ಪಂಚಾಯಿತಿ ಫೈಟ್; ಅಧ್ಯಕ್ಷ ಚುನಾವಣೆ ಭದ್ರತೆಗೆ ಬೌನ್ಸರ್ಗಳು!
ಕೋಲಾರ, ಫೆಬ್ರವರಿ 09; ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಗೆ ಸದಸ್ಯರೊಬ್ಬರು ಬೌನ್ಸರ್ಗಳ ಭದ್ರತೆಯಲ್ಲಿ ಆಗಮಿಸಿದರು. ಮಾಜಿ ಸಚಿವ ವರ್ತೂರು ಪ್ರಕಾಶ್ ಬಣಕ್ಕೆ ಬೆಂಬಲ ಸೂಚಿಸಿದ್ದ ಸದಸ್ಯರನ್ನು ಬೌನ್ಸರ್ಗಳು ಚುನಾವಣೆ ಕೇಂದ್ರಕ್ಕೆ ಕರೆತಂದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಗೆ ಬೌನ್ಸರ್ಗಳನ್ನು ಕರೆತಂದ ಘಟನೆ ಕೋಲಾರ ತಾಲೂಕಿನ ನರಸಾಪುರದಲ್ಲಿ ನಡೆದಿದೆ. ಸೋಮವಾರ ನರಸಾಪುರ ಗ್ರಾಮ ಪಂಚಾಯತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆ ನಡೆಯಿತು.
ಅಧ್ಯಕ್ಷ ಸ್ಥಾನವನ್ನು ಪಡೆಯಲು ಜೆಡಿಎಸ್ ಹಾಗೂ ಮಾಜಿ ಶಾಸಕ ವರ್ತೂರು ಪ್ರಕಾಶ್ ಬೆಂಬಲಿಗರ ನಡುವೆ ಪ್ರಬಲ ಪೈಪೋಟಿ ಇತ್ತು. ವರ್ತೂರು ಪ್ರಕಾಶ್ ಬಣಕ್ಕೆ ಬೆಂಬಲ ಸೂಚಿಸಿದ್ದ ಸದಸ್ಯರನ್ನು ಸೆಳೆಯಲು ವಿರೋಧಿ ತಂಡದ ಹತ್ತಾರು ಜನರು ಸೇರಿದ್ದರು.

ಈ ಹಿನ್ನಲೆಯಲ್ಲಿ ಬೌನ್ಸರ್ಗಳು ಸದಸ್ಯರನ್ನು ಚುನಾವಣಾ ಕೇಂದ್ರಕ್ಕೆ ವಾಹನದಲ್ಲಿ ಭದ್ರತೆಯಲ್ಲಿ ಕರೆತಂದರು. ಬೌನ್ಸರ್ಗಳು ಚುನಾವಣೆ ಕೇಂದ್ರಕ್ಕೆ ಹೋಗಲು ಪ್ರಯತ್ನ ನಡೆಸಿದರು. ಆದರೆ, ಪೊಲೀಸರು ಅನುಮತಿ ನೀಡಲಿಲ್ಲ.
ಈ ಸಮಯದಲ್ಲಿ ಗ್ರಾಮ ಪಂಚಾಯಿತಿ ಮುಂದೆ ಬಿಗುವಿನ ವಾತಾವರಣ ನಿರ್ಮಾಣವಾಯಿತು. ಆಗ ಪೋಲಿಸರು ಬೌನ್ಸರ್ಗಳ ಮೇಲೆ ಲಾಠಿ ಬೀಸಲು ಮುಂದಾದರು.
ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ವರ್ತೂರು ಪ್ರಕಾಶ್ ಬೆಂಬಲಿಗರಾದ ಸುಮಿತ್ರಮ್ಮ ಆಧ್ಯಕ್ಷರಾಗಿ ಮತ್ತು ಸುಮನ್ ಚಂದ್ರು ಉಪಾಧ್ಯಕ್ಷರಾಗಿ ಆಯ್ಕೆಯಾದರು.
ಬೌನ್ಸರ್ಗಳು, ಪೊಲೀಸರು ಹೀಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಆಯ್ಕೆಗೆ ನಡೆದ ಕಸರತ್ತನ್ನು ನೋಡಿ ಗ್ರಾಮದ ಜನರು ಸಂತಸಗೊಂಡರು.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications