ಅಂಧನ ಬಳಿ ತೆರಳಿ ಸಮಸ್ಯೆ ಆಲಿಸಿದ ನ್ಯಾಯಾಧೀಶರ ನಡೆಗೆ ಮೆಚ್ಚುಗೆ
ಕೋಲಾರ, ನವೆಂಬರ್ 07: ನ್ಯಾಯಾಲಯದ ಬಳಿ ಕುಳಿತಿದ್ದ ಅಂಧನ ಬಳಿ ತೆರಳಿ ಕಾನೂನು ಸೇವೆಯ ಭರವಸೆ ನೀಡಿರುವ ನ್ಯಾಯಾಧೀಶರ ನಡೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮುಳಬಾಗಿಲಿನ ತಾತಿಪಾಳ್ಯದ ದೇವರಾಜಾಚಾರಿ ಅಂಧನಾಗಿದ್ದು, ಉಚಿತ ಕಾನೂನು ಸೇವೆಗೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇದೇ ವಿಷಯವಾಗಿ ನ್ಯಾಯಾಲಯದ ಬಳಿ ಕುಳಿತಿದ್ದರು. ಅವರನ್ನು ಕಂಡ ನ್ಯಾಯಾಧೀಶ ಹಾಜಿ ಹುಸೇನ್ ಸಾಬ ಯಾದವಾಡ ಅವರು ಅಂಧನ ಬಳಿ ತೆರಳಿದ್ದಾರೆ. ಅವರೊಂದಿಗೆ ಕೂತು ಚರ್ಚೆ ನಡೆಸಿ ಕಾನೂನು ಸೇವಾ ಸಮಿತಿ ಮೂಲಕ ಪರಿಹಾರ ಕಲ್ಪಿಸುವ ಭರವಸೆ ನೀಡಿದ್ದಾರೆ.

ಮುಳಬಾಗಿಲು ಪಟ್ಟಣ ನಿವಾಸಿ ದೇವರಾಜಾಚಾರ್ ತಮ್ಮ ಮನೆ ಸಂಬಂಧಿತ ವಿಚಾರವಾಗಿ ಕಾನೂನು ಸೇವಾ ಸಮಿತಿಗೆ ಮನವಿ ಸಲ್ಲಿಸಿದ್ದರು. ಅದೇ ವಿಷಯವಾಗಿ ನ್ಯಾಯಾಲಯಕ್ಕೆ ಆಗಮಿಸಿದ್ದರು. ಕೊರೊನಾದಿಂದಾಗಿ ನಗರದ ನ್ಯಾಯಾಲಯದಲ್ಲಿ ಸಾರ್ವಜನಿಕರಿಗೆ, ಕಕ್ಷಿದಾರರಿಗೆ ಪ್ರವೇಶವಿಲ್ಲವಾಗಿದ್ದು, ಹೊರಗೆ ಕುಳಿತಿದ್ದರು. ಈ ವಿಷಯ ನ್ಯಾಯಾಧೀಶರ ಗಮನಕ್ಕೆ ಬಂದಿದ್ದು, ತಾವೇ ದೇವರಾಜಾಚಾರ್ ಬಳಿ ಬಂದು, ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ. ವಿವಾದವಿರುವ ಎರಡೂ ಕಡೆಯವರನ್ನು ಕರೆಸಿ ಸಮಸ್ಯೆ ಇತ್ಯರ್ಥಪಡಿಸುವುದಾಗಿ ತಿಳಿಸಿದ್ದಾರೆ.
ನ್ಯಾಯಾಧೀಶರ ಈ ನಡೆಗೆ ನ್ಯಾಯಾಲಯ ಸಿಬ್ಬಂದಿ, ದೇವರಾಜಾಚಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Recommended Video
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications