ವಿಸ್ಟ್ರಾನ್ ಕಾರ್ಖಾನೆಯಲ್ಲಿ ಕಾರ್ಮಿಕರ ಹಕ್ಕುಗಳ ಉಲ್ಲಂಘನೆಯಾಗಿದೆ: ಕರ್ನಾಟಕ ಕಾರ್ಮಿಕ ಇಲಾಖೆ
ಬೆಂಗಳೂರು, ಡಿಸೆಂಬರ್ 16: ಬೆಂಗಳೂರು ಸಮೀಪದ, ಕೋಲಾರ ಜಿಲ್ಲೆಯ ನರಸಾಪುರದಲ್ಲಿ ವಿಸ್ಟ್ರಾನ್ ಕಂಪನಿಯಲ್ಲಿ ಕಾರ್ಮಿಕರ ದಾಳಿ ಕುರಿತಾಗಿ ಕರ್ನಾಟಕ ಕಾರ್ಮಿಕ ಇಲಾಖೆ ಪ್ರತಿಕ್ರಿಯಿಸಿದ್ದು, ಕಂಪನಿಯಲ್ಲಿ ಕಾರ್ಮಿಕರ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಹೇಳಿದೆ.
ಕಾರ್ಮಿಕ ಅಧಿಕಾರಿಗಳ ತಂಡವು ಉದ್ಯೋಗಿಗಳನ್ನು ಒದಗಿಸುವ ಏಜೆನ್ಸಿಗಳು ಮತ್ತು ಉದ್ಯೋಗಿಗಳೊಂದಿಗೆ ಸಂವಹನ ನಡೆಸಿದ ಬಳಿಕ ಕಾರ್ಮಿಕರು ಕೆಲಸ ಮಾಡಿದ ದಿನಗಳ ಸಂಖ್ಯೆಗೆ ಹೋಲಿಸಿದರೆ ಪಾವತಿ ಮಾಡಿರುವ ಅಂಕಿ-ಅಂಶಗಳ ನಡುವೆ ವ್ಯತ್ಯಾಸವಿದೆ ಎಂದು ಬಹಿರಂಗಪಡಿಸಿದೆ.
ಕಾರ್ಖಾನೆಯ ನಿರ್ವಹಣೆಯನ್ನು ಪರಿಶೀಲಿಸಿದ ನಂತರ ಕಾರ್ಮಿಕರ ಸಮಸ್ಯೆಗಳನ್ನು ಕಂಪನಿಯು ಬಗೆಹರಿಸಿಲ್ಲ ಎಂಬುದು ಸಾಭೀತಾಗಿದೆ. ಕಾರ್ಮಿಕರು ವೇತನ ವಿಳಂಬದ ಕುರಿತು ಮಾನವ ಸಂಪನ್ಮೂಲದ ಗಮನಕ್ಕೆ ತಂದರೂ ಯಾವುದೇ ವ್ಯತ್ಯಾಸವಾಗಿಲ್ಲ ಎಂದು ಹೇಳಿದೆ.

ರಾಜ್ಯ ಕಾರ್ಮಿಕ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ಕಾರ್ಖಾನೆಗಳು, ಬಾಯ್ಲರ್ಗಳು, ಕೈಗಾರಿಕಾ ಸುರಕ್ಷತೆ ಮತ್ತು ಆರೋಗ್ಯ ಇಲಾಖೆಯ ನಿರ್ದೇಶಕರು ಸಿದ್ಧಪಡಿಸಿದ ಪ್ರಾಥಮಿಕ ವರದಿಯು, ಗುತ್ತಿಗೆ ಕಾರ್ಮಿಕರಿಗೆ ಸಂಬಳ ಪಾವತಿಸುವಲ್ಲಿನ ವ್ಯತ್ಯಾಸಗಳನ್ನು ಗಮನಸೆಳೆದಿದೆ,. ಹೆಚ್ಚುವರಿ ಕೆಲಸ ಮಾಡಿಸಿಕೊಂಡು ಗುತ್ತಿಗೆ ಸಿಬ್ಬಂದಿಗೆ ಪಾವತಿಸದಿರುವುದು, ಇಲಾಖೆಯ ಅನುಮತಿಯಿಲ್ಲದೆ ಕೆಲಸ ಮಾಡುವುದು ಮತ್ತು ಕಾರ್ಮಿಕ ಕಾನೂನುಗಳನ್ನು ಉಲ್ಲಂಘಿಸಿ ಮಹಿಳಾ ಕಾರ್ಮಿಕರನ್ನು ಅಧಿಕಾವಧಿ ಕೆಲಸದಲ್ಲಿ ತೊಡಗಿಸುವುದು ನಡೆದಿದೆ.
"ನವೆಂಬರ್ 2020ರ ವೇತನದೊಂದಿಗೆ ವ್ಯತ್ಯಾಸವನ್ನು ಪಾವತಿಸಲಾಗಿಲ್ಲ. ಮನೆಗೆಲಸದ ಸಿಬ್ಬಂದಿಯ ವೇತನವನ್ನು (ಅಧಿಕಾವಧಿ) ಇಲ್ಲಿಯವರೆಗೆ ಪಾವತಿಸಲಾಗಿಲ್ಲ ಮತ್ತು ವಾರದಲ್ಲಿ ಆರು ದಿನಗಳವರೆಗೆ ದಿನಕ್ಕೆ 12 ಗಂಟೆಗಳ ಕಾಲ ಕೆಲಸ ಮಾಡಬೇಕಾಗುತ್ತದೆ" ಎಂದು ವರದಿಯಲ್ಲಿ ಉಲ್ಲೇಖಿಸಿದೆ.
'' ಅಗತ್ಯ ಅನುಮತಿಗಳನ್ನು ತೆಗೆದುಕೊಳ್ಳದೆ ಕಂಪನಿಯು 13,500 ಕಾರ್ಮಿಕರನ್ನು ನೇಮಿಸಿಕೊಂಡಿದೆ. ಬೃಹತ್ ಕಟ್ಟಡಗಳು ಮತ್ತು ಇತರ ಸೌಲಭ್ಯಗಳ ಹೆಚ್ಚುವರಿ ನಿರ್ಮಾಣವನ್ನು ಪ್ರಾರಂಭಿಸಲಾಗಿದೆ ಮತ್ತು ಕಾರ್ಖಾನೆ ಕಟ್ಟಡವನ್ನು ವಿಸ್ತರಿಸಲು ಇಲಾಖೆಯ ಹಿಂದಿನ ಅನುಮತಿಯನ್ನು ಪಡೆಯದೆ ಕೆಲಸ ಪ್ರಗತಿಯಲ್ಲಿದೆ ಎಂದು ಕಾರ್ಮಿಕ ಇಲಾಖೆ ಹೇಳಿದೆ.
-
ದ್ವಿತೀಯ ಪಿಯುಸಿ 'ಕಲಾ' ವಿಭಾಗದಲ್ಲಿ ಶೇ.72.86 ರಷ್ಟು ಫಲಿತಾಂಶ: ಟಾಪರ್ಸ್ ಲಿಸ್ಟ್ ಇಲ್ಲಿದೆ -
2nd PUC ಫಲಿತಾಂಶದಲ್ಲಿ ಶೇ. 13ರಷ್ಟು ಏರಿಕೆ; ಕಲಿಕೆಯಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ಫಸ್ಟ್: ಮಧು ಬಂಗಾರಪ್ಪ -
Viral: ಕಚೇರಿಗೆ ಬಂದ ಪೋಷಕರು, ಮ್ಯಾನೇಜರ್ ಬಳಿ ಮಗಳ ವರ್ತನೆ ಬಗ್ಗೆ ವಿಚಾರಣೆ: ಶಾಲಾ ದಿನಗಳನ್ನು ನೆನಪಿಸಿದ ವಿಡಿಯೋ -
2025ರ ದ್ವಿತೀಯ PUC ಪರೀಕ್ಷೆಯಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದಲ್ಲಿ ಮಿಂಚಿದ ಪ್ರತಿಭೆಗಳು; ಇಲ್ಲಿದೆ ಟಾಪರ್ಗಳ ಪಟ್ಟಿ -
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
ಹೈಟೆಕ್ ಬೆಂಗಳೂರು ಬಿಸಿನೆಸ್ ಕಾರಿಡಾರ್: 65ಮೀ ವಿಸ್ತರಣೆ, ಮೆಟ್ರೋ-ಸೈಕಲ್ ಟ್ರ್ಯಾಕ್ಗಳೂ ಲಭ್ಯ; ವಿನ್ಯಾಸ ವಿವರ -
Horoscope April 8: ಕೆಲವರಿಗೆ ಯಶಸ್ಸು, ಕೆಲವರಿಗೆ ಜಾಗ್ರತೆ ಸೂಚಿಸುವ ದಿನ ಭವಿಷ್ಯ -
Bengaluru Road: ಬನ್ನೇರುಘಟ್ಟ ರಸ್ತೆ ಪ್ರಯಾಣಿಕರಿಗೆ ಗುಡ್ನ್ಯೂಸ್: ಸಮಗ್ರ ಅಭಿವೃದ್ಧಿಗೆ ಜಿಬಿಎ ಮಾಸ್ಟರ್ ಪ್ಲಾನ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Iran 10 Demands: ಕದನ ವಿರಾಮಕ್ಕೆ ಇರಾನ್ ವಿಧಿಸಿರುವ 10 ಷರತ್ತುಗಳ ವಿವರ ಇಲ್ಲಿದೆ, ನ್ಯೂಕ್ಲಿಯರ್ ಬೇಡ ಎಂದಿದ್ಯಾಕೆ -
Karnataka Rain: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಈ ಭಾಗಗಳಲ್ಲಿ ಭಾರೀ ಮಳೆ: ಐಎಂಡಿ












Click it and Unblock the Notifications