ಮಕ್ಕಳ ಸಾವು, ಕೋಲಾರ ಆಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ
ಕೋಲಾರ, ಆಗಸ್ಟ್ 24 : ಕೋಲಾರ ಜಿಲ್ಲಾ ಆಸ್ಪತ್ರೆಯಲ್ಲಿ ಮಕ್ಕಳ ಸರಣಿ ಸಾವಿನ ಬಗ್ಗೆ ವಾಸ್ತವ ಅರಿಯಲು ಕರ್ನಾಟಕ ಬಿಜೆಪಿ ಸತ್ಯ ಶೋಧನಾ ತಂಡ ಗುರುವಾರ ಸಂಜೆ ಆಸ್ಪತ್ರೆಗೆ ಭೇಟಿ ನೀಡಲಿದೆ.
ಶಾಸಕ ಹಾಗೂ ಬಿಜೆಪಿಯ ವಕ್ತಾರ ಸುರೇಶ್ ಕುಮಾರ್ ಅವರ ನೇತೃತ್ವದ ತಂಡ ಕೋಲಾರ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ವಾಸ್ತವ ಸ್ಥಿತಿ ಹಾಗೂ ಮಕ್ಕಳ ಸಾವಿಗೆ ಕಾರಣದ ಬಗ್ಗೆ ಅಧ್ಯಯನ ನಡೆಸಲಿದೆ.

ಕೋಲಾರ ಜಿಲ್ಲೆಯಲ್ಲಿ ಕಳೆದ ಮೂರು ತಿಂಗಳಲ್ಲಿ 33 ಮಕ್ಕಳು ಸಾವನ್ನಪ್ಪಿವೆ. ಈ ಕುರಿತು ಮೂರು ದಿನಗಳೊಳಗೆ ಸವಿವರ ಮಾಹಿತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.












Click it and Unblock the Notifications