Get Updates
Get notified of breaking news, exclusive insights, and must-see stories!

ಕೋಲಾರ ನೀರಿನ ಸಮಸ್ಯೆ ನೀಗಿಸುವೆ: ಜನಾರ್ದನ ರೆಡ್ಡಿ ಭರವಸೆ

ಕೋಲಾರ, ಮೇ 5: ''ಕೋಲಾರ ಜಿಲ್ಲೆ ಎದುರಿಸುತ್ತಿರುವ ನೀರಿನ ಸಮಸ್ಯೆಯ ಸ್ಪಷ್ಟ ಅರಿವು ನನಗಿದ್ದು, ಶೀಘ್ರದಲ್ಲೇ ಈ ಜಿಲ್ಲೆಯ ನೀರಿನ ಸಮಸ್ಯೆಯನ್ನು ನೀಗಿಸುತ್ತೇನೆ'' ಎಂದು ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ಗಾಲಿ ಜನಾರ್ಧನ ರೆಡ್ಡಿ ಭರವಸೆ ನೀಡಿದ್ದಾರೆ.

ವಾಸವಿ ಜಯಂತಿ ಸಮಾರಂಭದ ಪ್ರಯುಕ್ತ ಮೇ 5ರಂದು ಕೋಲಾರಕ್ಕೆ ಆಗಮಿಸಿದ್ದ ರೆಡ್ಡಿ, ಅಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು.

Janardhan Reddy promises to solve water problem in Kolar

ಮುಂದಿನ ವರ್ಷ ನಡೆಯಲಿರುವ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ ಗೆದ್ದು ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಆಶಿಸಿದ ರೆಡ್ಡಿ, ಸದ್ಯಕ್ಕೆ ರಾಜ್ಯ ಬಿಜೆಪಿಯಲ್ಲಿ ಇರುವ ಭಿನ್ನಮತೀಯತೆ ಶೀಘ್ರದಲ್ಲೇ ನಿವಾರಣೆಯಾಗಲಿದೆ ಎಂಬ ಆಶಾಭಾವ ವ್ಯಕ್ತಪಡಿಸಿದರು.

ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಇರಾದೆ ಇಲ್ಲವೆಂದು ಇದೇ ವೇಳೆ ಸ್ಪಷ್ಟಪಡಿಸಿದ ಅವರು, ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷ ವಹಿಸುವ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸುವುದಾಗಿ ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+