ನಾನು ಒಕ್ಕಲಿಗರ ವಿರೋಧಿ ಎಂದು ಸುಳ್ಳು ಆರೋಪ: ಕೋಲಾರ ಸಂಸದ
ಕೋಲಾರ, ಜೂನ್ 10: ಒಕ್ಕಲಿಗ ಸಮಾಜಕ್ಕೆ ನಾನು ಶತ್ರು ಅಲ್ಲ, ಬಿಜೆಪಿ ಜಿಲ್ಲಾ ಅಧ್ಯಕ್ಷರನ್ನಾಗಿ ಒಕ್ಕಲಿಗ ಸಮುದಾಯದವರನ್ನು ಮಾಡಲು ಫೈಟ್ ಮಾಡಿದವನು ನಾನೇ, ನಾನು ಒಕ್ಕಲಿಗರ ವಿರೊಧಿಯಲ್ಲ ಎಂದು ಕೋಲಾರ ಸಂಸದ ಎಸ್.ಮುನಿಸ್ವಾಮಿ ಹೇಳಿದರು.
Recommended Video
ಒಕ್ಕಲಿಗರು ನನಗೆ ವೋಟ್ ಗಳನ್ನು ಹಾಕಿಲ್ಲ ಎಂದು ಒಕ್ಕಲಿಗ ಮುಖಂಡರ ವಿರುದ್ಧ ಸಂಸದ ಎಸ್.ಮುನಿಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆಂದು ಸ್ಥಳೀಯ ಪತ್ರಿಕೆಯಲ್ಲಿ ವರದಿ ಪ್ರಸಾರದ ಹಿನ್ನೆಲೆಯಲ್ಲಿ, ಸಂಸದ ಎಸ್.ಮುನಿಸ್ವಾಮಿ ಕೋಲಾರದ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ನನ್ನ ವೈಯಕ್ತಿಕ ತೇಜೋವಧೆಗಾಗಿ ಕೆಲ ಕಿಡಿಗೇಡಿಗಳು ನನ್ನ ವಿರುದ್ಧ ಜಾತಿ ನಿಂದನೆಯ ಆರೋಪ ಮಾಡಿದ್ದಾರೆ, ಕಳೆದ ಒಂದು ವರ್ಷದಿಂದ ನಾನು ಯಾವುದೇ ರೀತಿಯ ಜಾತಿ, ಧರ್ಮದ ಬಗ್ಗೆ ನಾನು ಮಾತನಾಡಿಲ್ಲ, ಕೋಲಾರ ಜಿಲ್ಲೆಯ ಅಭಿವೃದ್ಧಿ ಬಗ್ಗೆ ಮಾತನಾಡಿದ್ದೇನೆ ಅಷ್ಟೇ ಎಂದು ಸ್ಪಷ್ಟಪಡಿಸಿದರು.

ಚುನಾವಣೆಯಲ್ಲಿ ಗೆದ್ದಾಗನಿಂದಲೂ ಹಗಲು-ರಾತ್ರಿ ಮನೆ ಮಗನಾಗಿ ದುಡಿಯುತ್ತಿದ್ದು, ಪಕ್ಷಾತೀತವಾಗಿ ಕೆಲಸ ಮಾಡುತ್ತಿದ್ದೇನೆ, ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಕೀಯ ಮಾಡಿಲ್ಲ, ಮಾಡುವುದೂ ಇಲ್ಲವೆಂದರು.
ಬಿಜೆಪಿ ಒಕ್ಕಲಿಗ ಮುಖಂಡ ಮಾಗೇರಿ ನಾರಾಯಣಸ್ವಾಮಿ ಮಾಹಿತಿಯಿಂದ ಸ್ಥಳೀಯ ಪತ್ರಿಕೆ ವರದಿ ಮಾಡಿದೆ, ಆ ವರದಿ ಸತ್ಯಕ್ಕೆ ದೂರವಾದ ವಿಷಯ, ನಾನು ಕೋಲಾರದ ಮನೆ ಮಗ, ಒಂದು ಜಾತಿಗೆ ಮಾತ್ರವಲ್ಲದೆ ಎಲ್ಲರ ಮನೆ ಮಗ ನಾನು ಎಂದು ತಿಳಿಸಿದರು.
ಮಾಗೇರಿ ನಾರಾಯಣಸ್ವಾಮಿ ಇತ್ತೀಚಿಗೆ ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ತಮಗೆ ನೀಡಬೇಕೆಂದು ಮನವಿ ಮಾಡಿದ್ದರು,
ಅಧ್ಯಕ್ಷ ಸ್ಥಾನ ಕೈ ತಪ್ಪುವ ಆತಂಕದಲ್ಲಿ ವಿಪಕ್ಷದವರ ಜೊತೆ ಸೇರಿ ನನ್ನ ವಿರುದ್ಧ ಜಾತಿ ನಿಂದನೆ ಆರೋಪ ಮಾಡಿದ್ದಾರೆಂದು ಅಸಮಾಧಾನ ಹೊರಹಾಕಿದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications