ಕೆಜಿಎಫ್ ಶಾಸಕಿ ರೂಪಕಲಾ ಮೇಲೆ ಕಲ್ಲಿನಿಂದ ಹಲ್ಲೆ ಯತ್ನ: ಸ್ಥಳದಲ್ಲಿ ಬಿಗುವಿನ ವಾತಾವರಣ
ಕೋಲಾರ, ಅಕ್ಟೋಬರ್ 14: ಹಲವು ದಿನಗಳಿಂದ ವಿವಾದಕ್ಕೆ ಕಾರಣವಾಗಿದ್ದ ರಸ್ತೆ ಅಗಲೀಕರಣ ವೇಳೆ ಹೈ ಡ್ರಾಮಾ ನಡೆದಿದ್ದು ಕೆಜಿಎಫ್ ಶಾಸಕಿ ರೂಪಕಲಾ ಮೇಲೆ ಕಲ್ಲಿನಿಂದ ಹೊಡೆಯಲು ಮುಂದಾದ ಘಟನೆ ಕೋಲಾರದಲ್ಲಿ ನಡೆದಿದೆ.
ಒತ್ತುವರಿ ತೆರವುಗೊಳಿಸುವ ವೇಳೆ ವ್ಯಕ್ತಿಯೊರ್ವ ಹಲ್ಲೆಗೆ ಮುಂದಾದ ಪರಿಣಾಮ ಭಾರಿ ಅನಾಹುತವೊಂದು ತಪ್ಪಿದೆ.
ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ಬೇತಮಂಗಲದಲ್ಲಿ ಈ ಘಟನೆ ನಡೆದಿದ್ದು, ಪೊಲೀಸರ ಸಮಯ ಪ್ರಜ್ಞೆಯಿಂದ ಬಾರಿ ಅನಾಹುತ ತಪ್ಪಿದೆ.

ಕೆಜಿಎಫ್ ಶಾಸಕಿ ರೂಪಕಲಾ ನೇತೃತ್ವದಲ್ಲಿ ತೆರವು ಕಾರ್ಯಾಚರಣೆ ಮಾಡಲಾಗುತಿತ್ತು, ಶಾಸಕಿ ಹಾಗೂ ಜೆಸಿಬಿಗೆ ಕಲ್ಲು ಹೊಡೆಯಲು ಮುಂದಾದ ವ್ಯಕ್ತಿಯನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವಿವಾದಕ್ಕೆ ಕಾರಣವಾಗಿದ್ದ ರಸ್ತೆಯನ್ನ ತೆರವುಗೊಳಿಸಲು ಇಂದು ಶಾಸಕಿ ರೂಪ ರವರು ಫೀಲ್ಡಿಗಿಳಿದಿದ್ರು, ತೆರವುಗೊಳಿಸುತ್ತಿದ್ದ ವೇಳೆ ಕುಪಿತಗೊಂಡ ವ್ಯಕ್ತಿ ಯೊರ್ವ ಶಾಸಕಿ ಹಾಗೂ ಜೆಸಿಬಿ ಮೇಲೆ ಕಲ್ಲು ತೂರಲು ಮುಂದಾದ, ಈ ವೇಳೆ ಆತನನ್ನ ವಶಕ್ಕೆ ಪಡೆದ ಪೊಲೀಸರು ಜರುಗಬಹುದಾದ ಬಾರಿ ಅನಾಹುತವನ್ನ ತಪ್ಪಿಸಿದ್ದಾರೆ.
ಇನ್ನೂ ಬೇತಮಂಗಲದಿಂದ ವಿ.ಕೋಟೆಗೆ ತೆರಳುವ ಹಳೆ ಮದ್ರಾಸ್ ರಸ್ತೆ ಕಳೆದ ಹಲವು ವರ್ಷಗಳಿಂದ ತೆರವು ಕಾರ್ಯಚರಣೆ ಮಾಡದೆ ನೆನೆಗುದಿಗೆ ಬಿದ್ದಿತ್ತು.

ಪರಿಣಾಮ ಶಾಸಕಿ ಇಂದು ತಾವೇ ಮುಂದೆ ನಿಂತು ತೆರವು ಮಾಡಲು ಮುಂದಾಗಿದ್ರು, ಪರಿಣಾಮ ತೆರವು ಕಾರ್ಯಾಚರಣೆ ವೇಳೆ ಸಖತ್ ಹೈ ಡ್ರಾಮಾ ನಿರ್ಮಾಣವಾಯಿತು.
ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ರಸ್ತೆ ಕಾಮಗಾರಿಯನ್ನ ಮಾಡಲು ಖುದ್ದು ಶಾಸಕಿ ರೂಪ ನೇತೃತ್ವದಲ್ಲಿ ಕಾರ್ಯಾಚರಣೆಗಿಳಿದ ಪಿಡಬ್ಲ್ಯೂಡಿ ಅಧಿಕಾರಿಗಳು ತೆರವುಗೊಳಿಸಿದ್ದಾರೆ.
ಸದ್ಯ ಶಾಸಕಿ ಸಮ್ಮುಖದಲ್ಲಿ ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣವಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
ಈ ವೇಳೆ ಕಲ್ಲು ತೂರಲು ಮುಂದಾದ ವ್ಯಕ್ತಿಯನ್ನ ವಶಕ್ಕೆ ಪಡೆದಿರುವ ಬೇತಮಂಗಲ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications