ಕೋಲಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಾನು ಒಕ್ಕಲಿಗರ ವಿರೋಧಿ ಎಂದು ಸುಳ್ಳು ಆರೋಪ: ಕೋಲಾರ ಸಂಸದ

|
Google Oneindia Kannada News

ಕೋಲಾರ, ಜೂನ್ 10: ಒಕ್ಕಲಿಗ ಸಮಾಜಕ್ಕೆ ನಾನು ಶತ್ರು ಅಲ್ಲ, ಬಿಜೆಪಿ ಜಿಲ್ಲಾ ಅಧ್ಯಕ್ಷರನ್ನಾಗಿ ಒಕ್ಕಲಿಗ ಸಮುದಾಯದವರನ್ನು ಮಾಡಲು ಫೈಟ್ ಮಾಡಿದವನು ನಾನೇ, ನಾನು ಒಕ್ಕಲಿಗರ ವಿರೊಧಿಯಲ್ಲ ಎಂದು ಕೋಲಾರ ಸಂಸದ ಎಸ್.ಮುನಿಸ್ವಾಮಿ ಹೇಳಿದರು.

Recommended Video

ಲಾಕ್‌ಡೌನ್ ಸಂದರ್ಭದಲ್ಲಿ ಅತಿ ಹೆಚ್ಚು ಮಾರಾಟವಾದ ಬಿಸ್ಕತ್| Parle G biscuit register Highest sale in Lockdown

ಒಕ್ಕಲಿಗರು ನನಗೆ ವೋಟ್ ಗಳನ್ನು ಹಾಕಿಲ್ಲ ಎಂದು ಒಕ್ಕಲಿಗ ಮುಖಂಡರ ವಿರುದ್ಧ ಸಂಸದ ಎಸ್.ಮುನಿಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆಂದು ಸ್ಥಳೀಯ ಪತ್ರಿಕೆಯಲ್ಲಿ ವರದಿ ಪ್ರಸಾರದ ಹಿನ್ನೆಲೆಯಲ್ಲಿ, ಸಂಸದ ಎಸ್.ಮುನಿಸ್ವಾಮಿ ಕೋಲಾರದ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಕೋಲಾರ: ಎಂಟಿಬಿ ಆ್ಯಂಡ್ ಟೀಮ್ ಪರ ಸಚಿವ, ಸಂಸದರ ಬ್ಯಾಟಿಂಗ್ಕೋಲಾರ: ಎಂಟಿಬಿ ಆ್ಯಂಡ್ ಟೀಮ್ ಪರ ಸಚಿವ, ಸಂಸದರ ಬ್ಯಾಟಿಂಗ್

ನನ್ನ ವೈಯಕ್ತಿಕ ತೇಜೋವಧೆಗಾಗಿ ಕೆಲ ಕಿಡಿಗೇಡಿಗಳು ನನ್ನ ವಿರುದ್ಧ ಜಾತಿ ನಿಂದನೆಯ ಆರೋಪ ಮಾಡಿದ್ದಾರೆ, ಕಳೆದ ಒಂದು ವರ್ಷದಿಂದ ನಾನು ಯಾವುದೇ ರೀತಿಯ ಜಾತಿ, ಧರ್ಮದ ಬಗ್ಗೆ ನಾನು ಮಾತನಾಡಿಲ್ಲ, ಕೋಲಾರ ಜಿಲ್ಲೆಯ ಅಭಿವೃದ್ಧಿ ಬಗ್ಗೆ ಮಾತನಾಡಿದ್ದೇನೆ ಅಷ್ಟೇ ಎಂದು ಸ್ಪಷ್ಟಪಡಿಸಿದರು.

Kolar MP Muniswamy React About Anti-Okkaliga Allegation

ಚುನಾವಣೆಯಲ್ಲಿ ಗೆದ್ದಾಗನಿಂದಲೂ ಹಗಲು-ರಾತ್ರಿ ಮನೆ ಮಗನಾಗಿ ದುಡಿಯುತ್ತಿದ್ದು, ಪಕ್ಷಾತೀತವಾಗಿ ಕೆಲಸ ಮಾಡುತ್ತಿದ್ದೇನೆ, ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಕೀಯ ಮಾಡಿಲ್ಲ, ಮಾಡುವುದೂ ಇಲ್ಲವೆಂದರು.

ಬಿಜೆಪಿ ಒಕ್ಕಲಿಗ ಮುಖಂಡ ಮಾಗೇರಿ ನಾರಾಯಣಸ್ವಾಮಿ ಮಾಹಿತಿಯಿಂದ ಸ್ಥಳೀಯ ಪತ್ರಿಕೆ ವರದಿ ಮಾಡಿದೆ, ಆ ವರದಿ ಸತ್ಯಕ್ಕೆ ದೂರವಾದ ವಿಷಯ, ನಾನು ಕೋಲಾರದ ಮನೆ ಮಗ, ಒಂದು ಜಾತಿಗೆ ಮಾತ್ರವಲ್ಲದೆ ಎಲ್ಲರ ಮನೆ ಮಗ ನಾನು ಎಂದು ತಿಳಿಸಿದರು.

ಮಾಗೇರಿ ನಾರಾಯಣಸ್ವಾಮಿ ಇತ್ತೀಚಿಗೆ ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ತಮಗೆ ನೀಡಬೇಕೆಂದು ಮನವಿ ಮಾಡಿದ್ದರು,
ಅಧ್ಯಕ್ಷ ಸ್ಥಾನ ಕೈ ತಪ್ಪುವ ಆತಂಕದಲ್ಲಿ ವಿಪಕ್ಷದವರ ಜೊತೆ ಸೇರಿ ನನ್ನ ವಿರುದ್ಧ ಜಾತಿ ನಿಂದನೆ ಆರೋಪ ಮಾಡಿದ್ದಾರೆಂದು ಅಸಮಾಧಾನ ಹೊರಹಾಕಿದರು.

English summary
I am not an enemy to the Okkaliga society, said S. Muniswamy, MP for Kolar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X