದಲ್ಲಿ ಬೆಟ್ಟಿಂಗ್ ಆಡುವುದು. ಮದ್ಯ ಸೇವಿಸುವುದು, ಧೂಮಪಾನ ಮಾಡುವುದು ನಿರಂತರವಾಗಿ ನಡೆಯುತ್ತಿದೆ. ಹುಣಸೆ ಬೀಜಗಳಿಂದ ಆಡುವ ಒಂಟಿ ಜೋಡಿ ಆಟದಲ್ಲಿಯೂ ತೊಡಗಿರುವ ವಿಡಿಯೋ ವೈರಲ್ ಆಗಿದದೆ.
ಶ್ರೀನಿವಾಸಪುರ ತಾಲೂಕಿನಲ್ಲಿ ಜೂಜಾಟ, ಕೋಳಿಪಂದ್ಯಾಟಗಳು ಮಿತಿಮೀರಿವೆ. ಇಲ್ಲಿನ ಪೊಲೀಸರ ಕುಮ್ಮಕ್ಕಿನಿಂದಲೇ ಧಂದೆಕೋರರು ರಾಜಾರೋಷವಾಗಿ ಆಟ ಆಡಿಸುತ್ತಿದ್ದಾರೆ ಎಂದು ಸಹ ಜನರು ಆರೋಪಿಸುತ್ತಿದ್ದಾರೆ.

"ಗ್ರಾಮಗಳಲ್ಲಿ ಜನರು ಜೂಜಾಟ ಆಡುವ ವೇಳೆ ಬಂಧಿಸುವ ಪೊಲೀಸರು ಲಕ್ಷಾಂತರ ರೂಪಾಯಿ ಹಣವನ್ನು ಬೆಟ್ಟಿಂಗ್ಗೆ ಇಟ್ಟು ಜೂಜಾಟದ ಅಡ್ಡಗಳಿಗೆ ರಕ್ಷಣೆ ನೀಡುತ್ತಿದ್ದಾರೆ" ಎಂದು ಮಾಜಿ ಸ್ಪೀಕರ್, ಸ್ಥಳೀಯ ಶಾಸಕ ರಮೇಶ್ ಕುಮಾರ್ ಕೆಲವು ದಿನಗಳ ಹಿಂದೆ ಆರೋಪಿಸಿದ್ದರು.
ಇದೀಗ ಶಾಲಾ ಆವರಣದಲ್ಲೂ ಕಾನೂನು ಬಾಹಿರ ಚಟುವಟಿಕೆ ನಡೆಯುತ್ತಿದ್ದರೂ ಘಟನೆಗೆ ತಮಗೆ ಸಂಬಂಧವೇ ಇಲ್ಲ ಎಂದು ಪೊಲೀಸರು ಕೈಕಟ್ಟಿ ಕುಳಿತಿದ್ದಾರೆ. ಶ್ರೀನಿವಾಸಪುರ ತಾಲೂಕಿನ ಗೌನಿಪಲ್ಲಿ ಮತ್ತು ರಾಯಲ್ಪಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಚಟುವಟಿಕೆಗಳು ಎಗ್ಗಿಲ್ಲದೆ ನಡೆಯುತ್ತಿವೆ.
ಹಿರಿಯ ಅಧಿಕಾರಿಗಳು ಸಹ ಇದಕ್ಕೆ ಬೇಷರತ್ ಆಗಿ ಬೆಂಬಲಿಸಿದ್ದಾರೆ. ಶ್ರೀನಿವಾಸಪುರದಲ್ಲಿ ಜೂಜಾಟ, ಕೋಳಿಪಂದ್ಯಗಳ ಜೊತೆಗೆ ಪೊಲೀಸರು ರಸ್ತೆಗಳಲ್ಲಿ ವಾಹನ ಅಡ್ಡಗಟ್ಟಿ ಹಣ ವಸೂಲಿ ಮಾಡುವ ಪ್ರಕರಣ ಹೆಚ್ಚುತ್ತಿವೆ.
ಕೋಲಾರ ಜಿಲ್ಲೆಗೆ ನೂತನ ಎಸ್ಪಿಯಾಗಿ ಆಗಮಿಸಿರುವ ಡೆಕ್ಕಾ ಕಿಶೋರ್ ಬಾಬು ಇಂತಹ ಅಕ್ರಮಗಳಿಗೆ ಕಡಿವಾಣ ಹಾಕಬೇಕು ಎಂದು ಜನರು ಆಗ್ರಹಿಸಿದ್ದಾರೆ.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications