ಕೋಲಾರ: ಹೊಟ್ಟೆಯಲ್ಲಿ ಮಗು ಸತ್ತು ಎರಡು ದಿನವಾದರೂ ಗರ್ಭಿಣಿಯ ಶಸ್ತ್ರಚಿಕಿತ್ಸೆ ಇಲ್ಲ
ಕೋಲಾರ, ಜುಲೈ 5: ಕಳೆದೆರಡು ದಿನಗಳಿಂದ ಹೊಟ್ಟೆಯಲ್ಲಿರುವ ಮಗು ಬದುಕಿರದಿದ್ದರೂ 6 ತಿಂಗಳ ಗರ್ಭಿಣಿ ನರಳಾಡುತ್ತಿರುವ ಘಟನೆ ಕೋಲಾರದ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.
ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಕಿರುವಾರ ಗ್ರಾಮದ ನಿವಾಸಿ ಸೋಮಶೇಖರ್ ಪತ್ನಿ ಸೌಮ್ಯ ಆರು ತಿಂಗಳ ಗರ್ಭಿಣಿಯಾಗಿದ್ದಾರೆ. ಆದರೆ ಮಗುವಿನ ಚಲನವಲನ ತಿಳಿಯದಿದಕ್ಕೆ ಅನುಮಾನಗೊಂಡು ನಾಲ್ಕು ದಿನಗಳ ಹಿಂದೆ ಶ್ರೀನಿವಾಸಪುರ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದರು.
ಆದರೆ ವೈದ್ಯರು ನೀವು ಕೂಡಲೇ ಕೋಲಾರದ ಎಸ್.ಎನ್.ಆರ್ ಜಿಲ್ಲಾಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ತೆರಳುವಂತೆ ಸೂಚಿಸಿದ್ದರು. ಕೂಡಲೇ ಜಿಲ್ಲಾಸ್ಪತ್ರೆಗೆ ಬಂದ ಸೌಮ್ಯಳನ್ನು ವೈದ್ಯರು ಪರೀಕ್ಷೆ ಮಾಡಿ ಮಗು ಸಾವನ್ನಪ್ಪಿರುವುದನ್ನು ಖಚಿತಪಡಿಸಿದ್ದರು.

ವಿಪರ್ಯಾಸವೆಂದರೆ ಹೊಟ್ಟೆಯಲ್ಲಿ ಮಗು ಇನ್ನು ಹಾಗೆ ಇದೆ ಅನ್ನುವುದು. ಆಶ್ಚರ್ಯ ಆದರೂ ಸತ್ಯ, ಏಕೆಂದರೆ ಸ್ವತಃ ಸೌಮ್ಯಳೇ ವೈದ್ಯರ ವಿರುದ್ಧ ಆರೋಪ ಮಾಡುತ್ತಿದ್ದಾಳೆ.
ಸದ್ಯ ಮಗುವನ್ನು ಹೊರ ತೆಗೆಯಲು ಇಂಜೆಕ್ಷನ್ ನೀಡಿದ್ದಾರಂತೆ. ಈಗಾಗಲೇ ಕೊರೊನಾ ವೈರಸ್ ಪರೀಕ್ಷೆಗಾಗಿ ವೈದ್ಯರು ಗರ್ಭಿಣಿಯ ಗಂಟಲು ದ್ರವ ಸೇರಿ ರಕ್ತ ಮಾದರಿ ಸಹ ಕಲೆ ಹಾಕಲಾಗಿದೆ. ಫಲಿತಾಂಶ ಬಂದ ನಂತರ ಶಸ್ತ್ರ ಚಿಕಿತ್ಸೆ ಮಾಡುವುದಾಗಿ ವೈದ್ಯರು ಎಂದು ಸೌಮ್ಯ ಕುಟುಂಬಸ್ಥರಿಗೆ ತಿಳಿಸಿದ್ದಾರೆ..
ಮಗು ಸಾವನ್ನಪ್ಪಿದ ಬಳಿಕ ಹೀಗೆ ತಡ ಮಾಡುವ ಮೂಲಕ ವೈದ್ಯರು ನಿರ್ಲಕ್ಷ್ಯ ಮಾಡುತ್ತಿರುವುದು ಪೋಷಕರ ಕೆಂಗಣ್ಣಿಗೆ ಗುರಿಯಾಗಿದೆ. ಕಳೆದೆರಡು ದಿನಗಳಿಂದ ಆಸ್ಪತ್ರೆಯಲ್ಲೆ ಗರ್ಭಿಣಿ ಹಾಗೂ ಕುಟುಂಬಸ್ಥರು ಪರದಾಡುತ್ತಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications