ನಾನು ಒಕ್ಕಲಿಗರ ವಿರೋಧಿ ಎಂದು ಸುಳ್ಳು ಆರೋಪ: ಕೋಲಾರ ಸಂಸದ
ಕೋಲಾರ, ಜೂನ್ 10: ಒಕ್ಕಲಿಗ ಸಮಾಜಕ್ಕೆ ನಾನು ಶತ್ರು ಅಲ್ಲ, ಬಿಜೆಪಿ ಜಿಲ್ಲಾ ಅಧ್ಯಕ್ಷರನ್ನಾಗಿ ಒಕ್ಕಲಿಗ ಸಮುದಾಯದವರನ್ನು ಮಾಡಲು ಫೈಟ್ ಮಾಡಿದವನು ನಾನೇ, ನಾನು ಒಕ್ಕಲಿಗರ ವಿರೊಧಿಯಲ್ಲ ಎಂದು ಕೋಲಾರ ಸಂಸದ ಎಸ್.ಮುನಿಸ್ವಾಮಿ ಹೇಳಿದರು.
Recommended Video
ಒಕ್ಕಲಿಗರು ನನಗೆ ವೋಟ್ ಗಳನ್ನು ಹಾಕಿಲ್ಲ ಎಂದು ಒಕ್ಕಲಿಗ ಮುಖಂಡರ ವಿರುದ್ಧ ಸಂಸದ ಎಸ್.ಮುನಿಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆಂದು ಸ್ಥಳೀಯ ಪತ್ರಿಕೆಯಲ್ಲಿ ವರದಿ ಪ್ರಸಾರದ ಹಿನ್ನೆಲೆಯಲ್ಲಿ, ಸಂಸದ ಎಸ್.ಮುನಿಸ್ವಾಮಿ ಕೋಲಾರದ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ನನ್ನ ವೈಯಕ್ತಿಕ ತೇಜೋವಧೆಗಾಗಿ ಕೆಲ ಕಿಡಿಗೇಡಿಗಳು ನನ್ನ ವಿರುದ್ಧ ಜಾತಿ ನಿಂದನೆಯ ಆರೋಪ ಮಾಡಿದ್ದಾರೆ, ಕಳೆದ ಒಂದು ವರ್ಷದಿಂದ ನಾನು ಯಾವುದೇ ರೀತಿಯ ಜಾತಿ, ಧರ್ಮದ ಬಗ್ಗೆ ನಾನು ಮಾತನಾಡಿಲ್ಲ, ಕೋಲಾರ ಜಿಲ್ಲೆಯ ಅಭಿವೃದ್ಧಿ ಬಗ್ಗೆ ಮಾತನಾಡಿದ್ದೇನೆ ಅಷ್ಟೇ ಎಂದು ಸ್ಪಷ್ಟಪಡಿಸಿದರು.

ಚುನಾವಣೆಯಲ್ಲಿ ಗೆದ್ದಾಗನಿಂದಲೂ ಹಗಲು-ರಾತ್ರಿ ಮನೆ ಮಗನಾಗಿ ದುಡಿಯುತ್ತಿದ್ದು, ಪಕ್ಷಾತೀತವಾಗಿ ಕೆಲಸ ಮಾಡುತ್ತಿದ್ದೇನೆ, ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಕೀಯ ಮಾಡಿಲ್ಲ, ಮಾಡುವುದೂ ಇಲ್ಲವೆಂದರು.
ಬಿಜೆಪಿ ಒಕ್ಕಲಿಗ ಮುಖಂಡ ಮಾಗೇರಿ ನಾರಾಯಣಸ್ವಾಮಿ ಮಾಹಿತಿಯಿಂದ ಸ್ಥಳೀಯ ಪತ್ರಿಕೆ ವರದಿ ಮಾಡಿದೆ, ಆ ವರದಿ ಸತ್ಯಕ್ಕೆ ದೂರವಾದ ವಿಷಯ, ನಾನು ಕೋಲಾರದ ಮನೆ ಮಗ, ಒಂದು ಜಾತಿಗೆ ಮಾತ್ರವಲ್ಲದೆ ಎಲ್ಲರ ಮನೆ ಮಗ ನಾನು ಎಂದು ತಿಳಿಸಿದರು.
ಮಾಗೇರಿ ನಾರಾಯಣಸ್ವಾಮಿ ಇತ್ತೀಚಿಗೆ ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ತಮಗೆ ನೀಡಬೇಕೆಂದು ಮನವಿ ಮಾಡಿದ್ದರು,
ಅಧ್ಯಕ್ಷ ಸ್ಥಾನ ಕೈ ತಪ್ಪುವ ಆತಂಕದಲ್ಲಿ ವಿಪಕ್ಷದವರ ಜೊತೆ ಸೇರಿ ನನ್ನ ವಿರುದ್ಧ ಜಾತಿ ನಿಂದನೆ ಆರೋಪ ಮಾಡಿದ್ದಾರೆಂದು ಅಸಮಾಧಾನ ಹೊರಹಾಕಿದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications