ಬಂಗಾರಪೇಟೆಯಲ್ಲಿ ಮೋದಿ : ಕಾಂಗ್ರೆಸ್ 6 ರೋಗದಿಂದ ಬಳಲುತ್ತಿದೆ!
ಕೋಲಾರ, ಮೇ 09 : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕರ್ನಾಟಕದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ. ಮೋದಿ ಅವರು ಬುಧವಾರ 4 ಸಮಾವೇಶಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಬುಧವಾರ ಬಂಗಾರಪೇಟೆ, ಚಿಕ್ಕಮಗಳೂರು, ಬೆಳಗಾವಿ ಮತ್ತು ಬೀದರ್ನಲ್ಲಿ ಚುನಾವಣಾ ಪ್ರಚಾರವನ್ನು ನರೇಂದ್ರ ಮೋದಿ ನಡೆಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಅವರು ಬಂಗಾರಪೇಟೆಗೆ ಆಗಮಿಸಿದ್ದು, ಚುನಾವಣಾ ಪ್ರಚಾರ ಭಾಷಣವನ್ನು ಆರಂಭಿಸಿದ್ದಾರೆ.

ಮೋದಿ ಭಾಷಣದ ಮುಖ್ಯಾಂಶಗಳು
* ಈ ಬಾರಿಯ ಕರ್ನಾಟಕದ ಚುನಾವಣೆ ರಾಜ್ಯದ ಯುವ ಜನಾಂಗದ ಭವಿಷ್ಯವನ್ನು ನಿರ್ಧರಿಸಲಿದೆ. ಕಾಂಗ್ರೆಸ್ ಪಕ್ಷದ ಹಣೆ ಬರಹ ಹಲವು ಚುನಾವಣೆಗಳಲ್ಲಿ ಸಾಬೀತಾಗಿದೆ. ಆದ್ದರಿಂದ, ಜನರು ಪಕ್ಷವನ್ನು ತಿರಸ್ಕರಿಸಲಿದ್ದಾರೆ.
* ಮಧ್ಯಪ್ರದೇಶ, ರಾಜಸ್ಥಾನ, ಉತ್ತರ ಪ್ರದೇಶ, ತ್ರಿಪುರ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಏನಾಯಿತು?. ಮೇ 15ರಂದು ಕರ್ನಾಟಕದಲ್ಲಿ ಅದೇ ಆಗಲಿದೆ. ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ.
* ಕಾಂಗ್ರೆಸ್ ಪಕ್ಷ 6 ರೋಗಗಳಿಂದ ಬಳಲುತ್ತಿದೆ, ಇದರಿಂದಾಗಿ ಕಾಂಗ್ರೆಸ್ ಪಕ್ಷ ಅವನತಿಯತ್ತ ಸಾಗುತ್ತಿದೆ
1. ಕಾಂಗ್ರೆಸ್ ಸಂಸ್ಕೃತಿ
2. ಕೋಮುವಾದ
3. ಜಾತೀಯತೆ
4. ಕ್ರೈಂ
5.ಭ್ರಷ್ಟಾಚಾರ
6. ಗುತ್ತಿಗೆದಾರಿಕೆ
* ದೆಹಲಿಯಲ್ಲಿ 10 ವರ್ಷ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದರು. ಆದರೆ, ಅವರ ರಿಮೋಟ್ ಕಂಟ್ರೋಲ್ 10 ಜನಪಥದಲ್ಲಿತ್ತು.
* ಕೇಂದ್ರದಲ್ಲಿ 4 ವರ್ಷದಿಂದ ಬಿಜೆಪಿ ಸರಕಾರವಿದೆ. ನಮ್ಮದೂ ರಿಮೋಟ್ ಇದೆ. ನಮ್ಮ ರಿಮೋಟ್ ದೇಶದ 125 ಕೋಟಿ ಜನರು. ಜನತಾ ಜನಾರ್ದನ ನಮ್ಮ ಹೈಕಮಾಂಡ್.
* ಕೆಲವರು ಚಿನ್ನದ ಚಮಚವನ್ನು ಬಾಯಿಯಲ್ಲಿ ಇಟ್ಟುಕೊಂಡು ಹುಟ್ಟಿದ್ದಾರೆ. ಆದರೆ, ಅದು ಕೋಲಾರದ ಮಣ್ಣಿನಿಂದ ಮಾಡಿದ ಚಿನ್ನದ್ದಲ್ಲ, ಭ್ರಷ್ಟಾಚಾರದ ಹಣದಿಂದ ಮಾಡಿದ್ದು.
* ಚಿನ್ನದ ಚಮಚವನ್ನು ಬಾಯಲ್ಲಿ ಇಟ್ಟುಕೊಂಡು ಹುಟ್ಟಿದ ಜನರಿಗೆ ಬಡಜನರ ಕಷ್ಟ ತಿಳಿದಿಲ್ಲ. 60 ವರ್ಷ ಅಧಿಕಾರ ನಡೆಸಿದರೂ ಗ್ರಾಮದ ಜನರಿಗೆ ಶೌಚಾಲಯವನ್ನು ನಿರ್ಮಿಸಲು ಸಾಧ್ಯವಾಗಿಲ್ಲ. ಸರ್ಕಾರ ನಾಲ್ಕು ವರ್ಷದಲ್ಲಿ ಗ್ರಾಮದಲ್ಲಿ ಶೌಚಾಲಯದ ಕ್ರಾಂತಿ ಮಾಡಿದರೆ ಇವರು ಮೋದಿ ಶ್ರೀಮಂತರಿಗಾಗಿ ಕೆಲಸ ಮಾಡುತ್ತಾರೆ ಎಂದು ಆರೋಪ ಮಾಡುತ್ತಾರೆ.
* ತನ್ನನ್ನು ತಾನು ಪ್ರಧಾನಿ ಎಂದು ಘೋಷಣೆ ಮಾಡಿಕೊಳ್ಳುವುದು ಅಹಂಕಾರ. ಈ ನಾಮಧಾರಿಗಳ ಅಹಂಕಾರ ಎಷ್ಟಿದೆ ಎಂದರೆ ಆಕಾಶದಷ್ಟು ಎತ್ತರಕ್ಕೆ ಏರಿದೆ. ಇದು ಪ್ರಜಾಪ್ರಭುತ್ವಕ್ಕೆ ಮಾಡುವ ಅವಮಾನವಾಗಿದೆ.
ಕಾಂಗ್ರೆಸ್ ಪಕ್ಷ "ದಿಲ್ ವಾಲಿ" ಅಲ್ಲ "ಡೀಲ್ ವಾಲಿ". ಡೀಲ್ ಗಳಿಂದಲೇ ಪಕ್ಷ ನಡೆಯುತ್ತಿದೆ.
— BJP Karnataka (@BJP4Karnataka) May 9, 2018
ಕಾಂಗ್ರೆಸ್ ಪಕ್ಷದಲ್ಲಿ ಗುತ್ತಿಗೆದಾರಾರಿಗೆ ಟಿಕೆಟ್ ಗಳನ್ನು ಮಾರಾಟ ಮಾಡಲಾಗಿದೆಯೆಂದು ಆ ಪಕ್ಷದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿಯವರೇ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟಪಡಿಸಿದ್ದಾರೆ. : PM Modi#BJP4BetterKarnataka
* 2019ರಲ್ಲಿ ಮೋದಿಯನ್ನು ತೊಲಗಿಸಲು ದೊಡ್ಡ ಮೈತ್ರಿ ನಡೆಯುತ್ತಿದೆ. ಈ ಮೈತ್ರಿಯಲ್ಲಿ ಹಲವು ದೊಡ್ಡ ದೊಡ್ಡ ನಾಯಕರು ಇದ್ದಾರೆ. ಆದರೆ, ಮೈತ್ರಿಕೂಟದ ಎಲ್ಲಾ ನಾಯಕರನ್ನು ಕತ್ತಲಲ್ಲಿ ನಿಲ್ಲಿಸಿ ತನ್ನನ್ನು ತಾನು ಪ್ರಧಾನಿ ಎಂದು ಘೋಷಣೆ ಮಾಡಿಕೊಳ್ಳಲಾಗುತ್ತಿದೆ.
* ಮೊದಲು ಗ್ರಾಮ ಪಂಚಾಯಿತಿಯಿಂದ ಸಂಸತ್ ತನಕ ಕಾಂಗ್ರೆಸ್ ಪಕ್ಷದ ಧ್ವಜ ಹಾರಾಡುತ್ತಿತ್ತು. ಆದರೆ, ಪ್ರಜಾಪ್ರಭುತ್ವಕ್ಕೆ ಅವರು ಗೌರವ ನೀಡಲಿಲ್ಲ. ಆದ್ದರಿಂದ, ಈಗ 40 ಸೀಟಿಗೆ ಬಂದು ಕುಳಿತಿದ್ದಾರೆ. ಇದು ಜನರು ಮಾಡಿದ ಆಶೀರ್ವಾದ.
* ಕಾಂಗ್ರೆಸ್ ಬಡವರ ಪಕ್ಷವಲ್ಲ, ಶ್ರಮಿಕರ ಪಕ್ಷವಲ್ಲ, ದಿಲ್ ವಾಲಾ (ಹೃದಯವಂತರ) ಪಕ್ಷವಲ್ಲಿ. ಅದು ಡೀಲ್ ಮಾಡುವವರು ಪಕ್ಷ. ಎಲ್ಲರದರಲ್ಲೂ ಅದು ಡೀಲ್ ಮಾಡುತ್ತದೆ.
* ಕಾಂಗ್ರೆಸ್ ಪಕ್ಷದಲ್ಲಿ ಚುನಾವಣೆ ಟಿಕೆಟ್ ಅನ್ನು ಹಂಚುವುದಿಲ್ಲ, ಮಾರುತ್ತಾರೆ. ಈ ಮಾತನ್ನು ನಾನು ಹೇಳುತ್ತಿಲ್ಲ. ಚಿಕ್ಕಬಳ್ಳಾಪುರದಿಂದ ಸಂಸತ್ತಿಗೆ ಆಯ್ಕೆಯಾಗಿ ಬಂದ ಹಿರಿಯ ನಾಯಕ ವೀರಪ್ಪ ಮೊಯ್ಲಿ ಹೇಳಿದ್ದಾರೆ.
* ಸಾಮಾಜಿಕ ಜಾಲತಾಣದಲ್ಲಿ ವೀರಪ್ಪ ಮೊಯ್ಲಿ ಅವರು ಈ ಮಾತನ್ನು ಹೇಳಿದ್ದರು. ಕಾಂಗ್ರೆಸ್ ಟಿಕೆಟ್ ಮಾರಾಟವಾಗುತ್ತಿದೆ. ವೀರಪ್ಪ ಮೊಯ್ಲಿ ಅವರು ಸಾಮಾನ್ಯರಲ್ಲ. ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರು. ಅವರೇ ಇದನ್ನು ಹೇಳಿದ್ದಾರೆ.
* ಕಾಂಗ್ರೆಸ್ ಪಕ್ಷ ನಿಜಲಿಂಗಪ್ಪ, ದೇವರಾಜ್ ಅರಸ್ ಅವರನ್ನು ಹೇಗೆ ನಡೆಸಿಕೊಂಡಿದೆ ಎಂಬುದು ಎಲ್ಲರಿಗೂ ತಿಳಿಸಿದೆ. ಈಗ ವೀರಪ್ಪ ಮೊಯ್ಲಿ ಅವರ ಸರದಿ, ಮೋದಿ ಅವರ ಬಾಯಿಗೆ ಈಗ ಟೇಪ್ ಹಾಕಲಾಗಿದೆ. ಅವರಿಗೆ ಮಹಾಕಾವ್ಯ ಬರೆಯುವ ಕಾರ್ಯವನ್ನು ನೀಡಲಾಗಿದೆ.
* ಕಾಂಗ್ರೆಸ್ ಪಕ್ಷದ ಸಚಿವರ ಮನೆ ಮೇಲೆ ನಡೆದ ದಾಳಿಯ ಸಂದರ್ಭದಲ್ಲಿ ಸಿಕ್ಕ ಸಂಪತ್ತು ಈ ರಾಜ್ಯದ ರೈತರದ್ದು, ಸಾಮಾನ್ಯ ಜನರದ್ದು. ಇದು ರಾಜ್ಯದ ಪ್ರತಿಯೊಬ್ಬ ಜನರಿಗೂ ತಿಳಿದಿದೆ.
* ಕೋಲಾರದ ಹೆಸರು K ಯಿಂದ ಆರಂಭವಾಗುತ್ತದೆ. ಹೌದು 'ಕೆ' ಎಂದರೆ ಕಿಂಗ್. ಕೋಲಾರ ಎಂದರೆ ರಾಜ
* ಕೋಲಾರ ಎಂದರೆ...
ಕಿಂಗ್ ಆಫ್ ಮ್ಯಾಂಗೋ (ಮಾವಿನ ಹಣ್ಣಿನ ರಾಜ)
ಕಿಂಗ್ ಆಫ್ ಮೆಟಲ್ (ಚಿನ್ನದ ರಾಜ)
ಕಿಂಗ್ ಆಫ್ ಸಿಲ್ಕ್ ( ರೇಷ್ಮೆಯ ರಾಜ)
ಕಿಂಗ್ ಆಫ್ ಮಿಲ್ಕ್ (ಹಾಲಿನ ರಾಜ)
* ಕೋಲಾರದ ಜನರು ಕುಡಿಯುವ ನೀರು ಕೇಳಲು ಮುಖ್ಯಮಂತ್ರಿಗಳ ಬಳಿ ಹೋದರು. ಅವರ ಮೇಲೆ ಲಾಠಿ ಚಾರ್ಜ್ ಮಾಡಲಾಯಿತು, ಈ ಮೂಲಕ ಸರ್ಕಾರ ರೈತರಿಗೆ ಅವಮಾನ ಮಾಡಿತು.
ಯಡಿಯೂರಪ್ಪ ಅವರ ಸರ್ಕಾರ ಬಂದ ತಕ್ಷಣವೇ ಇಲ್ಲಿನ ಎಲ್ಲ ನೀರಾವರಿಯ ಯೋಜನೆಗಳನ್ನು ಶೀಘ್ರ ಗತಿಯಲ್ಲಿ ಕೈಗೆತ್ತಿಕೊಂಡು ನೀರಾವರಿ ಸಮಸ್ಯೆಗಳನ್ನು ಸಂಪೂರ್ಣ ನಿರ್ಮೂಲನೆ ಮಾಡಲಾಗುವುದು. ಕೇಂದ್ರದಿಂದ ಪೂರ್ಣ ಸಹಾಯ ಒದಗಿಸುವ ಭರವಸೆಯನ್ನು ನಾನು ನಿಮಗೆ ನೀಡುತ್ತೇನೆ : PM Modi #BJP4BetterKarnataka
— BJP Karnataka (@BJP4Karnataka) May 9, 2018
* ಕಾಂಗ್ರೆಸ್ ವಂಶಪಾರಂಪರ್ಯ ವ್ಯವಸ್ಥೆಯನ್ನು ಉಳಿಸಿಕೊಳ್ಳಲು ಹೊಸ ವ್ಯವಸ್ಥೆಯನ್ನು ಮಾಡಿಕೊಂಡಿದೆ. ಅದು ಸುಳ್ಳು ಹೇಳುವುದು, ಪದೇ ಪದೇ ಸುಳ್ಳು ಹೇಳುವುದು, ಎಲ್ಲೆಲ್ಲಿ ಸಾಧ್ಯವೋ ಅಲ್ಲಲ್ಲಿ ಸುಳ್ಳು ಹೇಳುವುದು.
* ಕಾಂಗ್ರೆಸ್ ಪಕ್ಷ ಮೂರು 'ಪಿ'ಗಳಿಗೆ ಸೀಮಿತವಾಗಿದೆ. ಅವರ ಪ್ರಕಾರ ಪಿಪಿಪಿ ಎಂದರೆ (ಪಂಜಾಬ್, ಪಾಂಡಿಚೇರಿ, ಪರಿವಾರ).
* ಹೊಸ ನಾಯಕರು ಬೆಳೆದರೆ ಇವರು ಕುಟುಂಬ ಬೆಳೆಯುವುದಿಲ್ಲ ಎಂಬ ಆತಂಕ ಕಾಂಗ್ರೆಸ್ ಪಕ್ಷದ ನಾಯಕರಲ್ಲಿದೆ. ಆದ್ದರಿಂದ, ಇಲ್ಲಿನ ನಾಯಕರು ತಮ್ಮ ಕುಟುಂಬದವರಿಗೆ ಟಿಕೆಟ್ ಕೊಡಿಸಿದ್ದಾರೆ.
ಬಂಧುಗಳೇ, ಮಹಾರಾಷ್ಟ್ರದಲ್ಲಿ ಕಿತ್ತಳೆ ಜಾಸ್ತಿ ಉತ್ಪಾದನೆ ಆಗುತ್ತದೆ. ನಾನು ಕೋಕೊ ಕೋಲಾ ಕಂಪನಿ ಜೊತೆ ರೈತರನ್ನು ಟೈ ಆಪ್ ಮಾಡಿದ್ದೇನೆ. ಆ ಜ್ಯೂಸಿನಲ್ಲಿ 5% ನೈಜ ಹಣ್ಣಿನ ರಸ ಇರುತ್ತದೆ. ಇದರಿಂದ ರೈತರಿಗೆ ನೇರವಾಗಿ ಹಣ ಸಿಗುತ್ತದೆ : PM Modi#BJP4BetterKarnataka
— BJP Karnataka (@BJP4Karnataka) May 9, 2018
* ಕಾಂಗ್ರೆಸ್ ಪಕ್ಷ ಮೀಸಲಾತಿ ವಿಚಾರದಲ್ಲಿ ದಲಿತರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ಪಕ್ಷವು ಹೇಳುವ ಸುಳ್ಳುಗಳನ್ನು ನಂಬಬೇಡಿ. ದಲಿತಪರ ಕಾರ್ಯಗಳಿಗೆ ಬಿಜೆಪಿ ನೀಡಿದಷ್ಟು ಕೊಡುಗೆಯನ್ನು ಬೇರೆ ಯಾವ ಪಕ್ಷವೂ ನೀಡಿಲ್ಲ.
* ದಲಿತರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿ ಮಾಡುವುದಾಗಿ ಕಾಂಗ್ರೆಸ್ ಕಳೆದ ಚುನಾವಣೆಯಲ್ಲಿ ಹೇಳಿತ್ತು. ಆದರೆ, ಚುನಾವಣೆಯಲ್ಲಿ ಗೆಲ್ಲುತ್ತಿದ್ದಂತೆ ಅವರನ್ನು ಬದಿಗೆ ಸರಿಸಲಾಯಿತು.
* ನಾನು ಯಡಿಯೂರಪ್ಪ ಮತ್ತು ಇತರ ಬಿಜೆಪಿ ನಾಯಕರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಬಡವರಿಗೆ, ದಲಿತರಿಗೆ, ರೈತರಿಗೆ ಉತ್ತಮ ಭರವಸೆಯನ್ನು ನೀಡಿದ್ದೇವೆ. ಇದನ್ನು ಮತದಾರರ ಮನೆ-ಮನೆಗೆ ತಲುಪಿಸಿ ಯಡಿಯೂರಪ್ಪ ನೇತೃತ್ವದ ಸರ್ಕಾರವನ್ನು ರಚಿಸಲು ಸಹಕರಿಸಿ.
-
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ












Click it and Unblock the Notifications