ಶಾಸಕ ವರ್ತೂರು ಪ್ರಕಾಶ್ ವಿರುದ್ಧ ಜೆಡಿಎಸ್ ಪ್ರತಿಭಟನೆ
ಗಂಗಾ ಕಲ್ಯಾಣ ಯೋಜನೆಯ ಸವಲತ್ತುಗಳನ್ನು ಫಲಾನುಭವಿಗಳಿಗೆ ತಮ್ಮ ನಿವಾಸದಲ್ಲಿ ವಿತರಿಸುತ್ತಿದ್ದ ಕಾರಣಕ್ಕಾಗಿ ಪ್ರತಿಭಟನೆ
ಕೋಲಾರ, ಫೆಬ್ರವರಿ 28: ಗಂಗಾ ಕಲ್ಯಾಣ ಯೋಜನೆಯ ಸೌವಲತ್ತುಗಳನ್ನು ತಮ್ಮ ಮನೆಯಲ್ಲಿ ವಿತರಿಸುತ್ತಿದ್ದ ಹಿನ್ನೆಲೆಯಲ್ಲಿ ಶಾಸಕ ವರ್ತೂರು ಪ್ರಕಾಶ್ ವಿರುದ್ಧ ತಾಲೂಕಿನ ಜೆಡಿಎಸ್ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು. ಕೋಲಾರ ನಗರದ ಬೈರೇಗೌಡ ನಗರದಲ್ಲಿರುವ ಅವರ ಮನೆಯ ಮುಂದೆ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಜೆಡಿಎಸ್ ಕಾರ್ಯಕರ್ತರು, ಶಾಸಕರ ನಡೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರಲ್ಲದೆ, ಕ್ಷೇತ್ರದ ದಲಿತ ಫಲಾನುಭವಿಗಳನ್ನು ತಮ್ಮ ಮನೆ ಬಾಗಿಲ ಮುಂದೆ ನಿಲ್ಲಿಸುತ್ತಿದ್ದಾರೆಂದು ಬೇಸರ ವ್ಯಕ್ತಪಡಿಸಿದರು.

ಶಾಸಕರ ಹಾಗೂ ಜೆಡಿಎಸ್ ಕಾಯ೯ಕತ೯ರ ನಡುವೆ ಮಾತಿನ ಚಕಮಕಿ ನಡೆಯಿತು. ಆದರೆ, ಈ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲವೆಂದು ಮೂಲಗಳು ತಿಳಿಸಿವೆ.












Click it and Unblock the Notifications