ಬಿಜೆಪಿ ಸೇರುವ ಸುಳಿವು ಕೊಟ್ಟ ಜೆಡಿಎಸ್ ಶಾಸಕ!
ಕೋಲಾರ, ಅಕ್ಟೋಬರ್ 23 : "ರಾಜಕೀಯ ನಿಂತ ನೀರಲ್ಲ. ಯಾರೂ ಅಡ್ಡ ಹಾಕೋಕೆ ಆಗುವುದಿಲ್ಲ. ಲೋಕಸಭಾ ಚುನಾವಣೆಯಲ್ಲಿಯೂ ನಾನು ಬಿಜೆಪಿಗೆ ಬೆಂಬಲ ಸೂಚಿಸಿದ್ದೇನೆ" ಎಂದು ಕೋಲಾರ ಕ್ಷೇತ್ರದ ಜೆಡಿಎಸ್ ಶಾಸಕ ಶ್ರೀನಿವಾಸ ಗೌಡ ಹೇಳಿದರು.
ಬುಧವಾರ ಕೋಲಾರದಲ್ಲಿ ಮಾತನಾಡಿದ ಶಾಸಕ ಶ್ರೀನಿವಾಸ ಗೌಡ ಬಿಜೆಪಿ ಸೇರುವ ಕುರಿತು ಸುಳಿವು ನೀಡಿದರು. ಅಬಕಾರಿ ಸಚಿವ ಎಚ್. ನಾಗೇಶ್ ಉಪಸ್ಥಿತರಿದ್ದ ಕಾರ್ಯಕ್ರಮದಲ್ಲಿಯೇ ಬಿಜೆಪಿ ಪರವಾಗಿ ಮಾತನಾಡಿದರು.
"ನಾಲ್ಕು ಬಾರಿ ನಾಲ್ಕು ಪಕ್ಷದಿಂದ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಮುಂದೆ ಏನಾಗುತ್ತದೆ ಎಂಬುದು ಗೊತ್ತಿಲ್ಲ. ರಾಜಕಾರಣ ಹರಿಯುವ ನೀರಿನಂತೆ. ಯಾರೂ ಅಡ್ಡಿ ಪಡಿಸಲು ಸಾಧ್ಯವಿಲ್ಲ. ಅದು ಹರಿಯುತ್ತಲೇ ಇರುತ್ತದೆ" ಎಂದು ಶ್ರೀನಿವಾಸ ಗೌಡರು ತಿಳಿಸಿದರು.

ಶಾಸಕ ಶ್ರೀನಿವಾಸ ಗೌಡ ಹೇಳಿಕೆ ರಾಜಕೀಯ ವಲಯದಲ್ಲಿ ಅಚ್ಚರಿಗೆ ಕಾರಣವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವಿದ್ದಾಗ, "ಬಿಜೆಪಿಯವರು ನನಗೂ ಹಣದ ಆಮಿಷವೊಡ್ಡಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಒತ್ತಡ ಹಾಕಿದ್ದರು" ಎಂದು ಅವರು ಹೇಳಿಕೆ ಕೊಟ್ಟಿದ್ದರು.
"ಇಬ್ಬರು ಶಾಸಕರು ಮತ್ತು ಮಾಜಿ ಶಾಸಕರೊಬ್ಬರು ಮನಗೆ ಬಂದು ಮುಂಗಡ 5 ಕೋಟಿ ಹಣ ಕೊಟ್ಟಿದ್ದರು. ಬಿಜೆಪಿಯವರು ಕೊಟ್ಟ ಹಣ 2 ತಿಂಗಳು ನನ್ನ ಮನೆಯಲ್ಲಿ ಇತ್ತು. ಎಚ್. ಡಿ. ಕುಮಾರಸ್ವಾಮಿ ಸೂಚನೆ ಮೇರೆಗೆ ಅದನ್ನು ವಾಪಸ್ ಕಳಿಸಿದೆ" ಎಂದು ಹೇಳಿಕೆ ಕೊಟ್ಟು ಚರ್ಚೆ ಹುಟ್ಟು ಹಾಕಿದ್ದರು.
ಆಪರೇಷನ್ ಕಮಲದ ವಿಚಾರ ಮಾತನಾಡಿದ್ದ ಶ್ರೀನಿವಾಸ ಗೌಡ ಯಲಹಂಕದ ಬಿಜೆಪಿ ಶಾಸಕ ಎಸ್. ಆರ್. ವಿಶ್ವನಾಥ್ ವಿರುದ್ಧ ಆರೋಪ ಮಾಡಿದ್ದರು. ಆದ್ದರಿಂದ, ವಿಧಾನಸಭೆಯಲ್ಲಿ ಅವರ ವಿರುದ್ಧ ಹಕ್ಕುಚ್ಯುತಿ ಮಂಡನೆ ಮಾಡಲು ವಿಶ್ವನಾಥ್ ಮುಂದಾಗಿದ್ದರು.
2018ರ ಚುನಾವಣೆಯಲ್ಲಿ ಕೆ. ಶ್ರೀನಿವಾಸ ಗೌಡ 82, 788 ಮತಗಳನ್ನು ಪಡೆದು ಕಾಂಗ್ರೆಸ್ನ ಸೈಯದ್ ಜಮೀರ್ ಪಾಶ ವಿರುದ್ಧ ಜಯಗಳಿಸಿದ್ದಾರೆ.
-
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್












Click it and Unblock the Notifications