ವಿಶೇಷ ವರದಿ: ಕೋಲಾರ ಎಪಿಎಂಸಿ ಅನ್ಲಾಕ್; ರೈತರಲ್ಲಿ ಮಂದಹಾಸ
ಕೋಲಾರ, ಜೂನ್ 22: ಕಳೆದ ಒಂದೂವರೆ ತಿಂಗಳಿನಿಂದ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಲಾಕ್ಡೌನ್ ಆಗಿದ್ದ ಕೋಲಾರ ಜಿಲ್ಲೆಯಲ್ಲಿ ಇದೀಗ ಅನ್ಲಾಕ್ ಆಗಿದೆ. ಇದರ ಬೆನ್ನಲ್ಲೇ ಪಾತಾಳಕ್ಕೆ ಕುಸಿದು ಬಿದ್ದಿದ್ದ ಟೊಮೆಟೊ ಬೆಲೆ ಈಗ ಕೊಂಚ ಚೇತರಿಕೆ ಕಾಣುತ್ತಿದೆ. ಸದ್ಯ ಟೊಮೆಟೊ ವ್ಯಾಪಾರಸ್ಥರು, ಖರೀದಿದಾರರು ಮಾರುಕಟ್ಟೆಯತ್ತ ಮುಖ ಮಾಡಿದ್ದು, ರೈತರು ಮತ್ತು ಮಂಡಿ ಮಾಲೀಕರ ಆಶಾಭಾವನೆಗೆ ಕಾರಣವಾಗಿದೆ. ಈ ಕುರಿತು ವರದಿ ಇಲ್ಲಿದೆ ನೋಡಿ...

ದರ ಕುಸಿತವಾಗಿ ರೈತರು ಕಂಗಾಲಾಗಿದ್ದರು
ಮಾರುಕಟ್ಟೆಯ ಆವರಣದಲ್ಲಿ ಎಲ್ಲಿ ನೋಡಿದರೂ ಟೊಮೆಟೊ... ಟೊಮೆಟೊ. ಯಾವಾಗಲೂ ಗಿಜಿಗುಟ್ಟುತ್ತಿರುವ ಮಾರುಕಟ್ಟೆ ಆವರಣ. ಮಾರುಕಟ್ಟೆ ಸುತ್ತಮುತ್ತ ಬಂದು ಬೀಡು ಬಿಟ್ಟಿರುವ ಹೊರ ರಾಜ್ಯಗಳ ದೊಡ್ಡ ದೊಡ್ಡ ಟ್ರಕ್ಗಳು. ಇವೆಲ್ಲಾ ದೃಶ್ಯಗಳು ಕಂಡು ಬಂದಿದ್ದು ಕೋಲಾರದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ. ಏಷ್ಯಾದಲ್ಲೇ ಎರಡನೇ ದೊಡ್ಡ ಟೊಮೆಟೊ ಮಾರುಕಟ್ಟೆ ಅನ್ನುವ ಹೆಗ್ಗಳಿಕೆ ಹೊಂದಿರುವ ಕೋಲಾರದ ಈ ಎಪಿಎಂಸಿ ಮಾರುಕಟ್ಟೆ, ಕೊರೊನಾ ಎರಡನೇ ಅಲೆ ಪರಿಣಾಮದಿಂದ ಕಳೆದ ಒಂದೂವರೆ ತಿಂಗಳಿನಿಂದ ಸರಿಯಾದ ವ್ಯಾಪಾರ ವಹಿವಾಟು ಇಲ್ಲದೆ ಸೊರಗಿತ್ತು. ಟೊಮೆಟೊಗೆ ಸರಿಯಾದ ಬೆಲೆ ಇಲ್ಲದೆ ಮಾರುಕಟ್ಟೆಯಲ್ಲಿ ದರ ಕುಸಿತವಾಗಿ ರೈತರು ಕಂಗಾಲಾಗಿದ್ದರು.

ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖ
ಆದರೆ, ರಾಜ್ಯ ಸೇರಿದಂತೆ ಕೋಲಾರ ಜಿಲ್ಲೆಯಲ್ಲಿ ಎರಡ್ಮೂರು ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗಿದೆ. ರಾಜ್ಯದಲ್ಲಿ ಅನ್ಲಾಕ್ ಪ್ರಕ್ರಿಯೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಹೊರ ರಾಜ್ಯಗಳಿಂದ ವ್ಯಾಪಾರಸ್ಥರು, ಖರೀದಿದಾರರು ಕೋಲಾರದ ಎಪಿಎಂಸಿ ಮಾರುಕಟ್ಟೆಗೆ ಲಗ್ಗೆಯಿಟ್ಟಿದ್ದಾರೆ. ಗುಜರಾತ್, ತಮಿಳುನಾಡು, ಮಹಾರಾಷ್ಟ್ರ, ಜಾರ್ಖಂಡ್, ದೆಹಲಿ, ಉತ್ತರಪ್ರದೇಶ, ಬಾಂಗ್ಲಾದೇಶ ಸೇರಿದಂತೆ ಹಲವು ರಾಜ್ಯಗಳಿಂದ ವ್ಯಾಪಾರಸ್ಥರು ಟೊಮೆಟೊ ಖರೀದಿಗೆ ಬಂದಿಳಿದಿದ್ದರ ಪರಿಣಾಮ ಪಾತಾಳಕ್ಕೆ ಕುಸಿದು ಬಿದ್ದಿದ್ದ ಟೊಮೆಟೊ ಬೆಲೆಯಲ್ಲಿ ಚೇತರಿಕೆ ಕಂಡಿದೆ.

ಟೊಮೆಟೊ ಆವಕ ಕೂಡಾ ಹೆಚ್ಚಾಗಿದೆ
ಕೋಲಾರ ಎಪಿಎಂಸಿ ಮಾರುಕಟ್ಟೆಯಲ್ಲಿ ಮೇ, ಜೂನ್ ತಿಂಗಳಲ್ಲಿ ಟೊಮೆಟೊ ಸೀಸನ್ ಆರಂಭವಾಗುತ್ತದೆ. ಈ ಎರಡು ತಿಂಗಳಲ್ಲಿ ಭಾರೀ ಪ್ರಮಾಣದ ಟೊಮೆಟೊ ಆವಕ ಕೂಡಾ ಹೆಚ್ಚಾಗಿದೆ. ಆದರೆ, ಲಾಕ್ಡೌನ್ ಇದ್ದ ಪರಿಣಾಮ ವ್ಯಾಪಾರಸ್ಥರು ಬಂದಿರಲಿಲ್ಲ. ಈಗ ಸ್ವಲ್ಪ ಅನ್ಲಾಕ್ ಆಗುತ್ತಿರುವ ಹಿನ್ನೆಲೆಯಲ್ಲಿ ವ್ಯಾಪಾರಸ್ಥರು ಮಾರುಕಟ್ಟೆಯತ್ತ ಬಂದಿದ್ದಾರೆ. ಮಾರುಕಟ್ಟೆ ಸುತ್ತಲೂ ಹೊರ ರಾಜ್ಯದ ಲಾರಿಗಳಿಂದ ಟ್ರಾಫಿಕ್ ಜಾಮ್ ಆಗುವ ಮಟ್ಟಿಗೆ ದಟ್ಟಣೆ ಶುರುವಾಗಿದೆ.
Recommended Video

ದೇಶದಲ್ಲಿ ಅನ್ಲಾಕ್ ಪ್ರಕ್ರಿಯೆ ಶುರು
ಕಳೆದ ಒಂದು ತಿಂಗಳಿನಿಂದ 15- 20 ರೂಪಾಯಿ ಬೆಲೆಯಿದ್ದ 15 ಕೆಜಿ ಬಾಕ್ಸ್ ಟೊಮೆಟೊ ಬೆಲೆ ಈಗ 80 ರಿಂದ 100 ರೂಪಾಯಿ ತಲುಪಿದೆ. ಸದ್ಯ ಚೇತರಿಕೆ ಕಂಡಿರುವ ಟೊಮೆಟೊ, ದೇಶದಲ್ಲಿ ಅನ್ಲಾಕ್ ಪ್ರಕ್ರಿಯೆ ಶುರುವಾದರೆ, ಟೊಮೆಟೊ ದರ ಏರುವುದರಲ್ಲಿ ಅನುಮಾನವಿಲ್ಲ. ಇಲ್ಲವಾದರೆ ರೈತರು, ವ್ಯಾಪಾರಿಗಳ ಪರಿಸ್ಥಿತಿ ಹೀನಾಯವಾಗುತ್ತದೆ ಎಂದು ವಹಿವಾಟುದಾರರು ಹೇಳುತ್ತಾರೆ. ಒಟ್ಟಿನಲ್ಲಿ, ಕೊರೊನಾ ಸೋಂಕಿನ ಕಾವು ಇಳಿಮುಖವಾಗುತ್ತಿದ್ದಂತೆ ವ್ಯಾಪಾರ ವಹಿವಾಟುಗಳು ಚೇತರಿಕೆ ಕಾಣುತ್ತಿದೆ. ಕೋಲಾರ ಜಿಲ್ಲೆಯ ಟೊಮೆಟೊ ಬೆಳೆಗಾರರು ಸ್ವಲ್ಪಮಟ್ಟಿಗಾದರೂ ನಷ್ಟದಿಂದ ಪಾರಾಗಲು ಅವಕಾಶ ಸಿಕ್ಕಂತಾಗಿದೆ.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications